Wednesday, February 18, 2026
Wednesday, February 18, 2026

ಸಾವಯವ ಸಿರಿಧಾನ್ಯ ಮೇಳ

Date:

ಅಧಿಕಾರಿಗಳಲ್ಲಿಯೂ ಕೃಷಿ ಬಗ್ಗೆ ಆಸಕ್ತಿ ರೈತೋಪಯೋಗಿ ಭಾವನೆಯಿರುವುದು ಹೆಮ್ಮೆಯ ವಿಷಯವೆಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಶ್ಲಾಘಿಸಿದ್ದಾರೆ. ಬೆಂಗಳೂರಿನಲ್ಲಿ ಕೆಎಎಸ್ ಅಧಿಕಾರಿಗಳ ಸಂಘದಿಂದ ಕೃಷಿ ಇಲಾಖೆ,ಕೃಷಿಕ ಸಮಾಜದ ಸಹಯೋಗದಲ್ಲಿ “ಸಾವಯವ ಮತ್ತು ಸಿರಿಧಾನ್ಯ” ಮೇಳವನ್ನು ಉದ್ಘಾಟಿಸಿ ಮಾತನಾಡಿದರು.

ಬಹುತೇಕ ಕೆಎಎಸ್ ಅಧಿಕಾರಿಗಳೆಲ್ಲ ನಮ್ಮ ಮಣ್ಣಿನ ಮಕ್ಕಳೇ.ಅಧಿಕಾರಿಗಳಲ್ಲಿಯೂ ಕೃಷಿ ಅದರಲ್ಲಿಯೂ ಸಿರಿಧಾನ್ಯ ಸಾವಯವ ಬಗ್ಗೆ ಆಸಕ್ತಿ ಬಂದಿರುವುದು ಸಂತಸದ ವಿಚಾರ‌.ಸಿರಿಧಾನ್ಯದ ಸಿರಿತನ ಹೆಚ್ಚುತ್ತಿದೆ.ಸಿರಿಧಾನ್ಯ ಬಳಕೆ ಆರೋಗ್ಯಕ್ಕೆ ಆಹಾರದ ಸಿದ್ಧ ಔಷಧಿಯಾಗಿದೆ.ಸಾವಯವ ಬಿಟ್ಟು ಹೆಚ್ಚು ರಾಸಾಯನಿಕ ವಸ್ತು ಬಳಕೆಯಿಂದ ರೈತರು ಹೆಚ್ಚು ಆರೋಗ್ಯಕ್ಕೆ ಖರ್ಚು ಮಾಡುವಂತಹ ಸ್ಥಿತಿ ಉದ್ಭವಿಸಿದೆ.ಸಾವಯವ ಕೃಷಿ ಮತ್ತು ನೈಸರ್ಗಿಕ ಕೃಷಿಗೆ ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಮಹತ್ವ ಸಿಗುತ್ತಿದ್ದು,ಸರ್ಕಾರ ಕೂಡ ಈ ಜನರ ಆರೋಗ್ಯದ ಹಿತದೃಷ್ಟಿಯಿಂದ ಬಹುಪಯೋಗಿ ಯೋಜನೆಗಳನ್ನು ಜಾರಿಗೊಳಿಸುತ್ತಿದೆ ಎಂದರು.
ಕೃಷಿ ಖುಷಿಯಾಗಬೇಕು.ಈ ನಿಟ್ಟಿನಲ್ಲಿ ಎಲ್ಲರೂ ಮುಂದಾಗಬೇಕೆಂದರು.

ಮೇಳದಲ್ಲಿ ಕೃಷಿ ತೋಟಗಾರಿಕಾ ವಿಶ್ವವಿದ್ಯಾಲಯಗಳಿಂದ ವಿದ್ಯಾರ್ಥಿನಿಗಳು ಪ್ರದರ್ಶನಕ್ಕಿಟ್ಟ ಸಾವಯವ ಕೋಕಮ್ ಸೇರಿದಂತೆ ಮತ್ತಿತ್ತರ ಸಿರಿಧಾನ್ಯದ ಖಾದ್ಯಗಳ ಸ್ವಾದಿಸಿ ಪ್ರೋತ್ಸಾಹಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kote Marikamba Devi ಶಿವಮೊಗ್ಗ ಮಾರಿಕಾಂಬ ಜಾತ್ರೆ: ಹಿನ್ನೆಲೆ ಮತ್ತು ಆಚರಣೆ ಹೇಗೆ?

Kote Marikamba Devi ಕೋಟೆ ಮಾರಿಕಾಂಬಾ ಜಾತ್ರೆಗೆ ಚಾಲನೆ ದೊರೆತಿದ್ದು,...

Brahmakumari Ishwari University ಧ್ಯಾನವು ಮನಸ್ಸಿನ ಏಕಾಗ್ರತೆ ಹೆಚ್ಚಿಸುತ್ತದೆ- ಬ್ರಹ್ಮಕುಮಾರಿ ಸ್ವಾತಿ

Brahmakumari Ishwari University ಪ್ರತಿ ದಿನ ಧ್ಯಾನ ಅಭ್ಯಾಸ ಮಾಡುವುದರಿಂದ ಒತ್ತಡ...

Shivamogga Rangayana “ಸ್ವಾತಂತ್ರ್ಯದ ಓಟ” ನಾಟಕ ಕುರಿತು ಮಾತಾಡಿ, ಉದ್ಘಾಟಿಸಿದ ಅಂಕಣಕಾರ ಬಿ.ಚಂದ್ರೇಗೌಡ

Shivamogga Rangayana ಶಿವಮೊಗ್ಗ ರಂಗಾಯಣವು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ...