Thursday, December 11, 2025
Thursday, December 11, 2025

ಹಸ್ತಕ್ಷೇಪ,ಅಲ್ಲಗಳೆದ ಸಚಿವ ಕೆ ಎಸ್ ಈಶ್ವರಪ್ಪ.

Date:

ಸ್ಥಳೀಯ ಗ್ರಾಮ ಪಂಚಾಯತಿ ಆಡಳಿತದಲ್ಲಿ ರಾಜ್ಯ ಸರ್ಕಾರ ಹಸ್ತಕ್ಷೇಪ ಮಾಡುತ್ತಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಈಶ್ವರಪ್ಪ ಅವರು ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಬಿಜೆಪಿಗೆ ಬಹುಮತ ಇದ್ದರೂ ವಿಧಾನಪರಿಷತ್ತಿನಲ್ಲಿ ಬಹುಮತದ ಕೊರತೆಯಿಂದಾಗಿ ಕೆಲವು ಕಾನೂನು ಯಶಸ್ವಿ ಅನುಷ್ಠಾನ ಸಾಧ್ಯವಾಗುತ್ತಿಲ್ಲ.

ಸ್ಥಳೀಯ ಅಭಿವೃದ್ಧಿ ಕ್ರಿಯಾಯೋಜನೆಗಳನ್ನು ಜಿಪಂಗಿ ಕಳುಹಿಸಿ, ಅನುಮೋದನೆ ಪಡೆದುಕೊಳ್ಳುವಲ್ಲಿ ಸಮಸ್ಯೆಗಳ ಆಗುವ ಸಾಧ್ಯತೆಗಳಿವೆ. ಇಂತಹ ತಾಂತ್ರಿಕ ಕಾರಣಗಳಿಂದಾಗಿ 39 ಯೋಜನೆಗಳು ವಿಫಲಗೊಂಡಿವೆ. 6ಸಾವಿರ ಗ್ರಾಮ ಪಂಚಾಯಿತಿ ವ್ಯಾಪ್ತಿ 1453ಗ್ರಾ.ಪಂ ಗಳಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕಗಳು ಯಶಸ್ವಿಯಾಗಿ ಸ್ಥಾಪನೆಗೊಂಡಿವೆ. ಬೇರೆಡೆ ಡಿಪಿಆರ್ ಆಗಿದೆ. ಸ್ಥಳ ಸಮಸ್ಯೆ ಸೇರಿದಂತೆ ಕೆಲವು ಅಡ್ಡಿಗಳಿವೆ. ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಚುನಾವಣೆಗೆ ಮೀಸಲಾತಿ ಸಂಬಂಧಿತ 2800 ಆಕ್ಷೇಪಗಳು ಇರುವ ಹಿನ್ನೆಲೆಯಲ್ಲಿ ವಿಳಂಬವಾಗುತ್ತಿದೆ. ಉಪವಿಭಾಗೀಯ ಮಟ್ಟದಲ್ಲಿನ ಕೆಲವು ಕಚೇರಿಗಳಲ್ಲಿ ಅಗತ್ಯಕ್ಕಿಂತಲೂ ಹೆಚ್ಚಿನ ಸಿಬ್ಬಂದಿ ಗಳಿದ್ದರೂ ಕಡತ ವಿಲೇವಾರಿ ವಿಳಂಬವಾಗುತ್ತಿದೆ. ಆದ್ದರಿಂದ ಜಿಲ್ಲಾ ಕೇಂದ್ರಗಳಲ್ಲಿ ಮಾತ್ರ ಇಲಾಖೆಗಳ ಕಚೇರಿ ವ್ಯವಸ್ಥೆ ಬಗ್ಗೆ ಸಮಾಲೋಚನೆ ನಡೆಯುತ್ತಿದೆ ಎಂದು ಕೆಎಸ್ ಈಶ್ವರಪ್ಪ ಅವರು ತಿಳಿಸಿದರು.

