Friday, March 14, 2025
Friday, March 14, 2025

ಹರಿಹರದಲ್ಲಿ ತುಂಗಾರತಿ

Date:

ಹರಿಹರದ ಪಂಚಮಸಾಲಿ ಪೀಠದ ನೇತೃತ್ವದಲ್ಲಿ ತುಂಗಾರತಿ ನಡೆಯಲಿದೆ. ಹರ ಜಾತ್ರೆಗೆ ಸಂಬಂಧಿಸಿದ ಸಿ.ಡಿ ಯನ್ನು ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಬೆಂಗಳೂರಿನಲ್ಲಿ ಬಿಡುಗಡೆ ಮಾಡಿದರು.

ಕಾಶಿಯಲ್ಲಿ ಗಂಗಾ ಆರತಿ ಆಯೋಜಿಸುವ ಮಾದರಿಯಲ್ಲಿ ದಾವಣಗೆರೆಯ ಹರಿಹರದಲ್ಲಿ ತುಂಗಾ ಆರತಿ ನಡೆಸಲು ಮೂವತ್ತು ಕೋಟಿ ವೆಚ್ಚದಲ್ಲಿ ಮಂಟಪಗಳನ್ನು ನಿರ್ಮಿಸಲಾಗುವುದು ಎಂದು ಮಾನ್ಯ ಮುಖ್ಯಮಂತ್ರಿ ಅವರು ತಿಳಿಸಿದ್ದಾರೆ.

ಮುಂದಿನ ವರ್ಷದ ಮೊದಲನೇ ತಿಂಗಳು 13 ಹಾಗೂ 14ರಂದು ಹರ ಜಾತ್ರೆ ನಡೆಯಲಿದೆ. ಜಾತ್ರೆಗೆ ಸಂಬಂಧಿಸಿದ ಲಾಂಛನ, ಟಿ ಶರ್ಟ್ ಹಾಗೂ ಸಿಡಿಯನ್ನು ಮುಖ್ಯಮಂತ್ರಿ ಅವರು ಬಿಡುಗಡೆ ಮಾಡಿದರು.

ಜನವರಿ ತಿಂಗಳಿನಲ್ಲಿ ನಡೆಯುವ ಹರ ಜಾತ್ರೆಯ ಸಮಯದಲ್ಲೇ ತುಂಗಾ ಆರತಿ ಮಂಟಪಗಳ ನಿರ್ಮಾಣಕ್ಕೆ ಚಾಲನೆ ನೀಡಲಾಗುವುದು ಎಂದರು.

ತುಂಗಾ ಆರತಿ ಮಂಟಪಗಳ ನಿರ್ಮಾಣ ಹರಿಹರ ಪಂಚಮಸಾಲಿ ಪೀಠದ ವಂಚನಾನಂದ ಸ್ವಾಮೀಜಿ ಬಹುದೊಡ್ಡ ಕನಸಾಗಿದೆ. ಅವರೇ ಕಟ್ಟಡಗಳ ವಿನ್ಯಾಸ ಹಾಗೂ ಯೋಜನಾ ವರದಿ ಸಿದ್ಧಪಡಿಸಿ, ಸರ್ಕಾರಕ್ಕೆ ಸಲ್ಲಿಸಿದ್ದಾರೆ. ಅವರ ಕೋರಿಕೆಯಂತೆ 30 ಕೋಟಿ ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು ಕೂಡ ತಿಳಿಸಿದ್ದಾರೆ.

ಪ್ರತಿವರ್ಷವೂ ಹರ ಜಾತ್ರಾ ಮಹೋತ್ಸವ ಜನಪ್ರಿಯವಾಗುತ್ತಿದೆ. ಈ ಜಾತ್ರೆಯ ಮೂಲಕ ಸಂಸ್ಕೃತಿಯನ್ನು ಉಳಿಸಲು ಸಹಾಯಕ. ಮಟ್ಟದ ಶೈಕ್ಷಣಿಕ ಹಾಗೂ ಧಾರ್ಮಿಕ ಕೆಲಸಗಳಿಗೂ ಸರ್ಕಾರ ಬೆಂಬಲ ನೀಡುತ್ತದೆ ಎಂದು ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ, ಹಾಗೂ ಸಚಿವರಾದ ಡಾ. ಸಿ. ಎನ್. ಅಶ್ವತ್ಥನಾರಾಯಣ ಇನ್ನು ಮುಂತಾದವರು ಉಪಸ್ಥಿತರಿದ್ದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Senior Chamber International Organization ಪುಷ್ಪ ಎಸ್ ಶೆಟ್ಟಿಅವರಿಗೆ ‌ಸೀನಿಯರ್ ಚೇಂಬರ್ ಉನ್ನತ ಪ್ರಶಸ್ತಿ

Senior Chamber International Organization ಬ್ರಹ್ಮಾವರದಲ್ಲಿ ನಡೆದ ಸೀನಿಯರ್ ಚೇಂಬರ್ ಇಂಟರ್...

State Film Awards 2020 ನೇ ಸಾಲಿನ ಚಲನಚಿತ್ರ ಪ್ರಶಸ್ತಿ ಘೋಷಣೆ

State Film Awards 2020ನೇ ಸಾಲಿನ ಆಯ್ಕೆ ಸಮಿತಿಯು ಸಲ್ಲಿಸಿರುವ ವರದಿಯಲ್ಲಿ...

Klive Special ಹೆತ್ತವಳಿಗೊಂದು ಕವನ-ನಮನ

Klive Special ದೇವರ ಸ್ವರೂಪ ಗರ್ಭದಲ್ಲಿ ಹೊತ್ತುನವಮಾಸಕ್ಕೆ ಹೆತ್ತುಮೌಲ್ಯಗಳನ್ನೇ ಬಿತ್ತುಸಲಹಿದೆ ನೀಡಿ ಕೈತುತ್ತು ಅಮ್ಮ...

Guarantee Scheme ಸತ್ಯ & ಶುದ್ಧ ಮಾರ್ಗದಿಂದ ರಾಷ್ಟ್ರ ಕಟ್ಟಲು ಸಾಧ್ಯ- ಸಿ.ಎಸ್.ಚಂದ್ರಭೂಪಾಲ್

Guarantee Scheme ಅಂತರಂಗ ಮತ್ತು ಬಹಿರಂಗ ಶುದ್ದಿಯಿಂದ ಹಾಗೂ ಸತ್ಯದ ಮಾರ್ಗದಲ್ಲಿ...