Monday, December 15, 2025
Monday, December 15, 2025

ಭಾರತೀಯರಲ್ಲಿ ಆರ್ಥಿಕ ಸಂಕಷ್ಟತೆ

Date:

ಗುಜರಾತ್ ನ ಅಹಮದಾಬಾದ್ ವಿಶ್ವವಿದ್ಯಾಲಯದ 11ನೇ ಭಾಷಿಕ ಪದವಿ ಪ್ರಧಾನ ಸಮಾರಂಭ ನಡೆಯಿತು. ಈ ಸಮಾರಂಭಕ್ಕೆ ಆನ್ಲೈನ್ ಸಂವಾದದ ಮೂಲಕ ಅಭಿಜಿತ್ ಬ್ಯಾನರ್ಜಿಯವರು ಅಮೆರಿಕ ದಿಂದಲೇ ಭಾಗವಹಿಸಿದರು.

ಭಾರತೀಯರು ತೀವ್ರ ಸಂಕಷ್ಟದಲ್ಲಿದ್ದಾರೆ. ಹಾಗೂ ಆರ್ಥಿಕತೆ ಈಗಲೂ 2019ರ ಮಟ್ಟಕ್ಕಿಂತ ಕೆಳಗಿದೆ. ಸಣ್ಣ ವ್ಯಾಪಾರಿಗಳು ಮತ್ತಷ್ಟು ಕುಸಿದಿದ್ದಾರೆ ಎಂದು ಅರ್ಥಶಾಸ್ತ್ರಜ್ಞ ಅಭಿಜಿತ್ ಬ್ಯಾನರ್ಜಿ ತಿಳಿಸಿದ್ದಾರೆ.

ಇತ್ತೀಚಿಗಷ್ಟೇ ಪಶ್ಚಿಮ ಬಂಗಾಳಕ್ಕೆ ಅಭಿಜಿತ್ ಅವರು ಭೇಟಿ ನೀಡಿದ್ದರು. ಆ ಸಂದರ್ಭದಲ್ಲಿ ಅಲ್ಲಿ ಗಮನಿಸಿದ ಅಂಶಗಳನ್ನು ಅವರು ವಿದ್ಯಾರ್ಥಿಗಳ ಜೊತೆ ಹಂಚಿಕೊಂಡಿದ್ದಾರೆ.

ಸಮಾಜಕ್ಕೆ ವಿದ್ಯಾರ್ಥಿಗಳ ಕೊಡುಗೆ ಬೇಕಿದೆ. ಭಾರತದಲ್ಲೀಗ ತೀವ್ರ ಸಂಕಷ್ಟದ ಸ್ಥಿತಿಯಿದೆ. ನಾನು ಪಶ್ಚಿಮಬಂಗಾಳದ ಗ್ರಾಮೀಣ ಪ್ರದೇಶದಲ್ಲಿ ಕೆಲವು ಸಮಯ ಕಳೆದಿದ್ದೇನೆ. ಅಭಿವೃದ್ಧಿಯ ಕನಸು ಕಟ್ಟಿಕೊಂಡವರು ಸಂಕಷ್ಟದಲ್ಲಿದ್ದಾರೆ. ಸಣ್ಣ ವ್ಯಾಪಾರಿಗಳು ಮತ್ತಷ್ಟು ನೊಂದಿದ್ದಾರೆ. ನಾವೀಗ ತೀವ್ರ ಸಂಕಷ್ಟದಲ್ಲಿದ್ದೇವೆ ಎಂದೆನಿಸುತ್ತಿದೆ. 2019ರಲ್ಲಿ ಇದ್ದ ಆರ್ಥಿಕ ಪರಿಸ್ಥಿತಿಗೆ ಹೋಲಿಸಿದರೆ ಅದಕ್ಕಿಂತ ಮಟ್ಟದಲ್ಲಿದ್ದೇವೆ. ಎಷ್ಟು ಕೆಳಮಟ್ಟಕ್ಕೆ ಇಳಿದಿದ್ದೇವೆ ಎಂಬುದು ನಮಗೆ ತಿಳಿದಿಲ್ಲ. ಆದರೆ ತೀವ್ರ ಕುಸಿತ ಕಂಡಿದ್ದೇವೆ. ಇದಕ್ಕೆ ನಾನು ಯಾರನ್ನೂ ದೂಷಿಸುವುದಿಲ್ಲ. ನಾನು ವಿಚಾರವನ್ನು ಹೇಳುತ್ತಿದ್ದೇನೆ ಅಷ್ಟೇ ಇಂದು ನೊಬೆಲ್ ಪ್ರಶಸ್ತಿ ಪುರಸ್ಕೃತ ಅರ್ಥಶಾಸ್ತ್ರಜ್ಞ ಅಭಿಜಿತ್ ಬ್ಯಾನರ್ಜಿ ಅವರು ವಿದ್ಯಾರ್ಥಿಗಳಿಗೆ ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...