ಗ್ರಾ. ಪಂ ಗಳಿಗೆ ಸೋಲಾರ್ ಅಳವಡಿಸುವ ವಿಚಾರದಲ್ಲಿ ರಾಜ್ಯ ಮಟ್ಟದಲ್ಲಿ ಗುತ್ತಿಗೆ ನೀಡಲಾಗಿದೆ. ಇದರಿಂದ ಗ್ರಾ ಪಂ ಗಳ ಅಧಿಕಾರ ವಿಕೇಂದ್ರೀಕರಣ ಕಲ್ಪನೆಯನ್ನು ಕಸಿದುಕೊಳ್ಳಲಾಗುತ್ತಿದೆ ಎಂಬ ಆರೋಪ ಸತ್ಯಕ್ಕೆ ದೂರವಾಗಿದೆ. ರಾಜ್ಯ ಸರ್ಕಾರ ಸೂಚಿಸಿದ ಏಜೆನ್ಸಿಯಿಂದಲೇ ಪಂಚಾಯಿತಿಗಳು ಸೋಲಾರ್ ಹಾಕಿಸಬೇಕು ಎಂಬ ರಾಜ್ಯ ಸರ್ಕಾರ ಯಾವ ಆದೇಶವನ್ನು ಮಾಡಿಲ್ಲ.

ಗುಣಮಟ್ಟಕ್ಕೆ ರಾಜಿ ಇಲ್ಲದಂತೆ ಪ್ರತಿ ಜಿಲ್ಲೆಗೂ ಒಬ್ಬರಂತೆ ಗುತ್ತಿಗೆದಾರರನ್ನು ಆಯ್ಕೆ ಮಾಡಲಾಗಿದೆ. ಏಜೆನ್ಸಿ ಐದು ವರ್ಷಗಳ ನಿರ್ವಹಣೆ ಜವಾಬ್ದಾರಿಯನ್ನು ವಹಿಸಿಕೊಂಡಿದೆ. ಆದರೆ ಏಜೆನ್ಸಿಗಳ ಮೂಲಕವೇ ಸೋಲಾರ್ ಹಾಕಿಸುವುದು ಕಡ್ಡಾಯವಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರು ಸಾಗರದ, ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಎಂಎಸ್ಐಎಲ್ ಅಧ್ಯಕ್ಷ ಮತ್ತು ಶಾಸಕ ಎಚ್. ಹಾಲಪ್ಪ, ಪಕ್ಷದ ಅಭ್ಯರ್ಥಿ ಡಿ.ಎಸ್ ಅರುಣ್, ಬಿಜೆಪಿ ಜಿಲ್ಲಾಧ್ಯಕ್ಷ ಟಿ. ಡಿ. ಮೇಘರಾಜ್, ಸ್ಥಳೀಯ ಮಂಡಳಗಳ ಅಧ್ಯಕ್ಷರಾದ ಲೋಕನಾಥ್ ಬಿಳಿಸಿರಿ ಇನ್ನು ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DC Shivamogga ಡಿಸೆಂಬರ್ 12 & 13, ಶಿವಮೊಗ್ಗದಲ್ಲಿ ಕಂದಾಯ ಇಲಾಖಾ ನೌಕರರಿಂದ ” ಕಂದಾಯೋತ್ಸವ”- ವಿ.ಅಭಿಷೇಕ್

DC Shivamogga ಒತ್ತಡದಲ್ಲಿ ಕಾರ್ಯನಿರ್ವಹಿಸುವ ಕಂದಾಯ ಇಲಾಖೆಯ ಅಧಿಕಾರಿ-ಸಿಬ್ಬಂಧಿಗಳು ತಮ್ಮ...

MESCOM ಡಿಸೆಂಬರ್ 11 & 12 ಶಿವಮೊಗ್ಗ ನಗರಕ್ಕೆ ಕುಡಿಯುವ ನೀರಿಲ್ಲ, ಒಳ ಮಂಡಳಿ ಪ್ರಕಟಣೆ

MESCOM ಶಿವಮೊಗ್ಗ ನಗರದ ಮಂಡ್ಲಿ ಭಾಗದಲ್ಲಿ ಮೆಸ್ಕಾಂ ತುರ್ತು ನಿರ್ವಹಣಾ ಕಾಮಗಾರಿ...

Department of School Education ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಶಿವಮೊಗ್ಗ ಜಿಲ್ಲೆಗೆ ಸಮಗ್ರ ಚಾಂಪಿಯನ್ ಪಟ್ಟ

Department of School Education ಬೆಂಗಳೂರಿನಲ್ಲಿ ಶಾಲಾ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ...