ಬೆಳಗಾವಿಯ, ಕಣಬರ್ಗಿ ಯ ಸಂಕಲ್ಪ ಗಾರ್ಡನ್ ನಲ್ಲಿ ಸಂಯುಕ್ತ ಹೋರಾಟ ಕರ್ನಾಟಕ ವತಿಯಿಂದ ‘ರೈತ ಅಧಿವೇಶನ’ವನ್ನು ಏರ್ಪಡಿಸಲಾಗಿತ್ತು. ವಿಧಾನಮಂಡಲದ ಚಳಿಗಾಲ ಅಧಿವೇಶನಕ್ಕೆ ಪೂರ್ವಭಾವಿಯಾಗಿ ಈ ಕಾರ್ಯಕ್ರಮವನ್ನು ನಡೆಸಲಾಯಿತು.
ಭೂ ಸುಧಾರಣೆ, ಎಪಿಎಂಸಿ ಹಾಗೂ ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆ ಗಳನ್ನ ರಾಜ್ಯ ಸರ್ಕಾರವು 2020ರಲ್ಲಿ ಜಾರಿಗೊಳಿಸಿದೆ. ರೈತ ವಿರೋಧಿ ತಿದ್ದುಪಡಿಗಳನ್ನು ಇಲ್ಲಿನ ಸುವರ್ಣವಿಧಾನಸೌಧದಲ್ಲಿ ಡಿ. 13ರಿಂದ ನಡೆಯಲಿರುವ ವಿಧಾನ ಮಂಡಲ ಚಳಿಗಾಲದ ಅಧಿವೇಶನದಲ್ಲಿ ರದ್ದುಗೊಳಿಸಬೇಕು ಎಂದು ರೈತರ ಅಧಿವೇಶನದಲ್ಲಿ ಹಕ್ಕೊತ್ತಾಯವನ್ನು ಮಂಡಿಸಿತು.
ಕೇಂದ್ರ ಸರ್ಕಾರವು ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆದಿರುವುದನ್ನು ಪಡೆದಿರುವುದನ್ನು ಇಲ್ಲಿ ಸಂಭ್ರಮಿಸಲಾಯಿತು. ಬಂದವರಿಗೆಲ್ಲ ಬೆಳಗಾಂ ಹೆಸರುವಾಸಿ ಸಿಹಿ ಕುಂದಾ ಹಂಚಲಾಯಿತು. ಕೇಂದ್ರದಂತೆ ರಾಜ್ಯ ಸರ್ಕಾರವೂ ಕಾಯ್ದೆಗಳನ್ನು ಕೂಡಲೇ ಹಿಂಪಡೆಯದಿದ್ದರೆ, ದೆಹಲಿಯ ಗಡಿಗಳಲ್ಲಿ ನಡೆದ ಮಾದರಿಯಲ್ಲೇ ರಾಜ್ಯದಲ್ಲೂ ಅನಿರ್ಧಿಷ್ಠಾವಧಿ ಹೋರಾಟ ನಡೆಸಲಾಗುವುದು ಎಂದು ರೈತರು ಎಚ್ಚರಿಕೆ ನೀಡಿದರು.
“ಸಂಘರ್ಷ ಮಾಡುವುದರಲ್ಲಿ ನಾವು ಪ್ರವೀಣರು. ಸಮಾಜದ ಒಳಿತಿಗಾಗಿ ಅಗ್ನಿ ಆಹುತಿಗೆ ಸಿದ್ಧವಾಗಿದ್ದೇವೆ. ಪ್ರಧಾನಮಂತ್ರಿ-ಮುಖ್ಯಮಂತ್ರಿ ಅವರ ಕಾರುಗಳಿಗೆ ಮುತ್ತಿಗೆಯನ್ನು ಹಾಕುತ್ತೇವೆ. ನಮ್ಮ ಇನ್ನೊಂದು ಆಯಾಮದ ಹೋರಾಟವೇ ಈ ರೈತ ಅಧಿವೇಶನ ಎಂದು ಹೇಳಲಾಗಿದೆ.
ದೇಶದಲ್ಲಿ ಸರ್ವಾಧಿಕಾರ ಹಾಗೂ ಪ್ರಜಾಪ್ರಭುತ್ವಗಳ ನಡುವೆ ಹೋರಾಟ ನಡೆಯುತ್ತಿದೆ. ಸರ್ವಾಧಿಕಾರಿಯ ನಡೆ ವಿರುದ್ಧ ದಿಟ್ಟ ಹೆಜ್ಜೆಗಳನ್ನು ಇಟ್ಟಿರುವುದರಿಂದ ನಮ್ಮ ದೇಶದಲ್ಲಿನ್ನೂ ಪ್ರಜಾಪ್ರಭುತ್ವ ಉಳಿದಿದೆ, ಉಳಿಸಿಕೊಳ್ಳುತ್ತೇವೆ ಎಂಬ ಸಂದೇಶವನ್ನು ರವಾನಿಸಿದರು. ನಾವಿಲ್ಲಿ ಮಂಡಿಸಿರುವ ಹಕ್ಕೊತ್ತಾಯಗಳ ಬಗ್ಗೆ ವಿಧಾನಮಂಡಲ ಚಳಿಗಾಲದ ಅಧಿವೇಶನದಲ್ಲಿ ಚರ್ಚಿಸಬೇಕು” ಎಂದು ಒತ್ತಾಯಿಸಿದರು.
ನಮ್ಮ ಅಧಿವೇಶನದ ನಿರ್ಣಯಗಳನ್ನು ವಿಧಾನಸಭಾಧ್ಯಕ್ಷರು ಹಾಗೂ ಮುಖ್ಯಮಂತ್ರಿ, ವಿಧಾನಸಭೆ ವಿರೋಧ ಪಕ್ಷದ ನಾಯಕರಿಗೆ ಸಲ್ಲಿಸಲಾಗುವುದು. ಆ ಕಾರ್ಯಸೂಚಿ ಬಗ್ಗೆ ಅಧಿವೇಶನದಲ್ಲಿ ಚರ್ಚಿಸಬೇಕು. ಸರ್ಕಾರದ ನಡೆಯು ನಮಗೆ ಪೂರಕವಾಗಿಲ್ಲದಿದ್ದರೆ ಸಂಘರ್ಷಕ್ಕೆ ಇಳಿಯಬೇಕಾಗುತ್ತದೆ. ಸರ್ಕಾರ ಕಿತ್ತೊಗೆಯಲು ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ಸಂದೇಶವನ್ನು ನೀಡಲಾಯಿತು.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.