ವಿದ್ಯಾರ್ಥಿಗಳು ಯೋಗಾಸನದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವುದರಿಂದ ಮಾನಸಿಕ, ದೈಹಿಕ ಸಾಮರ್ಥ್ಯ ಹೆಚ್ಚಾಗುತ್ತದೆ. ಜೊತೆಗೆ ತಮ್ಮ ವ್ಯಕ್ತಿತ್ವ ಕೂಡ ವಿಕಸನಗೊಳ್ಳುತ್ತದೆ ಎಂದು ಇಂದಿರಾಗಾಂಧಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಪ್ರಾಂಶುಪಾಲರಾದ ಡಾ. ಜಿ. ಸಣ್ಣ ಹನುಮಪ್ಪ ಅವರು ಹೇಳಿದ್ದಾರೆ.
ಸಾಗರ ತಾಲೂಕಿನ, ಇಂದಿರಾಗಾಂಧಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮ ನಡೆಯಿತು. ಅಂತರಕಾಲೇಜು ವಿವಿ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಸಮಗ್ರ ಪ್ರಶಸ್ತಿ ಪಡೆದು, ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುವ ಯೋಗಪಟು ಗಳನ್ನು ಈ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.
ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಯೋಗಾಸನದಲ್ಲಿ ಗಮನಸೆಳೆಯುವ ಸಾಧನೆ ಮಾಡಿದ್ದಾರೆ. ಉತ್ತರಾಖಂಡ್ ನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಯೋಗಾಸನ ಸ್ಪರ್ಧೆಗೆ ಆಯ್ಕೆಯಾಗಿರುವುದು ಹೆಮ್ಮೆಯ ಸಂಗತಿಯಾಗಿದೆ. ಈ ವಿದ್ಯಾರ್ಥಿಗಳಿಂದ ಇತರ ವಿದ್ಯಾರ್ಥಿಗಳು ಪ್ರೇರಣೆ ಪಡೆಯಬೇಕು ಎಂದು ಡಾ. ಜಿ. ಸಣ್ಣ ಹನುಮಪ್ಪ ಅವರು ತಿಳಿಸಿದ್ದಾರೆ.
“ಯೋಗಾಸನ ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ತೊಡಗಿಸಿಕೊಂಡರೆ ಮಾತ್ರ ಉನ್ನತ ಸಾಧನೆ ಮಾಡಬಹುದು. ಈ ಭಾಗದ ಹಲವು ಗ್ರಾಮೀಣ ಪ್ರತಿಭೆಗಳು ಯೋಗಾಸನದಲ್ಲಿ ಹೆಸರು ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಅವರಿಗೆ ಉಜ್ವಲ ಭವಿಷ್ಯವಿದೆ” ಎಂದು ಯೋಗ ತರಬೇತಿದಾರರಾದ ವನಶ್ರೀ ಮಂಜಪ್ಪ ಅವರು ಹೇಳಿದ್ದಾರೆ.
ಕಾರ್ಯಕ್ರಮದಲ್ಲಿ ಕಾಲೇಜಿನ ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ವೆಂಕಟೇಶ್, ಸಾಂಸ್ಕೃತಿಕ ವಿಭಾಗದ ಸಂಚಾಲಕ ಪ್ರೊ. ಮಹಾಬಲೇಶ್ವರ್, ಯೋಗ ಶಿಕ್ಷಕ ಶ್ರೀಧರ ಮೂರ್ತಿ ಇನ್ನೂ ಮುಂತಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.