Friday, April 17, 2026
Friday, April 17, 2026

ಶೀಘ್ರದಲ್ಲೇ, ತಾಲೂಕು ಸಮಿತಿಗಳ ಘೋಷಣೆ

Date:

‘ಜಿಲ್ಲೆಯನ್ನು ಸಾಹಿತ್ಯಿಕವಾಗಿ ಹಾಗೂ ಸಾಂಸ್ಕೃತಿಕವಾಗಿ ಬೆಳೆಸಲು ಎಲ್ಲರೂ ಮುಂದಾಗಬೇಕು. ಜಿಲ್ಲೆಯಲ್ಲಿ ನಿರಂತರವಾಗಿ ಕನ್ನಡ ಭಾಷೆ ಬೆಳವಣಿಗೆಗೆ ಪೂರಕವಾದ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ನಾಡು-ನುಡಿ ಬೆಳವಣಿಗೆಗಾಗಿ ಶ್ರಮಿಸಬೇಕು. ಶಾಲೆ ಮತ್ತು ಮನೆಯಂಗಳದಲ್ಲಿ ಸಾಹಿತ್ಯ ಪರಿಷತ್ತು ಚಟುವಟಿಕೆ ನಡೆಸೋಣ ಎಂದು ಶಿವಮೊಗ್ಗ ಜಿಲ್ಲಾ ಕಸಾಪ ಅಧ್ಯಕ್ಷ ಡಿ. ಮಂಜುನಾಥ್ ಅವರು ಹೇಳಿದ್ದಾರೆ.

ಶಿಕಾರಿಪುರದ, ಗುರುಭವನದಲ್ಲಿ ನಡೆದ ಅಭಿನಂದನಾ ಸಮಾರಂಭ ಹಾಗೂ ಆಜೀವ ಸದಸ್ಯರ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.

ತಾಲೂಕು ಮಟ್ಟದಲ್ಲಿ ಸಾಹಿತ್ಯ ಪರಿಷತ್ ಚಟುವಟಿಕೆ ನಡೆಸಲು ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಅಗತ್ಯವಾದ ಸಮಯವನ್ನು ಮೀಸಲಿಡಬೇಕು. ಅಂತವರು ಮಾತ್ರ ನಮ್ಮ ಜೊತೆ ಬರಬೇಕು. ಮುಂದಿನ ದಿನಗಳಲ್ಲಿ ಶಿವಮೊಗ್ಗದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ನೂತನ ಅಧ್ಯಕ್ಷರ ಹೆಸರು ಘೋಷಣೆ ಮಾಡಲಾಗುತ್ತದೆ ಎಂದು ಕೂಡ ತಿಳಿಸಿದರು.

ಇದೇ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಹಿರಿಯ ಆಜೀವ ಸದಸ್ಯರಾದ ಎಸ್.ಆರ್. ಕೃಷ್ಣಪ್ಪ, ಕಾನೂರು ನಾಗಪ್ಪ, ಚುರ್ಚಿಗುಂಡಿ ಪ್ರೊ. ಬಸವನಗೌಡ್ರು, ಸರ್ವಮಂಗಳಮ್ಮ, ಶಿರಳಕೊಪ್ಪ ಟಿ. ರಾಜಶೇಖರ್ ಮತ್ತು ನಿಜಲಿಂಗಪ್ಪ ಗೌಡ್ರು ಅವರನ್ನು ಸನ್ಮಾನಿಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

JCI Shivamogga ಗುಡ್ ಲಕ್ ಆರೈಕೆ ಕೇಂದ್ರದಲ್ಲಿನ ಅನಾಥ ಮಹಿಳೆಯರಿಗೆ ಭಾವನಾ ಜೆಸಿಐನಿಂದ ಉಡುಪು ವಿತರಣೆ

JCI Shivamogga ಶಿವಮೊಗ್ಗ ನಗರದ ಜೆಸಿಐ ಶಿವಮೊಗ್ಗ ಭಾವನದಿಂದ ಗುಡ್...

Brahmakumari Ishwariya University ಆಧ್ಯಾತ್ಮ , ಧ್ಯಾನ ಮತ್ತು ಯೋಗ ಮನುಷ್ಯನ ನೈಜ ಸಂಪತ್ತು-ಬ್ರಹ್ಮಕುಮಾರಿ ಸ್ವಾತಿ

Brahmakumari Ishwariya University ಒತ್ತಡ ಮತ್ತು ಅಶಾಂತಿಯ ಜೀವನಶೈಲಿಯಲ್ಲಿ ಬದುಕುತ್ತಿರುವ ಜನರಿಗೆ...

Dr. B.R. Ambedkar ಡಾ.ಅಂಬೇಡ್ಕರ್ ಜಯಂತಿ ಪ್ರಯುಕ್ತ 19 ಜನಕ್ಕೆ ಜೀವ ವಿಮಾ ಬಾಂಡ್ ವಿತರಣೆ

Dr. B.R. Ambedkar ಶಿವಮೊಗ್ಗ ಜಿಲ್ಲೆಯ ಹೊಳೆ ಬೆನವಲ್ಲಿ ಗ್ರಾಮದಲ್ಲಿ ಸಂವಿಧಾನ...

VISL ಡಾ.ಅಂಬೇಡ್ಕರ್ ಮತ್ತು ವಿಶ್ವೇಶ್ವರಯ್ಯನವರ ಜೀವನದ ವಿಚಾರಗಳು ಮಕ್ಕಳಿಗೆ ಅಗತ್ಯ- ಬಿ.ವಿಶ್ವನಾಥ್

VISL ವಿಐಎಸ್‌ಎಲ್ ವತಿಯಿಂದ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ದ ಆಯೋಜಿಸಲಾಗಿತ್ತು. ಈ...