Monday, December 8, 2025
Monday, December 8, 2025

ಗೈರುಹಾಜರಿಯಾದ ಸಂಸದರಿಗೆ ಪ್ರಧಾನಿ ಮೃದು ಚಾಟಿ

Date:

ಸಂಸತ್ ಅಧಿವೇಶನಕ್ಕೆ ಗೈರುಹಾಜರಾಗುವ ಸಂಸದರಿಗೆ ಮಾನ್ಯ ಪ್ರಧಾನಿ ನರೇಂದ್ರ ಮೋದಿ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ.

‘ನೀವು ನಿಮ್ಮ ವರ್ತನೆಯನ್ನು ಬದಲಾಯಿಸಿಕೊಳ್ಳಿ. ಇಲ್ಲದೆ ಹೋದರೆ ಮುಂದಿನ ಚುನಾವಣೆಯಲ್ಲಿ ನಿಮ್ಮನ್ನು ಬದಲಿಸುತ್ತೇವೆ’ ಎಂದು ಎಚ್ಚರಿಕೆಯ ಸಂದೇಶವನ್ನು ನೀಡಿದ್ದಾರೆ.

ಸಂಸದರಿಗೆ ಸ್ವಯಂ ಶಿಸ್ತು ಬೇಕು. ಅಧಿವೇಶನ ಒಂದು ಗಂಭೀರವಾದ ವಿಷಯ. ಕಲಾಪದಲ್ಲಿ ಪಾಲ್ಗೊಳ್ಳದೇ ಇರುವುದಕ್ಕಿಂತಲೂ ಮುಖ್ಯವಾದ ಕೆಲಸ ಸಂಸದರಿಗೆ ಮತ್ತೇನು ಇರುತ್ತದೆ. ಗೈರು ಆಗಬೇಡಿ ಎಂದು ಎಷ್ಟು ಬಾರಿ ಹೇಳಬೇಕು? ನೀವು ಸಣ್ಣ ಮಕ್ಕಳಲ್ಲ, ಸಂಸದರು. ಪ್ರಸ್ತುತ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ನೀವು ಬದಲಾಗಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ನಿಮ್ಮನ್ನು ಬದಲಿಸಲಾಗುತ್ತದೆ ಪ್ರಧಾನಿ ಎಚ್ಚರಿಕೆ ಸಂದೇಶವನ್ನು ಬಿಜೆಪಿ ಸಂಸದರರೊಬ್ಬರಿಗೆ ಹೇಳಿದ್ದಾರೆ.

ಅಧಿವೇಶನಕ್ಕೆ ಸಂಸದರೆಲ್ಲರೂ ಹಾಜರಾಗಿ ಚರ್ಚೆಯಲ್ಲಿ ಪಾಲ್ಗೊಳ್ಳಬೇಕು ಎಂದು ಎಲ್ಲಾ ಪಕ್ಷಗಳು ಫರ್ಮಾನು
ಹೊರಡಿಸುತ್ತವೆ. ಆದರೂ ಅನೇಕ ಸಂಸದರು ಒಂದಲ್ಲ ಒಂದು ಕಾರಣಕ್ಕೆ ಗೈರು ಹಾಜರಾಗುತ್ತಿದ್ದಾರೆ. ಇದಕ್ಕೆ ಆಡಳಿತಾರೂಢ ಬಿಜೆಪಿ ಸಂಸದರೂ ಹೊರತಲ್ಲ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddaramaiah ವಿಧಾನಸಭೆ ಚಳಿಗಾಲದ ಅಧಿವೇಶನಕ್ಕೆ ಬೆಳಗಾವಿ ಸಜ್ಜು.

CM Siddaramaiah ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಳಿಗಾಲದ ಅಧಿವೇಶನದ ಪ್ರಯುಕ್ತ ಸುವರ್ಣ...

Shimoga News ಜೀವರಕ್ಷಣಾ ಕೌಶಲ್ಯವನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕು- ಸೀಮಾ ಆನಂದ್

Shimoga News ಜೀವ ರಕ್ಷಿಸುವ ಕೌಶಲ್ಯವನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳುವುದು ಅತ್ಯಂತ...

Gurudutt Hegde ಧ್ವಜವಂತಿಗೆ ನೀಡುವ ಮೂಲಕ ನಿವೃತ್ತ ಸೈನಿಕರಿಗೆ & ಅವರ ಅವಲಂಬಿತರಿಗೆ ನೆರವಾಗೋಣ- ಗುರುದತ್ತ ಹೆಗಡೆ

Gurudutt Hegde ಸಶಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸಿದ ಸೈನಿಕರನ್ನು ಗೌರವಿಸುವ ಉದ್ದೇಶದಿಂದ...

D S Arun ರಾಜ್ಯ ಕ್ರಿಕೆಟ್ ಸಂಸ್ಥೆಯ ನಿರ್ದೇಶಕರಾಗಿ ಶಾಸಕ ಡಿ.ಎಸ್.ಅರುಣ್ ಆಯ್ಕೆ.

D S Arun ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಶಿವಮೊಗ್ಗ ವಲಯ...