Thursday, August 13, 2026
Thursday, August 13, 2026

ದಾರ್ಶನಿಕರನ್ನ ವೈಚಾರಿಕವಾಗಿ ನೋಡಬೇಕು.

Date:

ಬಸವಣ್ಣ, ಸಿದ್ದರಾಮ, ಅಲ್ಲಮಪ್ರಭು ಸೇರಿದಂತೆ ವಿವಿಧ ದಾರ್ಶನಿಕರ ನೀಡಿದ ತತ್ವಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಶಿಕಾರಿಪುರದ ಗುರುಭವನದಲ್ಲಿ ಜನಸ್ಪಂದನಾ ಟ್ರಸ್ಟ್ ಹಾಗೂ ಸುವ್ವಿ ಪಬ್ಲಿಕೇಷನ್ಸ್ ಆಶ್ರಯದಲ್ಲಿ ನಡೆದ ಉಪನ್ಯಾಸಕ ಪುಟ್ಟಪ್ಪ ಕೆ.ಎಚ್. ಬಿಳವಾಣಿ ಬರೆದ ಲೋಕ ಚಿಂತಕ ಸಿದ್ಧರಾಮ ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸಮಾಜ ಚಿಂತಕ ಸೊರಬದ ರಾಜಪ್ಪ ಮಾಸ್ತರ್, ಸಿದ್ದರಾಮರು ಸೇರಿದಂತೆ ಅನೇಕ ದಾರ್ಶನಿಕರು ಸಮಾಜದಲ್ಲಿರುವ ಮೌಡ್ಯವನ್ನು ತೊಲಗಿಸಲು ಶ್ರಮಿಸಿದ್ದರು. ಈ ದಾರ್ಶನಿಕರನ್ನು ಪೌರಾಣಿಕ ಹಿನ್ನೆಲೆಯಿಂದ ನೋಡದೇ ವೈಚಾರಿಕ ಮನೋಭಾವದಿಂದ ನೋಡಬೇಕು. ದಾರ್ಶನಿಕರ ತತ್ವ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಭೋವಿ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎಚ್. ಜಯಪ್ಪ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಡಿ. ಮಧುಕೇಶವ, ಜಾನಪದ ಪರಿಷತ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೃಷ್ಣಮೂರ್ತಿ, ಸಾಹಿತಿ ಡಾ. ಸುಧಾಕರ ಹಿರೇಕಸವಿ, ಸುನಿಲ್ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...