Sunday, December 14, 2025
Sunday, December 14, 2025

ಬಾಬಾಸಾಹೇಬರ ಆದರ್ಶ ಪಾಲಿಸೋಣ. – ಸಿ.ಎಂ.

Date:

ಬೀದರ್ ನ ಅಂಬೇಡ್ಕರ್ ವೃತ್ತದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ 65ನೇ ಮಹಾಪರಿನಿರ್ವಾಣ ದಿನದ ಕಾರ್ಯಕ್ರಮವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಅಂಬೇಡ್ಕರ್ ಅವರ ಪ್ರತಿಮೆಗೆ ಹೂಮಾಲೆಯನ್ನು ಹಾಕಿ ನಮಿಸಿದರು.

ನಮ್ಮ ಸಂವಿಧಾನದಲ್ಲಿ ದೇಶದ ಎಲ್ಲಾ ಸಮಸ್ಯೆಗಳಿಗೆ ಪರಿಹಾರವಿದೆ. ಇದು ಎಲ್ಲ ಕಾಲಕ್ಕೂ ಸಲ್ಲುತ್ತದೆ. ನಮ್ಮದು ಶ್ರೇಷ್ಠ ಸಂವಿಧಾನ. ಅಂಬೇಡ್ಕರ್ ಅವರು ಎಲ್ಲರಿಗೂ ಸಂವಿಧಾನದ ಮೂಲಕ ಸಮಾನತೆಯ ಹಕ್ಕು ನೀಡಿದ್ದಾರೆ. ಅವರು ಆಧುನಿಕ ಭಾರತದ ಪಿತಾಮಹ. ಬದುಕಿನಲ್ಲಿ ನೋವು, ಶೋಷಣೆ ಅನುಭವಿಸಿ, ತಮ್ಮಂತೆಯೇ ಮತ್ತೊಬ್ಬರಿಗೂ ನೋವಾಗಬಾರದು. ಶೋಷಣೆಯಲ್ಲಿ ಸಿಲುಕಬಾರದು ಎಂಬ ಕಾರಣಕ್ಕೆ ಕೆಳ ಸಮುದಾಯದವರನ್ನು ಸಮಾಜದ ಮುಖ್ಯ ವಾಹಿನಿಗೆ ತರಲು ಅವರು ಪ್ರಯತ್ನಿಸಿದರು ಎಂದು ಮುಖ್ಯಮಂತ್ರಿ ಅವರು ತಿಳಿಸಿದರು.

ಅಂಬೇಡ್ಕರ್ ಅವರ ಸಂವಿಧಾನದ ಆಶಯಗಳನ್ನು ನಾವುಗಳು ಈಡೇರಿಸೋಣ. ಬಾಬಾಸಾಹೇಬರ ತತ್ವಾದರ್ಶಗಳನ್ನು ಪಾಲನೆ ಮಾಡೋಣ. ಆ ಮೂಲಕ ಅವರಿಗೆ ನಾವು ನಿಜವಾದ ಗೌರವ ಸಲ್ಲಿಸೋಣ ಎಂದು ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾ ಪಂಚಾಯಿತಿ, ದಲಿತ ಸಂಘಟನೆಗಳ ಒಕ್ಕೂಟ ಹೀಗೆ ಹಲವಾರು ಸಂಘಟನೆಗಳು ಸೇರಿ ಕಾರ್ಯಕ್ರಮವನ್ನು ಆಯೋಜಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...