Friday, February 14, 2025
Friday, February 14, 2025

ಸಾವಯವ ಸಿರಿಧಾನ್ಯ ಮೇಳ

Date:

ಅಧಿಕಾರಿಗಳಲ್ಲಿಯೂ ಕೃಷಿ ಬಗ್ಗೆ ಆಸಕ್ತಿ ರೈತೋಪಯೋಗಿ ಭಾವನೆಯಿರುವುದು ಹೆಮ್ಮೆಯ ವಿಷಯವೆಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಶ್ಲಾಘಿಸಿದ್ದಾರೆ. ಬೆಂಗಳೂರಿನಲ್ಲಿ ಕೆಎಎಸ್ ಅಧಿಕಾರಿಗಳ ಸಂಘದಿಂದ ಕೃಷಿ ಇಲಾಖೆ,ಕೃಷಿಕ ಸಮಾಜದ ಸಹಯೋಗದಲ್ಲಿ “ಸಾವಯವ ಮತ್ತು ಸಿರಿಧಾನ್ಯ” ಮೇಳವನ್ನು ಉದ್ಘಾಟಿಸಿ ಮಾತನಾಡಿದರು.

ಬಹುತೇಕ ಕೆಎಎಸ್ ಅಧಿಕಾರಿಗಳೆಲ್ಲ ನಮ್ಮ ಮಣ್ಣಿನ ಮಕ್ಕಳೇ.ಅಧಿಕಾರಿಗಳಲ್ಲಿಯೂ ಕೃಷಿ ಅದರಲ್ಲಿಯೂ ಸಿರಿಧಾನ್ಯ ಸಾವಯವ ಬಗ್ಗೆ ಆಸಕ್ತಿ ಬಂದಿರುವುದು ಸಂತಸದ ವಿಚಾರ‌.ಸಿರಿಧಾನ್ಯದ ಸಿರಿತನ ಹೆಚ್ಚುತ್ತಿದೆ.ಸಿರಿಧಾನ್ಯ ಬಳಕೆ ಆರೋಗ್ಯಕ್ಕೆ ಆಹಾರದ ಸಿದ್ಧ ಔಷಧಿಯಾಗಿದೆ.ಸಾವಯವ ಬಿಟ್ಟು ಹೆಚ್ಚು ರಾಸಾಯನಿಕ ವಸ್ತು ಬಳಕೆಯಿಂದ ರೈತರು ಹೆಚ್ಚು ಆರೋಗ್ಯಕ್ಕೆ ಖರ್ಚು ಮಾಡುವಂತಹ ಸ್ಥಿತಿ ಉದ್ಭವಿಸಿದೆ.ಸಾವಯವ ಕೃಷಿ ಮತ್ತು ನೈಸರ್ಗಿಕ ಕೃಷಿಗೆ ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಮಹತ್ವ ಸಿಗುತ್ತಿದ್ದು,ಸರ್ಕಾರ ಕೂಡ ಈ ಜನರ ಆರೋಗ್ಯದ ಹಿತದೃಷ್ಟಿಯಿಂದ ಬಹುಪಯೋಗಿ ಯೋಜನೆಗಳನ್ನು ಜಾರಿಗೊಳಿಸುತ್ತಿದೆ ಎಂದರು.
ಕೃಷಿ ಖುಷಿಯಾಗಬೇಕು.ಈ ನಿಟ್ಟಿನಲ್ಲಿ ಎಲ್ಲರೂ ಮುಂದಾಗಬೇಕೆಂದರು.

ಮೇಳದಲ್ಲಿ ಕೃಷಿ ತೋಟಗಾರಿಕಾ ವಿಶ್ವವಿದ್ಯಾಲಯಗಳಿಂದ ವಿದ್ಯಾರ್ಥಿನಿಗಳು ಪ್ರದರ್ಶನಕ್ಕಿಟ್ಟ ಸಾವಯವ ಕೋಕಮ್ ಸೇರಿದಂತೆ ಮತ್ತಿತ್ತರ ಸಿರಿಧಾನ್ಯದ ಖಾದ್ಯಗಳ ಸ್ವಾದಿಸಿ ಪ್ರೋತ್ಸಾಹಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ಅತ್ಯುತ್ತಮ‌ ರೋಟರಿ ನಾಯಕರನ್ನ ಗುರುತಿಸಿ ಗೌರವಿಸುವ ಕಾರ್ಯಕ್ರಮ

Rotary Shivamogga ಶಿವಮೊಗ್ಗ ನಗರದ ಕಾಸ್ಮೋ ಕ್ಲಬ್‌ನಲ್ಲಿ ರೋಟರಿ ಕ್ಲಬ್ ಶಿವಮೊಗ್ಗ...

Shivamogga City Corporation ಕೆಎಫ್ ಡಿ ಬಗ್ಗೆ ಅರಿವು ಮೂಡಿಸಿ,ಪ್ರಕರಣ ಹೆಚ್ಚದಂತೆ ಗಮನವಹಿಸಿ- ವಿ.ಎಸ್.ರಾಜೀವ್

Shivamogga City Corporation ಶಿವಮೊಗ್ಗ ತಾಲ್ಲೂಕುಗಳಲ್ಲಿ ಕೆಎಫ್‌ಡಿ ಪ್ರಕರಣಗಳು ಹೆಚ್ಚದಂತೆ...

Rapido Bike ಶಿವಮೊಗ್ಗಕ್ಕೂ ಎಂಟ್ರಿ ಕೊಟ್ಟ ರ್ಯಾಪಿಡೊ ಬೈಕ್

Rapido Bike ಶಿವಮೊಗ್ಗ ನಗರದಲ್ಲಿ ರ್ಯಾಪಿಡೋ ಬೈಕ್ ಓಡಾಟ ಶುರುವಾಗಿದೆ.ರ್ಯಾಪಿಡೋ...

MESCOM ಫೆ.14. ಆಲ್ಕೊಳ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಶಿವಮೊಗ್ಗ ನಗರದ ಆಲ್ಕೋಳ ವಿ.ವಿ.ಕೇಂದ್ರದಿಂದ ತುರ್ತು ಕಾಮಗಾರಿ ಇರುವುದರಿಂದ ಫೆ.14...