Monday, December 15, 2025
Monday, December 15, 2025

ಸೂಕ್ಷ್ಮವಲಯ ಘೋಷಣೆ : ಚರ್ಚೆಯ ನಂತರ ಕ್ರಮ

Date:

ಡಾಕ್ಟರ್ ಕಸ್ತೂರಿರಂಗನ್ ಅವರ ವರದಿಯನ್ನು ಅನುಷ್ಠಾನಕ್ಕೆ ತರಲು ರಾಜ್ಯ ಸರ್ಕಾರ ವಿರೋಧಿಸಿದೆ.

ಪಶ್ಚಿಮಘಟ್ಟಗಳಲ್ಲಿ ಪರಿಸರ ಸೂಕ್ಷ್ಮವಲಯಗಳ ಘೋಷಣೆಗೆ ಸಂಬಂಧಿಸಿದ ಈ ವರದಿಯನ್ನು ತಿರಸ್ಕರಿಸುವಂತೆ ರಾಜ್ಯ ಸರ್ಕಾರವು ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವಾಲಯದ ಮುಂದೆ ಬೇಡಿಕೆ ಇಟ್ಟಿದೆ.

ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವ ಭೂಪೇಂದರ್ ಯಾದವ್ ಅವರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರೊಂದಿಗೆ ಕಸ್ತೂರಿ ರಂಗನ್ ವರದಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸಭೆ ನಡೆಸಿದರು.

“ಉಪಗ್ರಹ ಚಿತ್ರಗಳ ಆಧಾರದ ಮೇಲೆ ಕಸ್ತೂರಿರಂಗನ್ ವರದಿ ಸಿದ್ಧಪಡಿಸಲಾಗಿದೆ ವಾಸ್ತವಿಕತೆ ದೂರವಾಗಿದೆ. ಈ ವರದಿ ಆಧಾರದಲ್ಲಿ ಪರಿಸರ ಸೂಕ್ಷ್ಮ ವಲಯ ಗಳನ್ನು ಘೋಷಿಸಿದರೆ ಪಶ್ಚಿಮಘಟ್ಟ ಪ್ರದೇಶದ ಜನರ ಜೀವನೋಪಾಯಕ್ಕೆ ಧಕ್ಕೆಯಾಗುತ್ತದೆ. ಕಸ್ತೂರಿ ರಂಗನ್ ವರದಿಯ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಮತ್ತು ಈ ಭಾಗದ ಜನರ ವಿರೋಧವಿದೆ” ಎಂದು ಬೊಮ್ಮಾಯಿ ಅವರು ಕೇಂದ್ರ ಸಚಿವರಿಗೆ ತಿಳಿಸಿದರು.

ಈ ಕುರಿತಂತೆ ನಿರ್ಣಯಕ್ಕೂ ಮುನ್ನ ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವಾಲಯದ ಹಿರಿಯ ಅಧಿಕಾರಿಗಳನ್ನು ಕರ್ನಾಟಕಕ್ಕೆ ಕಳುಹಿಸಿ ಚರ್ಚಿಸಲಾಗುವುದು. ಆ ಬಳಿಕವೇ ತೀರ್ಮಾನಿಸಲಾಗುವುದು ಎಂದು ಕೇಂದ್ರ ಸಚಿವರು ಮುಖ್ಯಮಂತ್ರಿಗಳಿಗೆ ಭರವಸೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...