Monday, July 13, 2026
Monday, July 13, 2026

ಬೆಳಗಾವಿ ಅಧಿವೇಶನ : ಸರ್ಕಾರಕ್ಕೆ ಅಗ್ನಿಪರೀಕ್ಷೆ

Date:

ಬೆಳಗಾವಿಯಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭ. ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸಲಿರುವ ವಿರೋಧ ಪಕ್ಷದ ನಾಯಕರು.

ಇಂದಿನಿಂದ ಆರಂಭವಾಗಿರುವ ಬೆಳಗಾವಿ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಮತಾಂತರ ನಿಷೇಧ ವಿಧೇಯಕ ಮಂಡಿಸಲು ಮುಂದಾಗಿದೆ. ಈ ಬಗ್ಗೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದೆ.

ಕಳೆದೆರಡು ವರ್ಷದಿಂದ ಕೋವಿಡ್ ಲಾಕ್ಡೌನ್ ನಿಂದಾಗಿ ಬೆಳಗಾವಿ ಸುವರ್ಣಸೌಧದಲ್ಲಿ ಅಧಿವೇಶನ ನಡೆದಿರಲಿಲ್ಲ. ಈ ಬಾರಿ ಕೋವಿಡ್-19, ಡೆಲ್ಟಾ ಮತ್ತು ಓಮಿಕ್ರಾನ್ ವೈರಸ್ ಹೆಚ್ಚಳದ ನಡುವೆಯೂ ಸರ್ಕಾರ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಅಧಿವೇಶನ ನಡೆಸಲು ನಿರ್ಧರಿಸಿದೆ.

ಈ ಬಾರಿ ಅಧಿವೇಶನದಲ್ಲಿ ವಿರೋಧಪಕ್ಷಗಳು ಸರ್ಕಾರದ ವಿರುದ್ಧ ಬಿಟ್ ಕಾಯಿನ್ ಪ್ರಕರಣ, 40 ಪರ್ಸೆಂಟೇಜ್ ಆರೋಪ, ಮಳೆ ಹಾನಿ, ಕೋವಿಡ್ ಪರಿಹಾರ ಕೊರತೆ, ನೀರಾವರಿ ಯೋಜನೆಗಳು ಮತ್ತು ರಸ್ತೆ ಮೂಲಸೌಕರ್ಯ ಸಮಸ್ಯೆಗಳ ಕುರಿತು ಪಂಚಾಸ್ತ್ರ ಪ್ರಯೋಗಿಸಲು ಸಿದ್ಧವಾಗಿವೆ.

“ಜನಪರ ವಿಚಾರಗಳ ಬಗ್ಗೆ ಚರ್ಚೆ ಮಾಡುತ್ತೇವೆ. ಇದರಲ್ಲಿ ಯಾವುದೇ ಮುಲಾಜಿನ ಪ್ರಶ್ನೆ ಇಲ್ಲ ” ಎಂದು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಅವರು ತಿಳಿಸಿದ್ದಾರೆ.

ಈ ಬಾರಿಯ ಅಧಿವೇಶನದಲ್ಲಿ “ಅಭಿವೃದ್ಧಿ ಪರವಾಗಿ ಅರ್ಥಪೂರ್ಣವಾಗಿ ಚರ್ಚೆಯಾಗಬೇಕೆಂದು ಸರ್ಕಾರದ ಆಶಯವಾಗಿದೆ” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B. Y. Raghavendra ಕೆರೆ ತುಂಬಿಸಿದ ಏತ ನೀರಾವರಿ: ಉಡುಗಣಿ- ತಾಳಗುಂದ- ಹೊಸೂರು ಗ್ರಾಮಸ್ಥರ ಕಣ್ಣಲ್ಲಿ ಆನಂದ ಭಾಷ್ಪ

B. Y. Raghavendra ಶಿಕಾರಿಪುರ ತಾಲೂಕಿನ ಕೃಷಿ ರಂಗದ ಇತಿಹಾಸದಲ್ಲೇ ಅತ್ಯಂತ...

U.T. Khader ತೀರ್ಥಹಳ್ಳಿ ಸಾರ್ವಜನಿಕ ಆಸ್ಪತ್ರೆಗೆ ಆರೋಗ್ಯ ಸಚಿವ ಖಾದರ್ ಭೇಟಿ: ಪ್ರತೀ ವಾರ್ಡಿನ ರೋಗಿಗಳೊಂದಿಗೆ ಕ್ಷೇಮ ವಿಚಾರಣೆ

U.T. Khader ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಸರ್ಕಾರಿ ಆಸ್ಪತ್ರೆಗೆ ಆರೋಗ್ಯ...

Klive Special Article ಸಕಲ ವಿದ್ಯಾಸಂಪನ್ನ, ಮಹಾಮಹಿಮ ಶ್ರೀವಿಜಯೀಂದ್ರ ತೀರ್ಥರು. ...

ದಿನದ ಒಳ್ಳೆಯಮಾತು(ಯತಿಗಳ ಸ್ಮರಣೆ) ವಿಜಯೀಂದ್ರತೀರ್ಥ ಗುರುಸಾರ್ವಭೌಮರು Klive Special Article ಶ್ರೀವಿಜಯೀಂದ್ರತೀರ್ಥಗುರುಗಳು ಕಲಿಯುಗ ಕಲ್ಪತರು...