Wednesday, February 19, 2025
Wednesday, February 19, 2025

ಕನ್ನಡಧ್ವಜ ಸುಟ್ಟಿದ್ದು ಹೇಯಕೃತ್ಯ. -ಮಹೇಶ್ ಜೋಷಿ ಪ್ರತಿಕ್ರಿಯೆ

Date:

ಶಿವಸೇನೆಯ ಪುಂಡರು ಕೊಲ್ಲಾಪುರದಲ್ಲಿ ಕನ್ನಡ ಧ್ವಜ ಸುಟ್ಟ ಹಿನ್ನೆಲೆಯಲ್ಲಿ ಎಂಇಎಸ್ ಮುಖಂಡರಿಗೆ ಕನ್ನಡಪರ ಕಾರ್ಯಕರ್ತರು ಮಸಿ ಬಳಿದರು.
ಈ ಕಾರಣಕ್ಕೆ ಅವರ ವಿರುದ್ಧ ಬೆಳಗಾವಿ ಪೊಲೀಸರು ಕೊಲೆ ಯತ್ನದ ಕೇಸ್ ಹಾಕಿರುವುದು ಖಂಡನೀಯ. ಇದರ ವಿರುದ್ಧ ಎಂಥ ಹೋರಾಟಕ್ಕೂ ಸಿದ್ಧ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ್ ಜೋಶಿ ಹೇಳಿದ್ದಾರೆ.
ನಾನು ವಿನಾಕಾರಣ ಯಾರೊಂದಿಗೂ ಘರ್ಷಣೆಗೆ ಇಳಿಯುವುದಿಲ್ಲ. ಆದರೆ ನಾಡು-ನುಡಿಗೆ ಆಪತ್ತು ಬಂದರೆ ಹೋರಾಟಗಾರರ ಜೊತೆ ಸೇರಿ ಹೋರಾಟಗಾರನಾಗುತ್ತೆನೆ. ಕಾನೂನು ಹೋರಾಟದ ಅಗತ್ಯವಿದ್ದರೆ ಸಚಿವರೊಂದಿಗೆ ಚರ್ಚಿಸಿ ಕಾನೂನು ಹೋರಾಟಕ್ಕೂ ಸಿದ್ಧನಾಗಿದ್ದೇನೆ ಎಂದು ಜೋಶಿ ಎಚ್ಚರಿಕೆ ನೀಡಿದ್ದಾರೆ.
ಶಿವಸೇನೆಯ ಕಿಡಿಗೇಡಿಗಳು ಕನ್ನಡ ಧ್ವಜ ಸುಟ್ಟಿದ್ದು ಹೇಯ ಕೃತ್ಯ. ಇದನ್ನು ಖಂಡಿಸಿ ಕನ್ನಡಪರ ಹೋರಾಟಗಾರರು ಪ್ರತಿಭಟಿಸಿ ಎಂಇಎಸ್ ಮುಖಂಡನಿಗೆ ಮಸಿ ಹಾಕಿದ್ದಾರಷ್ಟೆ. ಆದರೆ ಕನ್ನಡಪರ ಹೋರಾಟಗಾರರ ಬಳಿ ಯಾವುದೇ ಆಯುಧವಿರಲಿಲ್ಲ. ನನಗೆ ಕೇವಲ ಇಂಕನ್ನು ಎರಚಿ ತಮ್ಮ ಕನ್ನಡ ನಾಡಿನ ಪರವಾದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಷ್ಟಕ್ಕೆ ಕೊಲೆಯತ್ನ ಎಂದು ದೂರು ದಾಖಲಿಸಿರುವುದು ಜಾಮೀನು ಸಿಗಬಾರದು ಎಂಬ ದುರುದ್ದೇಶವನ್ನು ಹೊಂದಿದೆ ಎಂದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Chennabasappa ಜಗಜೀವನ್ ರಾಂ ಭವನದ ಕಾಮಗಾರಿ ಪರಿಶಿಲಿಸಿದ ಶಾಸಕ‌ ಎಸ್.ಎನ್.ಚನ್ನಬಸಪ್ಪ

S.N. Chennabasappa ಶಿವಮೊಗ್ಗ ನಗರ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು...

Shikaripura Horticulture Department ತರಕಾರಿ ಬೀಜಗಳ ‌ಕಿಟ್ ವಿತರಣೆಗೆ ಅರ್ಜಿ ಆಹ್ವಾನ

Shikaripura Horticulture Department ಶಿಕಾರಿಪುರ ತೋಟಗಾರಿಕೆ ಇಲಾಖೆಯು 2024-25ನೇ ಸಾಲಿನಲ್ಲಿ ತರಕಾರಿ...

Shimoga Rangayana ಫೆಬ್ರವರಿ 13. ಶಿವಮೊಗ್ಗ ರಂಗಾಯಣ ಆಶ್ರಯದಲ್ಲಿ ” ಮೈ ಫ್ಯಾಮಿಲಿ‌” ನಾಟಕ‌ ಪ್ರದರ್ಶನ

Shimoga Rangayana ಶಿವಮೊಗ್ಗ ರಂಗಾಯಣದ ಆಯೋಜನೆಯಲ್ಲಿ ಫೆ. 13 ರಂದು ಸಂಜೆ...