Sunday, December 14, 2025
Sunday, December 14, 2025

ಸಾಹಿತ್ಯದಿಂದ ವಿಶ್ವವನ್ನೇ ಗೆಲ್ಲ ಬಹುದು

Date:

ಕನ್ನಡ ಪತ್ರಿಕೆಗಳು, ಮಾಧ್ಯಮಗಳು ಇಂದು ಸಾಹಿತ್ಯಕ್ಕೆ ಆಶ್ರಯ ನೀಡುತ್ತಿವೆ. ಇದು ಉತ್ತಮ ಬೆಳವಣಿಗೆ ಎಂದು ಧರ್ಮಸ್ಥಳ ಧರ್ಮಾದಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ತಿಳಿಸಿದ್ದಾರೆ.
ಖಡ್ಗದಿಂದ ವಿಶ್ವವನ್ನು ಗೆಲ್ಲಲು ಸಾಧ್ಯವಿಲ್ಲ. ಆದರೆ ಸಾಹಿತ್ಯದಿಂದ ಸಾಧ್ಯ. ಪ್ರತಿಯೊಬ್ಬ ಕನ್ನಡಿಗನೂ ಭಾರತೀಯನಾಗಿ, ಶಾಂತಿ ಬಯಸುವ ವಿಶ್ವಮಾನವರಾಗಿ ಬೆಳೆಯಬೇಕು ಎಂದರು.
ಧರ್ಮಸ್ಥಳದಲ್ಲಿ ನಡೆಯುತ್ತಿರುವ ಲಕ್ಷದೀಪೋತ್ಸವದ ಅಂಗವಾಗಿ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ ಸಾಹಿತ್ಯ ಸಮ್ಮೇಳನದ 89ನೇ ಅಧಿವೇಶನವನ್ನು ಉದ್ಘಾಟಿಸಿದರು.
ಅಧ್ಯಕ್ಷತೆ ವಹಿಸಿದ್ದ ಬೆಂಗಳೂರಿನ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ , ಡಾ. ಗಜಾನನ ಶರ್ಮ ಸಾಗರ,ಡಾ.ಪಿ. ಚಂದ್ರಿಕಾ ಚಿತ್ರದುರ್ಗ, ಡಾ.ಕೆ.ಪಿ. ಪುತ್ತರಜು ಬೆಂಗಳೂರು ವಿಶೇಷ ಉಪನ್ಯಾಸ ನೀಡಿದರು. ಎಸ್ ಡಿ ಎಂಇ ಸೊಸೈಟಿ ಉಜಿರೆಯ ಪ್ರಾಜೆಕ್ಟ್ ಡೈರೆಕ್ಟರ್ ಡಿ. ಶ್ರೇಯಸ್ ಕುಮಾರ್ ಉದ್ಘಾಟಕರ ಸನ್ಮಾನ ಪತ್ರ ವಾಚಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕಸಾಪ ಅಧ್ಯಕ್ಷ ಡಾ.ಎಂ.ಪಿ. ಶ್ರೀನಾಥ್ ಅಧ್ಯಕ್ಷರ ಸನ್ಮಾನಪತ್ರ ವಾಚಿಸಿದರು. ಹೇಮಾವತಿ ವೀರೇಂದ್ರ ಹೆಗ್ಗಡೆ, ಡಿ. ಸುರೇಂದ್ರ ಕುಮಾರ್, ಅನಿತಾ ಸುರೇಂದ್ರಕುಮಾರ್, ಡಿ. ರಾಜೇಂದ್ರಕುಮಾರ್, ನೀತಾ ರಾಜೇಂದ್ರಕುಮಾರ್, ಶ್ರದ್ಧಾ ಅಮಿತ್ ಹಾಗೂ ಮತ್ತಿತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...