Sunday, December 7, 2025
Sunday, December 7, 2025

ಬೆಳೆನಷ್ಟ ಪರಿಹಾರ ನೀಡಿಕೆ ಪ್ರಗತಿಯಲ್ಲಿದೆ

Date:

ರಾಜ್ಯದಲ್ಲಿ ಕಳೆದ ಮೂರು ತಿಂಗಳಲ್ಲಿ 10.62 ಲಕ್ಷ ರೈತರಿಗೆ 681.90 ಕೋಟಿ ರೂ. ಇನ್ ಪುಟ್ ಸಬ್ಸಿಡಿಯನ್ನು ನೇರವಾಗಿ ರೈತರ ಖಾತೆಗೆ ಪಾವತಿಸಲಾಗಿದೆ. “ರೈತರಿಗೆ ಕಡಿಮೆ ಅವಧಿಯಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಬೆಳೆ ಪರಿಹಾರ ವಿತರಿಸಿರುವುದು ದಾಖಲೆ ಎನಿಸಿದೆ” ಎಂದು ಸಚಿವ ಆರ್.ಅಶೋಕ್ ತಿಳಿಸಿದರು.

ಬೆಳೆ ಪರಿಹಾರಕ್ಕೆ ನವೆಂಬರ್.30 ರೊಳಗೆ ಅರ್ಜಿ ಸ್ವೀಕರಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿತ್ತು. ಅದರಂತೆ ಅರ್ಜಿ ಸ್ವೀಕರಿಸಿ ಪರಿಹಾರ ವಿತರಿಸಲಾಗುತ್ತಿದೆ. ಕಳೆದ 21 ದಿನದಲ್ಲಿ 551 ಕೋಟಿ.ರೂ. ಪರಿಹಾರ ಬಿಡುಗಡೆಯಾಗಿದೆ. ಬೆಳೆ ನಷ್ಟ ಪರಿಹಾರಕ್ಕೆ ಇನ್ನೂ ಅರ್ಜಿಗಳು ಸಲ್ಲಿಕೆಯಾಗುತ್ತಿವೆ”. ಎಂದು ಹೇಳಿದರು.

ಕೋವಿಡ್ ಪರಿಹಾರ ಕೋರಿ ಈವರೆಗೆ 15999 ಅರ್ಜಿ ಸಲ್ಲಿಕೆಯಾಗಿವೆ. ಈ ಪೈಕಿ ಬಿಪಿಎಲ್ ಕುಟುಂಬದ 9080 ಹಾಗೂ ಎಪಿಎಲ್ ಕುಟುಂಬದ 5242 ಪ್ರಕರಣಗಳಿಗೆ ಜಿಲ್ಲಾಧಿಕಾರಿಗಳ ಅನುಮೋದನೆ ದೊರಕಿದೆ. 9647 ಪ್ರಕರಣಗಳಲ್ಲಿ ಕೇಂದ್ರ ಸರ್ಕಾರದಿಂದ 50,000 ರೂ. ಪರಿಹಾರ ಪಾವತಿಯಾಗಿದೆ”. ಎಂದು ಆರ್ ಅಶೋಕ್ ತಿಳಿಸಿದ್ದಾರೆ.

ಕೋವಿಡ್ ನಿಂದ ಬಿಪಿಎಲ್ ಕುಟುಂಬಗಳು ಅವಲಂಬಿಸಿದ್ದ. ದುಡಿಯುವವರನ್ನು ಕಳೆದುಕೊಂಡಿದ್ದರಷ್ಟೇ 1 ಲಕ್ಷ ರೂ. ಪರಿಹಾರ ನೀಡಲು ನಿರ್ಧರಿಸಲಾಗಿತ್ತು. ಈಗ ದುಡಿಯುವ ಎಂಬ ಪದ ತೆಗೆದುಹಾಕಲಾಗಿದೆ. ಪರಿಹಾರ ಕೋರಿ ಹೆಚ್ಚಿನ ಪ್ರಮಾಣದಲ್ಲಿ ಅರ್ಜಿ ಸಲ್ಲಿಕೆಯಾಗಿಲ್ಲ. ಅರ್ಹರು ಅರ್ಜಿ ಸಲ್ಲಿಸುವಂತೆ ಜಾಗೃತಿ ಮೂಡಿಸಲಾಗುವುದು” ಎಂದು ಸಚಿವರು ತಿಳಿಸಿದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ನಿವೃತ್ತ ಅಧ್ಯಾಪಕರಿಗೆ ಪಂಚಣಿ ಪರಿಷ್ಕರಣೆಯಿಂದ ಅನ್ಯಾಯ, ಸರಿಪಡಿಸಲು ಆಗ್ರಹ

ನಿವೃತ್ತ ಅಧ್ಯಾಪಕರಿಗೆ ಆಗುವ ಅನ್ಯಾಯವನ್ನು ಸರಿಪಡಿಸುವಂತೆ ಜಿಲ್ಲಾ ವಿಶ್ವವಿದ್ಯಾಲಯ ಮತ್ತು ಪದವಿ...

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...