Tuesday, March 31, 2026
Tuesday, March 31, 2026

ಓಮಿಕ್ರಾನ್ ಮಕ್ಕಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇಲ್ಲ

Date:

ಕೋವಿಡ್ ವೈರಾಣುವಿನ ಹೊಸ ರೂಪಾಂತರಿ ‘ ಓಮಿಕ್ರಾನ್’ ಭಾರತ ಸೇರಿದಂತೆ ಯಾವುದೇ ದೇಶದಲ್ಲಿರುವ ಮಕ್ಕಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇಲ್ಲ ಎಂದು ವೈರಾಣು ತಜ್ಞರು ಹೇಳಿದ್ದಾರೆ.
ಭಾರತ ಮಾತ್ರವಲ್ಲ, ಜಗತ್ತಿನ ಯಾವ ದೇಶದ ಮಕ್ಕಳಿಗೂ ಓಮಿಕ್ರಾನ್ ಬಾಧಿಸುವ ಸಾಧ್ಯತೆ ಇಲ್ಲ.ಅಷ್ಟಕ್ಕೂ, ಮಕ್ಕಳ ಮೇಲೆ ಹೊಸ ರೂಪದಲ್ಲಿ ಪರಿಣಾಮ ಬೀರುತ್ತದೆ ಎಂದು ಅಷ್ಟು ಬೇಗ ಅಂತಿಮ ನಿರ್ಧಾರಕ್ಕೆ ಬರುವುದು ಸೂಕ್ತವಲ್ಲ ಎಂದು ರಾಷ್ಟ್ರೀಯ ಜೈವಿಕ ವೈದ್ಯಕೀಯ ಜಿನೋಮಿಕ್ಸ್ ಸಂಸ್ಥೆ ನಿರ್ದೇಶಕ ಡಾ. ಸೌಮಿತ್ರ ದಾಸ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಪ್ರಕರಣಗಳ ಹೆಚ್ಚಳ, ಓಮಿಕ್ರಾನ್ ರೂಪಾಂತರಿ ತಳಿ ಪತ್ತೆಯಾದ ಹಿನ್ನೆಲೆಯಲ್ಲಿ ತಜ್ಞರ ಸಲಹೆ ಪಡೆದು ಮಾರ್ಗಸೂಚಿಗಳಲ್ಲಿ ಕೆಲ ಬದಲಾವಣೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಓಮಿಕ್ರಾನ್ ಸೋಂಕಿತರ ಸಂಪರ್ಕದಲ್ಲಿದ್ದವರಿಗೆ ಯಾವುದೇ ಆರೋಗ್ಯ ಸಮಸ್ಯೆ ಕಂಡು ಬಂದಿಲ್ಲ. 2 ಡೋಸ್ ಲಸಿಕೆ ತೆಗೆದುಕೊಂಡವರಲ್ಲಿ ಓಮಿಕ್ರಾನ್ ಸೋಂಕಿನ ತೀವ್ರತೆ ಇರುವುದಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ತಿಳಿಸಿದ್ದಾರೆ.
ಕೊರೊನಾ ವೈರಾಣುವಿನ ಪರಿಣಾಮವು ವ್ಯಕ್ತಿಯ ದೇಹದಲ್ಲಿರುವ ರೋಗನಿರೋಧಕ ಶಕ್ತಿ, ಆಹಾರ ಪದ್ಧತಿ, ಇದಕ್ಕೂ ಮೊದಲು ದೇಹದ ಮೇಲೆ ಪರಿಣಾಮ ಇತ್ಯಾದಿ ಅಂಶಗಳಿಂದ ನಿರ್ಧಾರವಾಗುತ್ತದೆ. ಅದರಲ್ಲೂ , ಓಮಿಕ್ರಾನ್ ಬೇರೆ ದೇಶದ ಜನರಿಗೆ ಬೀರಿದ ಪರಿಣಾಮವೇ ಭಾರತೀಯರ ಮೇಲು ಬೀರುತ್ತಿದೆ ಎಂಬುದು ಕೇವಲ ವದಂತಿ. ಕೊರೊನಾ ನಿರೋಧಕ ಲಸಿಕೆ 2 ಡೋಸ್ ಪಡೆಯುವುದು, ಸಾಮಾಜಿಕ ಅಂತರ ಸೇರಿ ಹಲವು ಮುಂಜಾಗೃತಾ ಕ್ರಮ ತೆಗೆದುಕೊಂಡರೆ ಸಾಕು. ಅನವಶ್ಯಕ ಭೀತಿಗೆ ಒಳಗಾಗುವುದು ಬೇಡ ಎಂದು ರಾಷ್ಟ್ರೀಯ ಜೈವಿಕ ವೈದ್ಯಕೀಯ ಜಿನೋಮಿಕ್ಸ್ ಸಂಸ್ಥೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Keladi Shivappa Nayaka Agriculture University ಏಪ್ರಿಲ್ 8 ರಿಂದ ಶಿವಮೊಗ್ಗದ ಕೃಷಿ ಕಾಲೇಜಿನ ಆವರಣದಲ್ಲಿ ವಿವಿಧ ಬೇಕರಿ ಉತ್ಪನ್ನ ತಯಾರಿಕೆ ತರಬೇತಿ.

Keladi Shivappa Nayaka Agriculture University ಶಿವಮೊಗ್ಗ ಕೃಷಿ ಮಹಾವಿದ್ಯಾಲಯ ಆವರಣದಲ್ಲಿ ಏಪ್ರಿಲ್...

Shivamogga Police ಏಪ್ರಿಲ್ 6. ಶಿವಮೊಗ್ಗ ಜಯನಗರ ಪೊಲೀಸ್ ಠಾಣೆಯಲ್ಲಿ ವಾಹನಗಳ ಬಹಿರಂಗ ಹರಾಜು.

Shivamogga Police ಶಿವಮೊಗ್ಗ ಜಯನಗರ ಪೊಲೀಸ್ ಠಾಣೆಯಲ್ಲಿ ವಾರಸುದಾರರು ಪತ್ತೆಯಾಗದ 08...

Breaking News ಸಿಡಿಲು ಬಡಿದು ಶಿವಮೊಗ್ಗ ಸನಿಹದ ರಾಮನಗರದಲ್ಲಿ ಚಿಕನ್ ಅಂಗಡಿ ಮಾಲೀಕರ ಸಾವು.

Breaking News ಸಿಡಿಲು ಬಡಿದು ಚಿಕನ್ ಅಂಗಡಿಯ ಮಾಲೀಕ ಸಾವನಪ್ಪಿದ್ದಾನೆ. ಸೋಮವಾರ...

Madhu Bangarappa ಸೊರಬದಲ್ಲಿ ಪೊಲೀಸ್ ಇಲಾಖೆಗೆ ನೀಡಿದ ವಾಹನಗಳನ್ನವಿತರಿಸಿದ ಸಚಿವ ಮಧು ಬಂಗಾರಪ್ಪ.

Madhu Bangarappa  ಮಧು ಬಂಗಾರಪ್ಪನವರ ಮತಕ್ಷೇತ್ರ ಸೊರಬ ಜನತೆಯ ಸುರಕ್ಷತೆ ಹಾಗೂ...