Friday, April 17, 2026
Friday, April 17, 2026

ಕನ್ನಡಕ್ಕೆ ಅನುದಾನ ತಾರತಮ್ಯ ಬೇಡ

Date:

ಕನ್ನಡ ಭಾಷೆಗೆ ಶಾಸ್ತ್ರೀಯ ಭಾಷೆ ಸ್ಥಾನಮಾನ ನೀಡಿದರೂ ಸಹ ಕನ್ನಡ ಭಾಷೆ ಅಭಿವೃದ್ಧಿಗೆ ಕೇಂದ್ರ ಸರ್ಕಾರ ನೀಡುತ್ತಿರುವ ಅನುದಾನ ಹೆಚ್ಚಿಸಬೇಕು ಎಂದು ಎಲ್ಲೆಡೆ ಅಭಿಪ್ರಾಯ ವ್ಯಕ್ತವಾಗುತ್ತಿದೆ.

ಮೈಸೂರಿನ ಭಾಷಾ ಸಂಸ್ಥಾನಕ್ಕೆ ಯಾವುದೇ ರೀತಿಯ ಮಂಜೂರಾತಿ ನೀಡುತ್ತಿಲ್ಲ. ವರ್ಷಕ್ಕೆ ಕೇವಲ 1 ಕೋಟಿ ರೂ. ಮಾತ್ರ ಅನುದಾನ ನೀಡಲಾಗುತ್ತಿದೆ. ಕೇಂದ್ರ ನೀಡಿರುವ ಅನುದಾನದ ಹಣ ಸಿಬ್ಬಂದಿಯ ವೇತನಕ್ಕಷ್ಟೇ ಮೀಸಲಾಗಿದೆ.

“ಸಂಸತ್ತಿನಲ್ಲಿ ಎರಡು ಪಕ್ಷದ ನಾಯಕರು ಪಕ್ಷಬೇಧವನ್ನು ಮರೆತು ಕನ್ನಡ ಭಾಷೆಗಾಗಿ ಸಂಸತ್ತಿನಲ್ಲಿ ಒಕ್ಕೊರಲಿನಿಂದ ಧ್ವನಿ ಎತ್ತಬೇಕು. ಕಾಂಗ್ರೆಸ್ ನ ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್ ಅವರ ದಾರಿಯನ್ನು ಉಳಿದವರು ಅನುಸರಿಸಬೇಕು. ಕನ್ನಡ ಸಂಘಟನೆಗಳು ಕೂಡ ಧ್ವನಿ ಎತ್ತಬೇಕು” ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಕಾರ್ಯದರ್ಶಿಯಾಗಿದ್ದ ಕೆ. ರಾಜಕುಮಾರ್ ಆಗ್ರಹಿಸಿದ್ದಾರೆ.

“ಎಲ್ಲಾ ಶಾಸ್ತ್ರೀಯ ಭಾಷೆಗಳಿಗೂ ಸಮಾನ ಸ್ಥಾನಮಾನ ನೀಡುವ ಬದಲು ಕೇಂದ್ರ ಸರ್ಕಾರ ತಾರತಮ್ಯ ನೀಡುತ್ತಿದೆ” ಎಂದು ಕರ್ನಾಟಕದ ರಾಜ್ಯಸಭಾ ಸದಸ್ಯರು ಜಿ.ಸಿ. ಚಂದ್ರಶೇಖರ್ ಸಂಸತ್ತಿನಲ್ಲಿ ಕನ್ನಡ ಪರ ಧ್ವನಿ ಎತ್ತಿದ್ದಾರೆ.

