ಕೇರಳದಲ್ಲಿ ವೈದ್ಯಾಧಿಕಾರಿಗಳು ಮತ್ತು ಆರೋಗ್ಯ ಕಾರ್ಯಕರ್ತರು ಅನುಮತಿ ಇಲ್ಲದೆ ಸಾರ್ವಜನಿಕವಾಗಿ ಹೇಳಿಕೆ ನೀಡುವಂತಿಲ್ಲ. ಸುದ್ದಿಗೋಷ್ಠಿ ನಡೆಸುವಂತಿಲ್ಲ. ಈ ವಿಷಯದ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಆದೇಶವನ್ನು ಹೊರಡಿಸಿದೆ.
ಕೊರೊನಾ ಪ್ರಕರಣಗಳ ಕುರಿತು ಜನರಿಗೆ ತಪ್ಪು ಮಾಹಿತಿ ಕಳಿಸುವುದು. ಹಾಗೂ ಆರೋಗ್ಯ ಇಲಾಖೆ ಕಾರ್ಯವೈಖರಿ ಕುರಿತು ಜನರ ದಾರಿ ತಪ್ಪಿಸುವ ಸಾಧ್ಯತೆ ಇರುವುದರಿಂದ ಇಂತಹ ಆದೇಶ ಹೊರಡಿಸಲಾಗಿದೆ ಎಂದು ತಿಳಿದುಬಂದಿದೆ.
ತುರ್ತು ಸಂದರ್ಭ ಸೇರಿ ಯಾವುದೇ ಪರಿಸ್ಥಿತಿಯಲ್ಲಿ ವೈದ್ಯಾಧಿಕಾರಿಗಳು, ಆರೋಗ್ಯ ಕಾರ್ಯಕರ್ತರು ಸುದ್ದಿಗೋಷ್ಠಿ ನಡೆಸಲು, ಸಾರ್ವಜನಿಕವಾಗಿ ಮಾಹಿತಿ ನೀಡಲು ಇಲಾಖೆಯ ಅನುಮತಿ ಅಗತ್ಯ ಎಂದು ಕೇರಳ ಆರೋಗ್ಯ ಇಲಾಖೆ ನಿರ್ದೇಶಕ ವಿ. ಕೆ. ರಾಜು ತಿಳಿಸಿದ್ದಾರೆ.