Saturday, February 7, 2026
Saturday, February 7, 2026

ಸಾವಯವ ಸಿರಿಧಾನ್ಯ ಮೇಳ

Date:

ಅಧಿಕಾರಿಗಳಲ್ಲಿಯೂ ಕೃಷಿ ಬಗ್ಗೆ ಆಸಕ್ತಿ ರೈತೋಪಯೋಗಿ ಭಾವನೆಯಿರುವುದು ಹೆಮ್ಮೆಯ ವಿಷಯವೆಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಶ್ಲಾಘಿಸಿದ್ದಾರೆ. ಬೆಂಗಳೂರಿನಲ್ಲಿ ಕೆಎಎಸ್ ಅಧಿಕಾರಿಗಳ ಸಂಘದಿಂದ ಕೃಷಿ ಇಲಾಖೆ,ಕೃಷಿಕ ಸಮಾಜದ ಸಹಯೋಗದಲ್ಲಿ “ಸಾವಯವ ಮತ್ತು ಸಿರಿಧಾನ್ಯ” ಮೇಳವನ್ನು ಉದ್ಘಾಟಿಸಿ ಮಾತನಾಡಿದರು.

ಬಹುತೇಕ ಕೆಎಎಸ್ ಅಧಿಕಾರಿಗಳೆಲ್ಲ ನಮ್ಮ ಮಣ್ಣಿನ ಮಕ್ಕಳೇ.ಅಧಿಕಾರಿಗಳಲ್ಲಿಯೂ ಕೃಷಿ ಅದರಲ್ಲಿಯೂ ಸಿರಿಧಾನ್ಯ ಸಾವಯವ ಬಗ್ಗೆ ಆಸಕ್ತಿ ಬಂದಿರುವುದು ಸಂತಸದ ವಿಚಾರ‌.ಸಿರಿಧಾನ್ಯದ ಸಿರಿತನ ಹೆಚ್ಚುತ್ತಿದೆ.ಸಿರಿಧಾನ್ಯ ಬಳಕೆ ಆರೋಗ್ಯಕ್ಕೆ ಆಹಾರದ ಸಿದ್ಧ ಔಷಧಿಯಾಗಿದೆ.ಸಾವಯವ ಬಿಟ್ಟು ಹೆಚ್ಚು ರಾಸಾಯನಿಕ ವಸ್ತು ಬಳಕೆಯಿಂದ ರೈತರು ಹೆಚ್ಚು ಆರೋಗ್ಯಕ್ಕೆ ಖರ್ಚು ಮಾಡುವಂತಹ ಸ್ಥಿತಿ ಉದ್ಭವಿಸಿದೆ.ಸಾವಯವ ಕೃಷಿ ಮತ್ತು ನೈಸರ್ಗಿಕ ಕೃಷಿಗೆ ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಮಹತ್ವ ಸಿಗುತ್ತಿದ್ದು,ಸರ್ಕಾರ ಕೂಡ ಈ ಜನರ ಆರೋಗ್ಯದ ಹಿತದೃಷ್ಟಿಯಿಂದ ಬಹುಪಯೋಗಿ ಯೋಜನೆಗಳನ್ನು ಜಾರಿಗೊಳಿಸುತ್ತಿದೆ ಎಂದರು.
ಕೃಷಿ ಖುಷಿಯಾಗಬೇಕು.ಈ ನಿಟ್ಟಿನಲ್ಲಿ ಎಲ್ಲರೂ ಮುಂದಾಗಬೇಕೆಂದರು.

ಮೇಳದಲ್ಲಿ ಕೃಷಿ ತೋಟಗಾರಿಕಾ ವಿಶ್ವವಿದ್ಯಾಲಯಗಳಿಂದ ವಿದ್ಯಾರ್ಥಿನಿಗಳು ಪ್ರದರ್ಶನಕ್ಕಿಟ್ಟ ಸಾವಯವ ಕೋಕಮ್ ಸೇರಿದಂತೆ ಮತ್ತಿತ್ತರ ಸಿರಿಧಾನ್ಯದ ಖಾದ್ಯಗಳ ಸ್ವಾದಿಸಿ ಪ್ರೋತ್ಸಾಹಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Ambedkar Bhavan Shivamogga ಫೆಬ್ರವರಿ 14. ” ಹ್ಯಾಪಿ ಫೀಟ್- 2026″ ವಿಶೇಷ ನೃತ್ಯ ಪ್ರದರ್ಶನ

Ambedkar Bhavan Shivamogga ನೃತ್ಯಸಿರಿ ಡ್ಯಾನ್ಸ್ ಸ್ಟುಡಿಯೋ ವತಿಯಿಂದ “ಹ್ಯಾಪಿ ಫೀಟ್-2026”...

Dharmasthala Rural Development Project ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ವಾತ್ಸಲ್ಯ ಕಿಟ್ ವಿತರಣೆ

Dharmasthala Rural Development Project ಶಿವಮೊಗ್ಗ ತಾಲೂಕಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ...

ಕರವೇ ಜನಮನ ರಾಜ್ಯ ಸಂಘಟನೆಯ ಪದಾಧಿಕಾರಿಗಳ ಪ್ರಮಾಣವಚನ ಸ್ವೀಕಾರ

ಕನ್ನಡ ರಕ್ಷಣಾ ವೇದಿಕೆ ಜನಮನ ರಾಜ್ಯ ಸಂಘಟನೆಯ ಪದಾಧಿಕಾರಿಗಳ ಅಧಿಕಾರದ ಪ್ರಮಾಣ...