ಜಾಗತಿಕ ಮಟ್ಟದಲ್ಲಿ ಕೇಂದ್ರೀಯ ಬ್ಯಾಂಕುಗಳು ಹಣದುಬ್ಬರವನ್ನು ನಿಯಂತ್ರಿಸಲು ಬಡ್ಡಿದರ ಹೆಚ್ಚಿಸಬಹುದು ಎಂಬ ಲೆಕ್ಕಾಚಾರ ಮತ್ತು ಓಮಿಕ್ರಾನ್ ಪ್ರಕರಣಗಳು ಹೆಚ್ಚುತ್ತಿರುವುದು ದೇಶಿ ಶೇರುಪೇಟೆಗಳಲ್ಲಿ ನಕರಾತ್ಮಕ ವಹಿವಾಟು ನಡೆಯುವಂತೆ ಮಾಡಿದವು.
ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್ 889 ಅಂಶ ಏರಿಕೆ ಕಂಡಿದೆ. ದಿನದ ಕೊನೆಯಲ್ಲಿ 57,011 ಅಂಶಗಳಲ್ಲಿ ವಹಿವಾಟು ಮುಗಿಸಿದೆ. ರಾಷ್ಟ್ರೀಯ ಷೇರುಪೇಟೆ ಸಂವೇದಿ ಸೂಚ್ಯಂಕ ನಿಫ್ಟಿ 263 ಅಂಶ ಇಳಿಕೆಯಾಗಿ 16,985 ಅಂಶಗಳಲ್ಲಿ ವಹಿವಾಟು ಕೊನೆಗೊಳಿಸಿದೆ.
ವಿದೇಶಿ ಸಾಂಸ್ಥಿಕ ಹೂಡಿಕೆದಾರರು ಬಂಡವಾಳ ಹಿಂತೆಗೆತ ವನ್ನು ಮುಂದುವರಿಸಿದ್ದು ಕೂಡ ಷೇರುಪೇಟೆ ಸೂಚ್ಯಂಕಗಳ ಇಳಿಕೆಗೆ ಕಾರಣವಾಯಿತು ಎಂದು ವರ್ತಕರು ಹೇಳಿದ್ದಾರೆ.
ಕೊರೋನಾ ಆರಂಭವಾದ ನಂತರ ಇದೇ ಮೊದಲ ಬಾರಿಗೆ ಬ್ಯಾಂಕ್ ಆಫ್ ಇಂಗ್ಲೆಂಡ್ ಬಡ್ಡಿ ದರ ಹೆಚ್ಚಿಸುವ ತೀರ್ಮಾನ ಕೈಗೊಂಡಿದೆ. ವಿದೇಶಿ ಸಾಂಸ್ಥಿಕ ಹೂಡಿಕೆದಾರರು ಷೇರು ಭಾರತವನ್ನು ಮುಂದುವರಿಸಿರುವುದು ದೇಶಿ ಹೂಡಿಕೆದಾರರ ಚಿಂತೆಗೆ ಕಾರಣವಾಗಿದೆ. ಐ. ಟಿ. ಹೊರತುಪಡಿಸಿ ಉಳಿದ ಒಲೆಗಳ ಉದ್ಯಮದ ಷೇರು ಗಳ ಮೌಲ್ಯ ಇಳಿಕೆಯಾಗಿದೆ ಇಳಿಕೆಯಾಗಿದೆ ಎಂದು ಜಿಯೋ ಜಿತ್ ಫೈನಾನ್ಸಿಯಲ್ ಸರ್ವಿಸಸ್ ನ ಸಂಶೋಧನಾ ಮುಖ್ಯಸ್ಥ ವಿನೋದ್ ನಾಯರ್ ತಿಳಿಸಿದ್ದಾರೆ.
ಪ್ರಪಂಚದ ಹೆಚ್ಚಿನ ಕಡೆಗಳಲ್ಲಿ ಹಣದುಬ್ಬರ ಹೆಚ್ಚಾಗಿ ಆಗುತ್ತಿದೆ. ಆದ್ದರಿಂದ ಎಲ್ಲರ ಗಮನ ಬೇರೆ ಬೇರೆ ದೇಶಗಳ ಕೇಂದ್ರೀಯ ಬ್ಯಾಂಕುಗಳು ಕೈಗೊಳ್ಳುವ ತೀರ್ಮಾನ ಕಡೆ ನೆಟ್ಟಿದೆ ಕೋಟಕ್ ಮಹಿಂದ್ರ ಆಸ್ತಿ ನಿರ್ವಹಣಾ ಕಂಪನಿಯ ಹಿರಿಯ ಅಧಿಕಾರಿ ಶಿವಾನಿ ಕುರಿಯನ್ ತಿಳಿಸಿದ್ದಾರೆ.
ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾತೈಲದ ಬೆಲೆಯು ಶೇ.1.48 ರಷ್ಟು ಇಳಿಕೆಯಾಗಿದೆ. ಪ್ರತಿ ಬ್ಯಾರೆಲ್ ಗೆ 73. 91 ಡಾಲರ್ ಗೆ ತಲುಪಿದೆ ಎಂದು ಮೂಲಗಳು ತಿಳಿಸಿವೆ.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.