“ಮೂರು ವರ್ಷಗಳ ಅಂಕಿ-ಅಂಶ ನೋಡಿದರೆ ಕೇವಲ 28 ಸಾವಿರ ಜನರು ಮಾತನಾಡುವ ಸಂಸ್ಕೃತ ಭಾಷೆಗೆ 634 ಕೋಟಿ ‌ರೂ. ಅನುದಾನವನ್ನು ನೀಡಲಾಗಿದೆ.7 ಕೋಟಿ ಮಂದಿ ಮಾತನಾಡುವ ಕನ್ನಡಕ್ಕೆ ಸಿಕ್ಕಿರುವುದು ಕೇವಲ 7 ಕೋಟಿ ರೂ. ಎಂಬುದನ್ನು ಉಲ್ಲೇಖಿಸಿದ್ದಾರೆ. ಸಂಸ್ಕೃತಕ್ಕೆ ಇಷ್ಟು ಮೊತ್ತ ಕೊಟ್ಟಿರುವುದಕ್ಕೆ ಆಕ್ಷೇಪವಿಲ್ಲ. ಆದರೆ 32 ಕೋಟಿ ಜನರು ಮಾತನಾಡುವ ಉಳಿದ ಐದು ಭಾಷೆಗಳಾದ ಕನ್ನಡ, ತಮಿಳು, ತೆಲುಗು, ಮಲಯಾಳಂ, ಒಡಿಯಾ ಭಾಷೆಗಳಿಗೆ ಕೇವಲ 29 ಕೋಟಿ ರೂ. ಕೊಟ್ಟಿರುವುದು ಸರಿಯಲ್ಲ” ಎಂದು ರಾಜ್ಯಸಭೆಯಲ್ಲಿ ಜಿ.ಸಿ.ಚಂದ್ರಶೇಖರ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Airport ಚನ್ನೈ ವಿಮಾನ ರದ್ದು. ಪ್ರಯಾಣಿಕರಿಗೆ ಚನ್ನೈಗೆ ‌ಕೊಂಡೊಯ್ಯಲು ಬಸ್ ವ್ಯವಸ್ಥೆ: ಜನರ ಆಕ್ರೋಶ

Shivamogga Airport ಶಿವಮೊಗ್ಗ ಏರ್ಪೋರ್ಟ್ ನಲ್ಲಿ ಚೆನ್ನೈ ವಿಮಾನ ರದ್ದಾಗಿದ್ದು, ಪ್ರಯಾಣಿಕರು...

JCI Shivamogga ಗುಡ್ ಲಕ್ ಆರೈಕೆ ಕೇಂದ್ರದಲ್ಲಿನ ಅನಾಥ ಮಹಿಳೆಯರಿಗೆ ಭಾವನಾ ಜೆಸಿಐನಿಂದ ಉಡುಪು ವಿತರಣೆ

JCI Shivamogga ಶಿವಮೊಗ್ಗ ನಗರದ ಜೆಸಿಐ ಶಿವಮೊಗ್ಗ ಭಾವನದಿಂದ ಗುಡ್...

Brahmakumari Ishwariya University ಆಧ್ಯಾತ್ಮ , ಧ್ಯಾನ ಮತ್ತು ಯೋಗ ಮನುಷ್ಯನ ನೈಜ ಸಂಪತ್ತು-ಬ್ರಹ್ಮಕುಮಾರಿ ಸ್ವಾತಿ

Brahmakumari Ishwariya University ಒತ್ತಡ ಮತ್ತು ಅಶಾಂತಿಯ ಜೀವನಶೈಲಿಯಲ್ಲಿ ಬದುಕುತ್ತಿರುವ ಜನರಿಗೆ...

Dr. B.R. Ambedkar ಡಾ.ಅಂಬೇಡ್ಕರ್ ಜಯಂತಿ ಪ್ರಯುಕ್ತ 19 ಜನಕ್ಕೆ ಜೀವ ವಿಮಾ ಬಾಂಡ್ ವಿತರಣೆ

Dr. B.R. Ambedkar ಶಿವಮೊಗ್ಗ ಜಿಲ್ಲೆಯ ಹೊಳೆ ಬೆನವಲ್ಲಿ ಗ್ರಾಮದಲ್ಲಿ ಸಂವಿಧಾನ...