ಕರ್ನಾಟಕ ಜೀವವೈವಿಧ್ಯ ಮಂಡಳಿಯು ಪಶ್ಚಿಮಘಟ್ಟ ಉಳಿವಿಗಾಗಿ ಅರಣ್ಯ ಪರಿಸರ ಮತ್ತು ಹವಾಮಾನ ಬದಲಾವಣೆಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಗಮನಹರಿಸುವಂತೆ ಹಾಗೂ ಮುಂಬರುವ ಬಜೆಟ್ ಅಧಿವೇಶನದಲ್ಲಿ ಬಜೆಟ್ ಮೀಸಲಿಡುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದೆ.
ಇತ್ತೀಚಿನ ವರ್ಷಗಳಲ್ಲಿಪ್ರಕೃತಿ ವಿಕೋಪಕ್ಕೆ ಪಶ್ಚಿಮ ಘಟ್ಟಗಳು ಭೂಕುಸಿತಕ್ಕೆ ಒಳಪಡುತ್ತಿದೆ. ನಾಶವಾಗುತ್ತಿರುವ ಮೀಸಲು ಅರಣ್ಯಗಳ ರಕ್ಷಣೆಗೆ ಅರಣ್ಯ ಮತ್ತು ಕಂದಾಯ ಇಲಾಖೆಗಳು ಕೈಜೋಡಿಸಬೇಕು. ಜೀವ ವೈವಿಧ್ಯತೆಗೆ ಧಕ್ಕೆ ತಂದಿರುವ ಏಕಬೆಳೆ ನೀಡುವಿಕೆಯನ್ನು ಕೊನೆಗೊಳಿಸಬೇಕು. ಗ್ರಾಮೀಣ ಅಭಿವೃದ್ಧಿ ಮತ್ತು ಅರಣ್ಯ ಇಲಾಖೆಗಳು ಸ್ಥಳೀಯ ಅರಣ್ಯಗಳು ಮತ್ತು ಜೀವವೈವಿದ್ಯಗಳ ರಕ್ಷಣೆಗಾಗಿ ಗ್ರಾಮ ಸಮಿತಿಗಳನ್ನು ಬಲಪಡಿಸಬೇಕು ಎಂಬ 22 ಅಂಶಗಳನ್ನು ಒಳಗೊಂಡ ಮನವಿ ಪತ್ರವನ್ನು ಕರ್ನಾಟಕ ಜೀವವೈವಿಧ್ಯ ಮಂಡಳಿಯ ಅಧ್ಯಕ್ಷ ‘ಅನಂತ ಹೆಗಡೆ ಅಶೀಸರ’ ಅವರ ನೇತೃತ್ವದ ಸಮಿತಿಯು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದೆ.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.