Sunday, May 17, 2026
Sunday, May 17, 2026

ಸೂಕ್ಷ್ಮವಲಯ ಘೋಷಣೆ : ಚರ್ಚೆಯ ನಂತರ ಕ್ರಮ

Date:

ಡಾಕ್ಟರ್ ಕಸ್ತೂರಿರಂಗನ್ ಅವರ ವರದಿಯನ್ನು ಅನುಷ್ಠಾನಕ್ಕೆ ತರಲು ರಾಜ್ಯ ಸರ್ಕಾರ ವಿರೋಧಿಸಿದೆ.

ಪಶ್ಚಿಮಘಟ್ಟಗಳಲ್ಲಿ ಪರಿಸರ ಸೂಕ್ಷ್ಮವಲಯಗಳ ಘೋಷಣೆಗೆ ಸಂಬಂಧಿಸಿದ ಈ ವರದಿಯನ್ನು ತಿರಸ್ಕರಿಸುವಂತೆ ರಾಜ್ಯ ಸರ್ಕಾರವು ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವಾಲಯದ ಮುಂದೆ ಬೇಡಿಕೆ ಇಟ್ಟಿದೆ.

ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವ ಭೂಪೇಂದರ್ ಯಾದವ್ ಅವರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರೊಂದಿಗೆ ಕಸ್ತೂರಿ ರಂಗನ್ ವರದಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸಭೆ ನಡೆಸಿದರು.

“ಉಪಗ್ರಹ ಚಿತ್ರಗಳ ಆಧಾರದ ಮೇಲೆ ಕಸ್ತೂರಿರಂಗನ್ ವರದಿ ಸಿದ್ಧಪಡಿಸಲಾಗಿದೆ ವಾಸ್ತವಿಕತೆ ದೂರವಾಗಿದೆ. ಈ ವರದಿ ಆಧಾರದಲ್ಲಿ ಪರಿಸರ ಸೂಕ್ಷ್ಮ ವಲಯ ಗಳನ್ನು ಘೋಷಿಸಿದರೆ ಪಶ್ಚಿಮಘಟ್ಟ ಪ್ರದೇಶದ ಜನರ ಜೀವನೋಪಾಯಕ್ಕೆ ಧಕ್ಕೆಯಾಗುತ್ತದೆ. ಕಸ್ತೂರಿ ರಂಗನ್ ವರದಿಯ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಮತ್ತು ಈ ಭಾಗದ ಜನರ ವಿರೋಧವಿದೆ” ಎಂದು ಬೊಮ್ಮಾಯಿ ಅವರು ಕೇಂದ್ರ ಸಚಿವರಿಗೆ ತಿಳಿಸಿದರು.

ಈ ಕುರಿತಂತೆ ನಿರ್ಣಯಕ್ಕೂ ಮುನ್ನ ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವಾಲಯದ ಹಿರಿಯ ಅಧಿಕಾರಿಗಳನ್ನು ಕರ್ನಾಟಕಕ್ಕೆ ಕಳುಹಿಸಿ ಚರ್ಚಿಸಲಾಗುವುದು. ಆ ಬಳಿಕವೇ ತೀರ್ಮಾನಿಸಲಾಗುವುದು ಎಂದು ಕೇಂದ್ರ ಸಚಿವರು ಮುಖ್ಯಮಂತ್ರಿಗಳಿಗೆ ಭರವಸೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ.ಶಾಸಕ ಚನ್ನಬಸಪ್ಪ‌ ಭೇಟಿ- ನೊಂದವರಿಗೆ ಸಾಂತ್ವನ.

S.N. Channabasappa ನಗರದ ಮಿಳಘಟ್ಟದ 1ನೇ ಕ್ರಾಸ್‌ನಲ್ಲಿರುವ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ...

DC Shivamogga ತ್ಯಾಜ್ಯ ಉತ್ಪಾದನೆ ನಿಯಂತ್ರಿಸಿ, ವಿಲೇವಾರಿಗೆ ಅಧಿಕಾರಿಗಳು ವಿಶೇಷ ಗಮನ ಹರಿಸಿ, ಸಾರ್ವಜನಿಕರೂ ಸಹಕರಿಸಿ- ಪ್ರಭುಲಿಂಗ ಕವಳಿಕಟ್ಟಿ

DC Shivamogga ನಗರೀಕರಣ ಮತ್ತು ಕೈಗಾರಿಕೀಕರಣದಿಂದಾಗಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯದ ಪ್ರಮಾಣ ದಿನೇದಿನೇ...

MESCOM ಮೇ19. ಶಿವಮೊಗ್ಗದ ಚಿಕ್ಕಲ್ಲು,ಗುರುಪುರ, ಪುರಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಎಂ.ಆರ್.ಎಸ್. 110/11 ಕೆ.ವಿ. ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು,...