Tuesday, June 17, 2025
Tuesday, June 17, 2025

ಅನುದಾನಕ್ಕೆ ಕಾಯದೇ ರೈತರ ಹಿತಸಾಧಿಸಿ

Date:

ರಾಜ್ಯ ಸರ್ಕಾರ ಕೇಂದ್ರದಿಂದ ಅನುದಾನ ಬಿಡುಗಡೆಯಾಗುವವರೆಗೂ ಕಾಯ್ದೆ ಅಭಿವೃದ್ಧಿ ಕೆಲಸಗಳನ್ನು ನಿಲ್ಲಿಸಿ ರೈತರ ನೆರವಿಗೆ ಧಾವಿಸಬೇಕು ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಸಲಹೆ ಮಾಡಿದರು.
ಈ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ಕೆ.ಎಸ್. ಈಶ್ವರಪ್ಪ, ಎಂಎನ್ ಆರ್ ಇಜಿ ಯೋಜನೆಯಡಿ ಕಳೆದ ಎರಡು ತಿಂಗಳ ಕೂಲಿ ಹಣ ಬಿಡುಗಡೆ ಬಾಕಿ ಇತ್ತು. ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಗೆ ಮನವಿ ಸಲ್ಲಿಸಿದಾಗ ತಕ್ಷಣ 1000 ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಿದ್ದಾರೆ. ಕೂಲಿ ಹಣ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗಿದೆ.ಆದರೆ, ಆರೇಳು ತಿಂಗಳ ನರೇಗಾ ಕೂಲಿ ಬಾಕಿ ಉಳಿದಿಲ್ಲ ಎಂದು ಸ್ಪಷ್ಟನೆ ನೀಡಿದರು.
40-50 ವರ್ಷಗಳಲ್ಲಿ ಕಾಣದಷ್ಟು ರಾಜ್ಯದಲ್ಲಿ ಅತಿವೃಷ್ಟಿಯಿಂದ ಕೈಗೆ ಬರಬೇಕಾಗಿದ್ದ ಬೆಳೆ ನಷ್ಟ ಕ್ಕೀಡಾಗಿ ರೈತರು ಸಂಕಷ್ಟ ಎದುರಿಸುತ್ತಿರುವ ಕುರಿತು ವಿಧಾನ ಸಭೆಯಲ್ಲಿ ಚರ್ಚೆ ವೇಳೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪನವರು ಮಧ್ಯೆ ಪ್ರವೇಶಿಸಿದರು.
ಮುಂದಿನ ಹಂಗಾಮಿನಲ್ಲಿ ಬಿತ್ತನೆ ಬೀಜ ಖರೀದಿಸುವುದಕ್ಕೂ ರೈತರ ಬಳಿ ಹಣವಿಲ್ಲದಂತಾಗಿದೆ. ಕೇಂದ್ರದ ಅನುದಾನಕ್ಕೆ ಕಾಯದೆ ರಾಜ್ಯದ ಬೊಕ್ಕಸದಿಂದಲೇ ಹಣ ಖರ್ಚು ಮಾಡುವ ಮೂಲಕ ರೈತರ, ಕೂಲಿ ಕಾರ್ಮಿಕರ ರಕ್ಷಣೆಗೆ ಮುಂದಾಗಬೇಕು ಎಂದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Friends Health Care Center ಜೂ.18 ರಂದು ಉಚಿತ ಮಧುಮೇಹ ಮತ್ತು ರಕ್ತದೊತ್ತಡ ತಪಾಸಣಾ ಶಿಬಿರ

Friends Health Care Center ಫ್ರೆಂಡ್ಸ್ ಹೆಲ್ತ್ ಕೇರ್ ಸೆಂಟರ್ ಸುದೇನು...