Monday, May 19, 2025
Monday, May 19, 2025

ಸಂವಿಧಾನದಿಂದ ಪ್ರಜಾಪ್ರಭುತ್ವ ಬಲವಾಗಿದೆ – ಸಚಿವ ನಾಗೇಶ್

Date:

ಸರ್ವರನ್ನು ಒಳಗೊಂಡ ಸಮಸಮಾಜ ನಿರ್ಮಾಣಕ್ಕಾಗಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರು ನೀಡಿರುವ ಸಂದೇಶಗಳನ್ನು ಎಲ್ಲರೂ ಅಳವಡಿಸಿಕೊಂಡು ಪಾಲಿಸಬೇಕು ಎಂದು ಸಚಿವ ಬಿ.ಸಿ.ನಾಗೇಶ್ ಅವರು ತಿಳಿಸಿದ್ದಾರೆ.
ಪ್ರಜಾಪ್ರಭುತ್ವಕ್ಕೆ ಸಂವಿಧಾನವೇ ಅಡಿಪಾಯ. ಸಂವಿಧಾನದಿಂದ ಭಾರತದ ಪ್ರಜಾಪ್ರಭುತ್ವದ ಬೇರುಗಳು ಬಲವಾಗಿವೆ. ದೇಶದಲ್ಲಿರುವಷ್ಟು ಸ್ವಾತಂತ್ರ ಬೇರೆ ಯಾವ ದೇಶಗಳಲ್ಲಿಯೂ ಇಲ್ಲ. ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರದ ಜನತೆಯನ್ನು ಅಂಬೇಡ್ಕರ್ ಅವರ ನೇತೃತ್ವದಲ್ಲಿ ರಚಿಸಿರುವ ಸಂವಿಧಾನ ಎತ್ತಿ ಹಿಡಿದಿದೆ ಎಂದರು.
ಡಾ. ಬಿ.ಆರ್ ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನದ ಪ್ರಯುಕ್ತ ವಿಧಾನಸೌಧದ ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.
ತಮ್ಮ ಜೀವನವಿಡೀ ದೇಶದ ಏಳಿಗೆ, ಸಮಾಜದ ಉನ್ನತಿಗಾಗಿ ಶ್ರಮಿಸಿದ ಅಂಬೇಡ್ಕರ್ ಅವರು ಉಜ್ವಲ ಭಾರತದ ಕನಸು ಕಂಡಿದ್ದರು. ಅಸ್ಪೃಶ್ಯತೆ, ಅಸಮಾನತೆ ತೊಡೆದು ಹಾಕುವುದು, ಎಲ್ಲರಿಗೂ ಶಿಕ್ಷಣ, ಉದ್ಯೋಗದ ಸಮಾನ ಅವಕಾಶಗಳು ಸಿಗಬೇಕು ಎಂಬುದು ಅವರ ಮಹದಾಸೆಯಾಗಿತ್ತು. ಆ ದಾರಿಯಲ್ಲಿರುವ ಕೇಂದ್ರ, ರಾಜ್ಯ ಸರ್ಕಾರಗಳು, ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಹಲವು ಜನಪರ ಯೋಜನೆಗಳನ್ನು ರೂಪಿಸಿ ಜಾರಿಗೊಳಿಸುತ್ತಿವೆ ಎಂದರು.
ಈ ಸಂದೇಶದಲ್ಲಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Guarantee scheme ಜನ ಸಾಮಾನ್ಯರ ಬದುಕಿಗೆ ಗ್ಯಾರಂಟಿ ಯೋಜನೆಗಳು ಬೆಳಕಾಗಿವೆ

Guarantee scheme ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳು ನಾಡಿನ...

Klive Special Article ಭಯೋತ್ಪಾದನೆ‌ ಜಾಗತಿಕ ಜಾಗೃತಿಗೆಸರ್ವಸಮ್ಮತ ಸರ್ವಪಕ್ಷ‌ ನಿಯೋಗ.

Klive Special Article ಪೆಹಲ್ಗಾಂ ದುರಂತದ ನಂತರ ನಡೆದ ಬೆಳವಣಿಗೆಗಳಲ್ಲಿಮೂರು ಸಂಗತಿಗಳು ಸುದ್ದಿಮನೆಯನ್ನ...

Rajesh Keelambi “ಶಾಖಾಹಾರಿ” ನಿರ್ಮಾಪಕ ರಾಜೇಶ್ ಕೀಳಂಬಿ‌ ಅವರಿಗೆಡಾ.ಪುನೀತ್ ರಾಜ್ ಕುಮಾರ್ ಚೊಚ್ಚಲ ನಿರ್ಮಾಪಕ  ಪ್ರಶಸ್ತಿ

Rajesh Keelambi ಶಾಖಾಹಾರಿ ಚಿತ್ರದ ನಿರ್ಮಾಪಕಕೀಳಂಬಿ‌ ಮೀಡಿಯಾ ಲ್ಯಾಬ್ ಸಂಸ್ಥೆಯ ಎಂ.ಡಿ....

Shimog News ಹಿರಿಯೂರು ಕೃಷ್ಣಮೂರ್ತಿ ಸ್ಮರಣೀಯ ವ್ಯಕ್ತಿ,- ದತ್ತಾತ್ರೇಯ ಹೊಸಬಾಳೆ

Shimog News ತಾ.17-5-25 ರ ಶನಿವಾರ ಸಂಜೆ ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ...