Sunday, March 29, 2026
Sunday, March 29, 2026

ಸೂಕ್ಷ್ಮವಲಯ ಘೋಷಣೆ : ಚರ್ಚೆಯ ನಂತರ ಕ್ರಮ

Date:

ಡಾಕ್ಟರ್ ಕಸ್ತೂರಿರಂಗನ್ ಅವರ ವರದಿಯನ್ನು ಅನುಷ್ಠಾನಕ್ಕೆ ತರಲು ರಾಜ್ಯ ಸರ್ಕಾರ ವಿರೋಧಿಸಿದೆ.

ಪಶ್ಚಿಮಘಟ್ಟಗಳಲ್ಲಿ ಪರಿಸರ ಸೂಕ್ಷ್ಮವಲಯಗಳ ಘೋಷಣೆಗೆ ಸಂಬಂಧಿಸಿದ ಈ ವರದಿಯನ್ನು ತಿರಸ್ಕರಿಸುವಂತೆ ರಾಜ್ಯ ಸರ್ಕಾರವು ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವಾಲಯದ ಮುಂದೆ ಬೇಡಿಕೆ ಇಟ್ಟಿದೆ.

ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವ ಭೂಪೇಂದರ್ ಯಾದವ್ ಅವರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರೊಂದಿಗೆ ಕಸ್ತೂರಿ ರಂಗನ್ ವರದಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸಭೆ ನಡೆಸಿದರು.

“ಉಪಗ್ರಹ ಚಿತ್ರಗಳ ಆಧಾರದ ಮೇಲೆ ಕಸ್ತೂರಿರಂಗನ್ ವರದಿ ಸಿದ್ಧಪಡಿಸಲಾಗಿದೆ ವಾಸ್ತವಿಕತೆ ದೂರವಾಗಿದೆ. ಈ ವರದಿ ಆಧಾರದಲ್ಲಿ ಪರಿಸರ ಸೂಕ್ಷ್ಮ ವಲಯ ಗಳನ್ನು ಘೋಷಿಸಿದರೆ ಪಶ್ಚಿಮಘಟ್ಟ ಪ್ರದೇಶದ ಜನರ ಜೀವನೋಪಾಯಕ್ಕೆ ಧಕ್ಕೆಯಾಗುತ್ತದೆ. ಕಸ್ತೂರಿ ರಂಗನ್ ವರದಿಯ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಮತ್ತು ಈ ಭಾಗದ ಜನರ ವಿರೋಧವಿದೆ” ಎಂದು ಬೊಮ್ಮಾಯಿ ಅವರು ಕೇಂದ್ರ ಸಚಿವರಿಗೆ ತಿಳಿಸಿದರು.

ಈ ಕುರಿತಂತೆ ನಿರ್ಣಯಕ್ಕೂ ಮುನ್ನ ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವಾಲಯದ ಹಿರಿಯ ಅಧಿಕಾರಿಗಳನ್ನು ಕರ್ನಾಟಕಕ್ಕೆ ಕಳುಹಿಸಿ ಚರ್ಚಿಸಲಾಗುವುದು. ಆ ಬಳಿಕವೇ ತೀರ್ಮಾನಿಸಲಾಗುವುದು ಎಂದು ಕೇಂದ್ರ ಸಚಿವರು ಮುಖ್ಯಮಂತ್ರಿಗಳಿಗೆ ಭರವಸೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ತೇರಿನ ನಡುವೆ ಮೆರೆದ ಹೆತ್ತ ತಾಯಿಯ ಮೇಲಿನ ಮಮತೆ.ಲೇ: ಡಾ.ಹೆಚ್.ಬಿ.ಮಂಜುನಾಥ್.

ಜೀವನೋತ್ಸಾಹ ಹಾಗೂ ಹಿರಿಯರಲ್ಲಿ ಪ್ರೀತಿ ವಾತ್ಸಲ್ಯ ಹೇಗಿರಬೇಕು ಎಂಬುದಕ್ಕೆ ಇದೊಂದು ಹೃದಯಸ್ಪರ್ಶಿ...

CM Siddharamaih ಪೊಲೀಸ್ ಇಲಾಖೆಯಲ್ಲಿ ಖಾಲಿಯಿರುವ 8000 ಹುದ್ದೆಗಳನ್ನ ಭರ್ತಿ ಮಾಡಲಾಗುವುದು,- ಸಿದ್ಧರಾಮಯ್ಯ.

CM Siddharamaih ಪೊಲೀಸ್ ಸೇವೆಯಲ್ಲಿ ಶಿಸ್ತು, ಸಂಯಮ, ಪ್ರಾಮಾಣಿಕತೆ, ಮಾನವೀಯತೆ ಬಹಳ ಮುಖ್ಯ....

Kuvempu University ಜೋನ್ ಲೀಲಾ ಮಾಡ್ತಾ ಅವರಿಗೆ ಪಿಎಚ್.ಡಿ. ಪದವಿ

Kuvempu University  ಎನ್.ಶಾಂತನಾಯ್ಕ ಮಾರ್ಗದರ್ಶನದಲ್ಲಿ ಜೋನ್ ಲೀಲಾ ಮಾಡ್ತಾ ಕಲಾ ಅಧ್ಯಯನ...