Friday, February 14, 2025
Friday, February 14, 2025

ದಾರ್ಶನಿಕರನ್ನ ವೈಚಾರಿಕವಾಗಿ ನೋಡಬೇಕು.

Date:

ಬಸವಣ್ಣ, ಸಿದ್ದರಾಮ, ಅಲ್ಲಮಪ್ರಭು ಸೇರಿದಂತೆ ವಿವಿಧ ದಾರ್ಶನಿಕರ ನೀಡಿದ ತತ್ವಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಶಿಕಾರಿಪುರದ ಗುರುಭವನದಲ್ಲಿ ಜನಸ್ಪಂದನಾ ಟ್ರಸ್ಟ್ ಹಾಗೂ ಸುವ್ವಿ ಪಬ್ಲಿಕೇಷನ್ಸ್ ಆಶ್ರಯದಲ್ಲಿ ನಡೆದ ಉಪನ್ಯಾಸಕ ಪುಟ್ಟಪ್ಪ ಕೆ.ಎಚ್. ಬಿಳವಾಣಿ ಬರೆದ ಲೋಕ ಚಿಂತಕ ಸಿದ್ಧರಾಮ ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸಮಾಜ ಚಿಂತಕ ಸೊರಬದ ರಾಜಪ್ಪ ಮಾಸ್ತರ್, ಸಿದ್ದರಾಮರು ಸೇರಿದಂತೆ ಅನೇಕ ದಾರ್ಶನಿಕರು ಸಮಾಜದಲ್ಲಿರುವ ಮೌಡ್ಯವನ್ನು ತೊಲಗಿಸಲು ಶ್ರಮಿಸಿದ್ದರು. ಈ ದಾರ್ಶನಿಕರನ್ನು ಪೌರಾಣಿಕ ಹಿನ್ನೆಲೆಯಿಂದ ನೋಡದೇ ವೈಚಾರಿಕ ಮನೋಭಾವದಿಂದ ನೋಡಬೇಕು. ದಾರ್ಶನಿಕರ ತತ್ವ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಭೋವಿ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎಚ್. ಜಯಪ್ಪ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಡಿ. ಮಧುಕೇಶವ, ಜಾನಪದ ಪರಿಷತ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೃಷ್ಣಮೂರ್ತಿ, ಸಾಹಿತಿ ಡಾ. ಸುಧಾಕರ ಹಿರೇಕಸವಿ, ಸುನಿಲ್ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ಅತ್ಯುತ್ತಮ‌ ರೋಟರಿ ನಾಯಕರನ್ನ ಗುರುತಿಸಿ ಗೌರವಿಸುವ ಕಾರ್ಯಕ್ರಮ

Rotary Shivamogga ಶಿವಮೊಗ್ಗ ನಗರದ ಕಾಸ್ಮೋ ಕ್ಲಬ್‌ನಲ್ಲಿ ರೋಟರಿ ಕ್ಲಬ್ ಶಿವಮೊಗ್ಗ...

Shivamogga City Corporation ಕೆಎಫ್ ಡಿ ಬಗ್ಗೆ ಅರಿವು ಮೂಡಿಸಿ,ಪ್ರಕರಣ ಹೆಚ್ಚದಂತೆ ಗಮನವಹಿಸಿ- ವಿ.ಎಸ್.ರಾಜೀವ್

Shivamogga City Corporation ಶಿವಮೊಗ್ಗ ತಾಲ್ಲೂಕುಗಳಲ್ಲಿ ಕೆಎಫ್‌ಡಿ ಪ್ರಕರಣಗಳು ಹೆಚ್ಚದಂತೆ...

Rapido Bike ಶಿವಮೊಗ್ಗಕ್ಕೂ ಎಂಟ್ರಿ ಕೊಟ್ಟ ರ್ಯಾಪಿಡೊ ಬೈಕ್

Rapido Bike ಶಿವಮೊಗ್ಗ ನಗರದಲ್ಲಿ ರ್ಯಾಪಿಡೋ ಬೈಕ್ ಓಡಾಟ ಶುರುವಾಗಿದೆ.ರ್ಯಾಪಿಡೋ...