Monday, December 8, 2025
Monday, December 8, 2025

ವಿಜಯ್ ದಿವಸ್ ಆಚರಣೆಯಂದು ಇಂದಿರಾ ಸ್ಮರಣೆಬೇಕು

Date:

ಪಾಕಿಸ್ತಾನ ವಿರುದ್ಧದ 1971ರ ಯುದ್ಧದ ಗೆಲುವಿನ 50ನೇ ವರ್ಷಾಚರಣೆ ವಿಜಯ್ ದಿವಸ್ ಈ ಸಂದರ್ಭದಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರನ್ನು ಸ್ಮರಿಸದೇ ಇರುವುದು ವಾಗ್ವದಕ್ಕೆ ಕಾರಣವಾಗಿದೆ.

1971 ರಲ್ಲಿ ಇಂದಿರಾ ಗಾಂಧಿ ಪ್ರಧಾನಿ ಆಗಿದ್ದಂತೆ ಆ ಸಂದರ್ಭ. ಯುದ್ಧದಲ್ಲಿ ಭಾರತೀಯ ಸೇನೆ ಪಾಕಿಸ್ತಾನವನ್ನು ಹಿಮ್ಮೆಟ್ಟಿಸಿತ್ತು. ಪಾಕಿಸ್ತಾನದ ಭಾಗವಾಗಿದ್ದ ಬಾಂಗ್ಲಾದೇಶ ಯುದ್ಧದ ನಂತರ ಪ್ರತ್ಯೇಕ ರಾಷ್ಟ್ರವಾಗಿ ಅಸ್ತಿತ್ವಕ್ಕೆ ಬಂದಿತು.

ವಿಜಯ್ ದಿವಸ್ ಆಚರಣೆಯ ವೇಳೆಯಲ್ಲಿ ಇಂದಿರಾ ಗಾಂಧಿ ಅವರನ್ನು ಸ್ಮರಿಸದ ಕ್ರಮವನ್ನು ಕಾಂಗ್ರೆಸ್ ಪಕ್ಷ ಇದನ್ನು ಖಂಡಿಸಿದೆ. ಕೇಂದ್ರ ಸರ್ಕಾರವು ಸಣ್ಣತನದ ರಾಜಕಾರಣದಲ್ಲಿ ತೊಡಗಿದೆ ಎಂದು ಟೀಕಿಸಿದ್ದಾರೆ.

ಬಾಂಗ್ಲಾದೇಶದ ಮುಕ್ತಿಯಲ್ಲಿ ಇಂದಿರಾಗಾಂಧಿ ಮುಖ್ಯಪಾತ್ರ ವಹಿಸಿದ್ದ ನ್ನು ಸರ್ಕಾರ ಗುರುತಿಸಿರುವುದು ದುರದೃಷ್ಟಕರ ಎಂದು ರಾಜ್ಯಸಭೆಯ ವಿರೋಧ
ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಯುದ್ಧದಲ್ಲಿ ಉನ್ನತ ನಾಯಕತ್ವ ತೋರಿದ್ದ, ಇಂದಿರಾಗಾಂಧಿ ಅವರ ಹೆಸರು ಉಲ್ಲೇಖಿಸದೇ ಕೇಂದ್ರ ಸರ್ಕಾರ ಸಣ್ಣತನದ ರಾಜಕಾರಣ ಮಾಡುತ್ತಿದೆ ಎಂದು ಪಕ್ಷದ ವಕ್ತಾರ ರಣದೀಪ್ ಸುರ್ಜೆವಾಲಾ ಆರೋಪಿಸಿದ್ದಾರೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಅವರು, ದೇಶದ ಪ್ರಥಮ, ಏಕೈಕ ಮಹಿಳಾ ಪ್ರಧಾನಿ ಇಂದಿರಾ ಗಾಂಧಿ. ಅವರನ್ನು ವಿಜಯ್ ದಿವಸ್ಎಸ್ ವೇಳೆ ಸ್ತ್ರೀ ದ್ವೇಷಿಯಾದ ಬಿಜೆಪಿ ಸರ್ಕಾರ ಮರೆತಿದೆ ಎಂದು ವ್ಯಂಗ್ಯವಾಗಿ ಹೇಳಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...