Monday, December 15, 2025
Monday, December 15, 2025

ಕನ್ನಡಕ್ಕೆ ಅನುದಾನ ತಾರತಮ್ಯ ಬೇಡ

Date:

ಕನ್ನಡ ಭಾಷೆಗೆ ಶಾಸ್ತ್ರೀಯ ಭಾಷೆ ಸ್ಥಾನಮಾನ ನೀಡಿದರೂ ಸಹ ಕನ್ನಡ ಭಾಷೆ ಅಭಿವೃದ್ಧಿಗೆ ಕೇಂದ್ರ ಸರ್ಕಾರ ನೀಡುತ್ತಿರುವ ಅನುದಾನ ಹೆಚ್ಚಿಸಬೇಕು ಎಂದು ಎಲ್ಲೆಡೆ ಅಭಿಪ್ರಾಯ ವ್ಯಕ್ತವಾಗುತ್ತಿದೆ.

ಮೈಸೂರಿನ ಭಾಷಾ ಸಂಸ್ಥಾನಕ್ಕೆ ಯಾವುದೇ ರೀತಿಯ ಮಂಜೂರಾತಿ ನೀಡುತ್ತಿಲ್ಲ. ವರ್ಷಕ್ಕೆ ಕೇವಲ 1 ಕೋಟಿ ರೂ. ಮಾತ್ರ ಅನುದಾನ ನೀಡಲಾಗುತ್ತಿದೆ. ಕೇಂದ್ರ ನೀಡಿರುವ ಅನುದಾನದ ಹಣ ಸಿಬ್ಬಂದಿಯ ವೇತನಕ್ಕಷ್ಟೇ ಮೀಸಲಾಗಿದೆ.

“ಸಂಸತ್ತಿನಲ್ಲಿ ಎರಡು ಪಕ್ಷದ ನಾಯಕರು ಪಕ್ಷಬೇಧವನ್ನು ಮರೆತು ಕನ್ನಡ ಭಾಷೆಗಾಗಿ ಸಂಸತ್ತಿನಲ್ಲಿ ಒಕ್ಕೊರಲಿನಿಂದ ಧ್ವನಿ ಎತ್ತಬೇಕು. ಕಾಂಗ್ರೆಸ್ ನ ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್ ಅವರ ದಾರಿಯನ್ನು ಉಳಿದವರು ಅನುಸರಿಸಬೇಕು. ಕನ್ನಡ ಸಂಘಟನೆಗಳು ಕೂಡ ಧ್ವನಿ ಎತ್ತಬೇಕು” ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಕಾರ್ಯದರ್ಶಿಯಾಗಿದ್ದ ಕೆ. ರಾಜಕುಮಾರ್ ಆಗ್ರಹಿಸಿದ್ದಾರೆ.

“ಎಲ್ಲಾ ಶಾಸ್ತ್ರೀಯ ಭಾಷೆಗಳಿಗೂ ಸಮಾನ ಸ್ಥಾನಮಾನ ನೀಡುವ ಬದಲು ಕೇಂದ್ರ ಸರ್ಕಾರ ತಾರತಮ್ಯ ನೀಡುತ್ತಿದೆ” ಎಂದು ಕರ್ನಾಟಕದ ರಾಜ್ಯಸಭಾ ಸದಸ್ಯರು ಜಿ.ಸಿ. ಚಂದ್ರಶೇಖರ್ ಸಂಸತ್ತಿನಲ್ಲಿ ಕನ್ನಡ ಪರ ಧ್ವನಿ ಎತ್ತಿದ್ದಾರೆ.

“ಮೂರು ವರ್ಷಗಳ ಅಂಕಿ-ಅಂಶ ನೋಡಿದರೆ ಕೇವಲ 28 ಸಾವಿರ ಜನರು ಮಾತನಾಡುವ ಸಂಸ್ಕೃತ ಭಾಷೆಗೆ 634 ಕೋಟಿ ‌ರೂ. ಅನುದಾನವನ್ನು ನೀಡಲಾಗಿದೆ.7 ಕೋಟಿ ಮಂದಿ ಮಾತನಾಡುವ ಕನ್ನಡಕ್ಕೆ ಸಿಕ್ಕಿರುವುದು ಕೇವಲ 7 ಕೋಟಿ ರೂ. ಎಂಬುದನ್ನು ಉಲ್ಲೇಖಿಸಿದ್ದಾರೆ. ಸಂಸ್ಕೃತಕ್ಕೆ ಇಷ್ಟು ಮೊತ್ತ ಕೊಟ್ಟಿರುವುದಕ್ಕೆ ಆಕ್ಷೇಪವಿಲ್ಲ. ಆದರೆ 32 ಕೋಟಿ ಜನರು ಮಾತನಾಡುವ ಉಳಿದ ಐದು ಭಾಷೆಗಳಾದ ಕನ್ನಡ, ತಮಿಳು, ತೆಲುಗು, ಮಲಯಾಳಂ, ಒಡಿಯಾ ಭಾಷೆಗಳಿಗೆ ಕೇವಲ 29 ಕೋಟಿ ರೂ. ಕೊಟ್ಟಿರುವುದು ಸರಿಯಲ್ಲ” ಎಂದು ರಾಜ್ಯಸಭೆಯಲ್ಲಿ ಜಿ.ಸಿ.ಚಂದ್ರಶೇಖರ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಡಿಸೆಂಬರ್ 16 & 17 ಶಿವಮೊಗ್ಗದ ರವೀಂದ್ರನಗರಕ್ಕೆ ವಿದ್ಯುತ್ ಸರಬರಾಜು ಇಲ್ಲ, ಮೆಸ್ಕಾಂ ಪ್ರಕಟಣೆ

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯ ರವೀಂದ್ರ ನಗರದಲ್ಲಿ ಓವರ್...

Shamanur Shivashankarappa ವಿಧಾನ ಸಭಾ ಕಲಾಪ: ಅಗಲಿದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪನವರಿಗೆ ಶ್ರದ್ಧಾಂಜಲಿ

Shamanur Shivashankarappa ಎಲ್ಲ ರಾಜಕಾರಣಿಗಳೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದ ಶಾಮನೂರು ಶಿವಶಂಕರಪ್ಪ...

Dr. G.S. Shivarudrappa ರಾಷ್ಟ್ರಕವಿ ಜಿ.ಎಸ್.ಎಸ್. ರಚಿತ ಕವನಗಳ ಆನ್ ಲೈನ್ ಗಾಯನ ಸ್ಪರ್ಧೆ

Dr. G.S. Shivarudrappa ಶಿವಮೊಗ್ಗದಲ್ಲಿ ರಾಷ್ಟ್ರಕವಿ ಡಾ. ಜಿ.ಎಸ್ . ಶಿವರುದ್ರಪ್ಪ...

ಸಿಗಂದೂರು ಸೇತುವೆ: ಆತ್ಮಹತ್ಯೆಗೆ ಯತ್ನಿಸಿದಾತನ ಜೀವವುಳಿಸಿದ ಇಂಜಿನಿಯರ್ ಮಾತಿನ ಕೌಶಲ

ಮೈಸೂರಿನ ವ್ಯಕ್ತಿಯೊಬ್ಬರು ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇಂಜಿನಿಯರ್ ಒಬ್ಬರ...