Monday, April 20, 2026
Monday, April 20, 2026

ಶಿವಮೊಗ್ಗದಲ್ಲಿ ಜವಳಿ ವರ್ತಕರ ಪ್ರತಿಭಟನೆ

Date:

ಬಟ್ಟೆಗಳ ಮೇಲಿನ ಜಿಎಸ್ ಟಿ ಏರಿಕೆ ಮಾಡುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಶಿವಮೊಗ್ಗದ ಜವಳಿ ವರ್ತಕರು, ತಮ್ಮ ಅಂಗಡಿಗಳನ್ನು ಬಂದ್ ಮಾಡಿದ್ದರು. ನಂತರ ಶಿವಮೊಗ್ಗ ನಗರದ ರಾಮಣ್ಣ ಶ್ರೇಷ್ಠಿ ಪಾರ್ಕ್ ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ.

ಮುಂದಿನ ವರ್ಷದ ಮೊದಲ ತಿಂಗಳಿನಿಂದ ಕೇಂದ್ರ ಸರ್ಕಾರವು ಬಟ್ಟೆಗಳ ಮೇಲೆ ಶೇ.5 ರಷ್ಟಿದ್ದ, ಜಿಎಸ್ ಟಿ ದರವನ್ನು ಶೇ.12ಕ್ಕೆ ಏರಿಸುತ್ತಿದೆ.

ಪ್ರತಿಯೊಬ್ಬ ಮನುಷ್ಯನಿಗೂ ಮೂಲಭೂತ ಸೌಕರ್ಯಗಳಲ್ಲಿ ಉಡುಪು ಪ್ರಮುಖವಾಗಿದೆ. ಈ ಮೂಲಭೂತ ವಸ್ತುವಿನ ಮೇಲೆ ಜಿಎಸ್ ಟಿ ಹೇರುತ್ತಿರುವುದು, ಅನ್ಯಾಯದ ಪರಮಾವಧಿ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ಕೊರೋನಾ ಲಾಕ್ ಡೌನ್ ಕಾರಣದಿಂದ ಎರಡು ವರ್ಷಗಳಿಂದ ಜವಳಿ ವರ್ತಕರಿಗೆ ವ್ಯಾಪಾರವೇ ಇಲ್ಲದಂತೆ ಆಗಿದೆ. ಅವರ ಬದುಕು ದುಸ್ತರವಾಗಿದೆ. ಈಗಲೂ ಸಹ ಚೇತರಿಸಿಕೊಳ್ಳಲಾಗದೇ ಪರದಾಡುತ್ತಿದ್ದಾರೆ.
ಈ ಸಂದರ್ಭದಲ್ಲಿ ಅವರಿಗೆ ಗಾಯದ ಮೇಲೆ ಬರೆ ಎಳೆದಂತೆ ಕೇಂದ್ರಸರ್ಕಾರ ಮತ್ತೆ ಜಿಎಸ್ ಟಿ ದರವನ್ನು ಏರಿಕೆ ಮಾಡುತ್ತಿರುವುದು ಖಂಡನೀಯ ಎಂದು ಆರೋಪಿಸಿದ್ದಾರೆ.

ಜಿಎಸ್ ಟಿ ಹೆಚ್ಚಳ ಮಾಡಿದರೆ ಗ್ರಾಹಕರಿಗೆ ಹೊರೆಯಾಗಲಿದೆ. ಪ್ರಸ್ತುತ ಇರುವ ಶೇ.5ರಷ್ಟು ಜಿಎಸ್ ಟಿ ದರವೇ ಹೊರೆಯಾಗಿದೆ. ಇದನ್ನು ಈಗ ಶೇ. 12 ಕ್ಕೆ ಹೆಚ್ಚಿಸುತ್ತಿರುವುದು, ಗುಬ್ಬಿಯ ಮೇಲೆ ಬ್ರಹ್ಮಾಸ್ತ್ರ ಹುಡಿದಂತಾಗುತ್ತಿದೆ ಎಂದು ಟೀಕಿಸಿದ್ದಾರೆ.

ಪ್ರತಿಭಟನಾ ಸಂದರ್ಭದಲ್ಲಿ ಜವಳಿ ವರ್ತಕರ ಸಂಘದ ಅಧ್ಯಕ್ಷ ಟಿ. ಆರ್. ವೆಂಕಟೇಶಮೂರ್ತಿ, ಪ್ರಧಾನ ಕಾರ್ಯದರ್ಶಿ ಪಿ. ವಿ. ಪ್ರಭಾಕರ್ ಇನ್ನು ಮುಂತಾದವರು ಉಪಸ್ಥಿತರಿದ್ದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

RM Manjunath Gowda ಹುಲಿಕಲ್ ಘಾಟಿ ಪ್ರಕರಣ.ಇಂಜಿನಿಯರುಗಳೇ ಹೊಣೆ. ಎಫ್ ಐ ಆರ್ ದಾಖಲಿಸಲು ಎಸ್ ಪಿ.ಅವರಿಗೆ ಮನವಿ ಮಾಡುವೆ- ಆರ್.ಎಂ.ಮಂಜುನಾಥ ಗೌಡ.

RM Manjunath Gowda ಹುಲಿಕಲ್ ಘಾಟಿ ಪ್ರಕರಣದಲ್ಲಿ ಎಫ್ಐಆರ್ ದಾಖಲಾದ ಹಿನ್ನೆಲೆಯಲ್ಲಿ ಮಕೆನಾಡು...

Graduation Day ಮ್ಯಾನೇಜ್ಮೆಂಟ್ ಪದವೀಧರರು ಶೈಕ್ಷಣಿಕ ಮತ್ತು ಔದ್ಯಮಿಕ ರಂಗದ ನಡುವಿನ ಸೇತುವೆ- ವಿನಯ್ ಪಾಟೀಲ್.

Graduation Day "ಜ್ಞಾನವು ಕೌಶಲ್ಯವಾಗದಿದ್ದಲ್ಲಿ ನಿರರ್ಥಕ" -ಬಾಪೂಜಿ ಎಂಬಿಎ ಪದವಿ ಪ್ರದಾನದಲ್ಲಿ ವಿನಯ್...

Department of Labour ಕಾರ್ಮಿಕರಿಗೆ,ಆರ್ಥಿಕ ಹಿಂದುಳಿದವರಿಗೆ ಉಚಿತ ಕಿಡ್ನಿ, ಲಿವರ್ ,ಚಿಕಿತ್ಸೆ ನೀಡಲಾಗುತ್ತದೆ- ಡಾ.ಚಂದ್ರಶೇಖರ್.

Department of Labour ಭದ್ರಾವತಿಯ ಬೈಪಾಸ್ ಆಂಜನೇಯ ದೇವಸ್ಥಾನ ಆವರಣದಲ್ಲಿ ರಾಜ್ಯ ಕಾರ್ಮಿಕ...