Monday, December 15, 2025
Monday, December 15, 2025

ಶರಪಂಜರ ಶಿವರಾಂ ನಿಧನ

Date:

ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಂ ನಿಧನ. ಕೆಲದಿನಗಳ ಹಿಂದೆ ಅಪಘಾತದಲ್ಲಿ ಶಿವರಾಂ ಅವರು ಗಾಯಗೊಂಡಿದ್ದರು. ಆಸ್ಪತ್ರೆಯಿಂದ ಮನೆಗೆ ಬಂದ ಬಳಿಕ ಮನೆಯಲ್ಲಿ ಯಾರು ಇಲ್ಲದ ವೇಳೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಹೊಸಕೆರೆಹಳ್ಳಿ ಪ್ರಶಾಂತ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಶಿವರಾಂ ಅವರ ಮೆದುಳಿನಲ್ಲಿ ರಕ್ತಸ್ರಾವವಾಗಿ ಮೆದುಳು ನಿಷ್ಕ್ರಿಯಗೊಂಡ ಪರಿಣಾಮ ಚಿಕಿತ್ಸೆ ಫಲಕಾರಿಯಾಗದೆ ಶಿವರಾಂ ಇಂದು ಮಧ್ಯಾಹ್ನ ನಿಧನರಾಗಿದ್ದಾರೆ.

1938 ರಲ್ಲಿ ಮದ್ರಾಸ್ ಪ್ರಾಂತ್ಯದ ಚೂಡಸಂದ್ರ ಹಳ್ಳಿಯಲ್ಲಿ ಶಿವರಾಂ ಜನಿಸಿದರು. ಗುಬ್ಬಿ ನಾಟಕ ಕಂಪನಿಗೆ ಸೇರಿ ತಮ್ಮ ಬಣ್ಣದ ಬದುಕನ್ನ ಪ್ರಾರಂಭಿಸಿದರು.

ಕನ್ನಡದ ಮೇರು ನಟರಾದ ಡಾ.ರಾಜಕುಮಾರ್, ಡಾ.ವಿಷ್ಣುವರ್ಧನ್, ಪುಟ್ಟಣ್ಣ ಕಣಗಾಲ್, ಅಂಬರೀಶ್ ಅವರೊಂದಿಗೆ ನಟಿಸಿದ್ದರು.

ಅವರು ನಟಿಸಿದ ಶರಪಂಜರ ಚಿತ್ರದ ಅಡಿಗೆಭಟ್ಟನ ಪಾತ್ರ
ಅವರಿಗೆ ಜನಪ್ರಿಯತೆ ತಂದುಕೊಟ್ಟಿತು.
ಅಂದಿನಿಂದ ಶರಪಂಜರ ಶಿವರಾಂ ಎಂದೇ ಖ್ಯಾತರಾಗಿದ್ದರು

ಡಾ.ರಾಜಕುಮಾರ್, ಆರತಿ ನಟಿಸಿದ್ದ ‘ಹೃದಯ ಸಂಗಮ’ ಸಿನಿಮಾವನ್ನು ಶಿವರಾಂ ನಿರ್ದೇಶನ ಮಾಡಿದ್ದರು.

ಶಿವರಾಜ ಅವರು ಕನ್ನಡದಲ್ಲಿ 100ಕ್ಕೂ ಅಧಿಕ ಚಿತ್ರಗಳಲ್ಲಿ ಪೋಷಕ ನಟರಾಗಿ ನಟಿಸಿದ್ದಾರೆ.

ಹಿರಿಯ ನಟ ಶಿವರಾಂ ಅವರ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು, ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Dr. G.S. Shivarudrappa ರಾಷ್ಟ್ರಕವಿ ಜಿ.ಎಸ್.ಎಸ್. ರಚಿತ ಕವನಗಳ ಆನ್ ಲೈನ್ ಗಾಯನ ಸ್ಪರ್ಧೆ

Dr. G.S. Shivarudrappa ಶಿವಮೊಗ್ಗದಲ್ಲಿ ರಾಷ್ಟ್ರಕವಿ ಡಾ. ಜಿ.ಎಸ್ . ಶಿವರುದ್ರಪ್ಪ...

ಸಿಗಂದೂರು ಸೇತುವೆ: ಆತ್ಮಹತ್ಯೆಗೆ ಯತ್ನಿಸಿದಾತನ ಜೀವವುಳಿಸಿದ ಇಂಜಿನಿಯರ್ ಮಾತಿನ ಕೌಶಲ

ಮೈಸೂರಿನ ವ್ಯಕ್ತಿಯೊಬ್ಬರು ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇಂಜಿನಿಯರ್ ಒಬ್ಬರ...

JCI Shimoga ಜೀವನ ಮೌಲ್ಯಗಳನ್ನ ಅಳವಡಿಸಿಕೊಂಡಾಗ ಮಾತ್ರ ಸಾರ್ಥಕ ಬದುಕು- ಮಲ್ಲಿಕಾರ್ಜುನ ಕಾನೂರ್

JCI Shimoga ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಮೌಲ್ಯಯುತ ಜೀವನಶೈಲಿ ಅಗತ್ಯ. ಮಾನವೀಯ...

Chamber of Commerce Shivamogga ಡಿಸೆಂಬರ್ 16. ಧ್ಯಾನದಿಂದ ಒತ್ತಡ ನಿರ್ವಹಣೆ, ಮಾನಸಿಕ ಆರೋಗ್ಯ ರಕ್ಷಣೆ ಬಗ್ಗೆ ಕಾರ್ಯಾಗಾರ

Chamber of Commerce Shivamogga ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ...