Wednesday, December 17, 2025
Wednesday, December 17, 2025

ಭಾರತ- ರಷ್ಯ ಮಹತ್ವದ ಒಪ್ಪಂದಕ್ಕೆ ತಯಾರಿ

Date:

ಭಾರತವು ರಷ್ಯಾ ಜೊತೆಗೆ ಮೂಲಸೌಕರ್ಯ ಹಂಚಿಕೆಯ ಒಪ್ಪಂದವನ್ನು ಮಾಡಿಕೊಳ್ಳಲಿದೆ. ಐದು ವರ್ಷಗಳ ಹಿಂದೆಯೇ ಅಮೆರಿಕ ಜೊತೆಗೆ ಇಂತಹ ಒಪ್ಪಂದವನ್ನು ಮಾಡಿಕೊಳ್ಳಲಾಗಿತ್ತು. ಈ ಬಗ್ಗೆ ಚರ್ಚಿಸಲು ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರು ರಷ್ಯಾ ಅಧ್ಯಕ್ಷ ವ್ಲಾಡಮಿರ್ ಪುಟಿನ್ ಜೊತೆ ಶೃಂಗಸಭೆಯನ್ನು ನಡೆಸಲಿದ್ದಾರೆ.

ಈ ಸಭೆಯಲ್ಲಿ ಸುಮಾರು 10 ಒಪ್ಪಂದಗಳಿಗೆ ಸಹಿ ಹಾಕುವ ನಿರೀಕ್ಷೆಯಿದೆ. ರಕ್ಷಣಾ ಮೂಲಸೌಕರ್ಯ ಹಂಚಿಕೆ ಒಪ್ಪಂದವೂ ಇದರಲ್ಲಿ ಒಂದಾಗಿದೆ.

ಈ ಒಪ್ಪಂದಕ್ಕೆ ಸಹಿ ಮಾಡಿದರೆ, ಭಾರತ ಮತ್ತು ರಷ್ಯಾದ ಭೂಸೇನೆ, ನೌಕಾಪಡೆ ಹಾಗೂ ವಾಯುಪಡೆಗಳು ಪರಸ್ಪರ ರಕ್ಷಣಾ ಮೂಲಸೌಕರ್ಯಗಳನ್ನು ಬಳಸಿಕೊಳ್ಳಲು ಅವಕಾಶವನ್ನು ಹೊಂದಿದೆ.

ರಷ್ಯಾದ ಕೆಎ 226ಟಿ ಎಚ್ ಎ ಎಲ್ ತುಮಕೂರು ಘಟಕದಲ್ಲಿ ತಯಾರಿಸುವ ಯೋಜನೆ ಕುರಿತು ಇಂದಿಗೂ ಅನಿಶ್ಚಿತ ಸ್ಥಿತಿಯಲ್ಲಿದೆ. ಆದ್ದರಿಂದ ರಷ್ಯಾದಿಂದ ಕೆಲವು ಹೆಲಿಕ್ಯಾಪ್ಟರ್ ಗಳನ್ನು ಖರೀದಿಸುವ ಸಾಧ್ಯತೆ ಇದೆ. 60 ಹೆಲಿಕಾಪ್ಟರ್ ಖರೀದಿ ಹಾಗೂ 200 ಹೆಲಿಕ್ಯಾಪ್ಟರ್ ಗಳನ್ನು ಎಚ್ಎಎಲ್ ನಲ್ಲಿ ತಯಾರಿಸಲಾಗುತ್ತದೆ. ಈ ಒಪ್ಪಂದವನ್ನು ಭಾರತ ಮತ್ತು ರಷ್ಯಾ ಸರ್ಕಾರದ ನಡುವೆ 2015 ರಲ್ಲಿ ನಡೆದಿತ್ತು. ದರ ಹಾಗೂ ಭಾರತದಲ್ಲಿ ತಯಾರಾಗುವ ಹೆಲಿಕ್ಯಾಪ್ಟರ್ ಗಳಲ್ಲಿ ದೇಶಿಯವಾಗಿ ತಯಾರಾದ ಬಿಡಿಭಾಗಗಳನ್ನು ಯಾವ ಪ್ರಮಾಣದಲ್ಲಿ ಬಳಸಬೇಕು ಎಂಬ ಬಗೆಗಿನ ಭಿನ್ನಭಿಪ್ರಾಯ ಏರ್ಪಟ್ಟಿದ್ದು, ಅದನ್ನು ಬಗೆಹರಿಸಲು ಇನ್ನೂ ಸಾಧ್ಯವಾಗಿಲ್ಲ.

ರಕ್ಷಣಾ ಮೂಲಸೌಕರ್ಯ ಹಂಚಿಕೆ ಒಪ್ಪಂದದಿಂದಾಗಿ ಆರ್ಕ್ ಟಿಕ್ ಸಾಗರದಲ್ಲಿ ರಷ್ಯಾ ಹೊಂದಿರುವ ಬಂದರೂ ಸೌಲಭ್ಯವೂ ಭಾರತ ದ ಬಳಕೆಗೆ ದೊರೆಯುತ್ತದೆ. ಈ ಪ್ರದೇಶದಲ್ಲಿ ಚೀನಾದ ಪ್ರಾಬಲ್ಯ ಹೆಚ್ಚಾಗಿದೆ. ಹಾಗಾಗಿ ರಷ್ಯದ ಜೊತೆಗಿನ ಒಪ್ಪಂದದಿಂದ ಭಾರತಕ್ಕೆ ಅನುಕೂಲ ಆಗಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...

Karnataka Information Commission ಡಿಸೆಂಬರ್ 20. ರಾಜ್ಯ ಮಾಹಿತಿ ಆಯುಕ್ತರ ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಹಿತಿ

Karnataka Information Commission ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ...

B.Y. Raghavendra ವೈಯಕ್ತಿಕವಾಗಿ ಕುಟುಂಬದ ಹಿರಿಯರನ್ನ ಕಳೆದುಕೊಂಡಂತಾಗಿದೆ, ಶಾಮನೂರು ನಿಧನಕ್ಕೆ ಬಿ.ವೈ.ರಾಘವೇಂದ್ರ ಕಂಬನಿ

B.Y. Raghavendra ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ...