Thursday, March 13, 2025
Thursday, March 13, 2025

ಮಂಜೂರಾದ ವಸತಿ ಯೋಜನೆ ರದ್ದು:ಯಾಕೀ ಕ್ರಮ?

Date:

ಪ್ರತಿ ಗ್ರಾಮ ಪಂಚಾಯಿತಿಗೆ 20 ಮನೆಗಳನ್ನು ಮಂಜೂರು ಮಾಡಿ ವಸತಿರಹಿತರಲ್ಲಿ ನಿರೀಕ್ಷೆ ಹುಟ್ಟಿಸಿದ ರಾಜ್ಯ ಸರ್ಕಾರ ಇದೀಗ ಯೋಜನೆಯನ್ನೇ ರದ್ದುಮಾಡಿ ನಿರಾಸೆ ಮಾಡಿದೆ.
2018- 19ನೇ ಸಾಲಿನಲ್ಲಿ ವಿವಿಧ ವಸತಿ ಯೋಜನೆಗಳಡಿ ಮಂಜೂರಾದ ಮನೆಗಳನ್ನು ಸರ್ಕಾರ ವಾಪಸ್ ಪಡೆದಿರುವುದನ್ನು ಸದನದಲ್ಲಿ ಮಾಹಿತಿ ಒದಗಿಸಿದೆ. ರಾಯಚೂರು ಗ್ರಾಮೀಣ ಕ್ಷೇತ್ರದಲ್ಲಿ ಪ್ರತಿ ಗ್ರಾಪಂಗೆ 20 ಮನೆಗಳಂತೆ 720 ಮನೆಗಳನ್ನು ವಾಪಸ್ಸು ಪಡೆಯಲಾಗಿದೆ ಎಂದು ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸವನಗೌಡ ದದ್ದಲ್ ಅವರು ತಿಳಿಸಿದ್ದಾರೆ.
2018 19 ನೇ ಸಾಲಿನಲ್ಲಿ ಮೈತ್ರಿ ಸರ್ಕಾರ ಪ್ರತಿ ಗ್ರಾಮ ಪಂಚಾಯಿತಿಗೆ 20 ಮನೆಗಳನ್ನು ಮಂಜೂರು ಮಾಡಿ ಸರ್ಕಾರ ಘೋಷಣೆ ಹೊರಡಿಸಿತ್ತು. ರಾಜ್ಯದಲ್ಲಿ ಈಗ 5962 ಗ್ರಾಮ ಮನೆಗಳು ಮಂಜೂರಾಗಿದ್ದವು. ಇದು ನಂತರ ಆಡಳಿತಕ್ಕೆ ಬಂದ ಬಿಜೆಪಿಗೆ ಗ್ರಾಮ ಪಂಚಾಯಿತಿ ಚುನಾವಣೆಯನ್ನು ಎದುರಿಸಲು ದೊಡ್ಡ ಅಸ್ತ್ರವಾಗಿತ್ತು.ಇದಾದ ಬಳಿಕ ಸ್ಥಳೀಯ ಸಂಸ್ಥೆಗಳ ಮೂಲಕ ನಡೆದ ವಿಧಾನಪರಿಷತ್ ಚುನಾವಣೆಯಲ್ಲೂ ಗ್ರಾಪಂ ಸದಸ್ಯರ ಮನವೊಲಿಕೆಗೆ ಇದು ಬಳಕೆಯಾಗಿತ್ತು. ಆದರೆ, ಎರಡು ಚುನಾವಣೆಗಳು ಮುಗಿದ ಬಳಿಕ ಈಗ ಯೋಜನೆಯನ್ನು ರದ್ದುಪಡಿಸಲಾಗಿದೆ ಎಂದು ಘೋಷಿಸಲಾಗಿದೆ.ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲೇ ವಸತಿ ಸಚಿವ ವಿ.ಸೋಮಣ್ಣ ವಿಚಾರವನ್ನು ಪ್ರಕಟಿಸಿದ್ದಾರೆ.
ಸರಕಾರ ಹಲವು ಕಾರಣಗಳನ್ನು ಮುಂದೊಡ್ಡಿ ಅಷ್ಟು ಮನೆಗಳನ್ನು ವಾಪಸ್ ಪಡೆದಿರುವುದರಿಂದ ರಾಜ್ಯದ್ಯಂತ ಬಡವರ ನೆತ್ತಿ ಮೇಲಿನ ಸೂರಿನ ಕನಸು ಭಗ್ನವಾಗಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Senior Chamber International Organization ಪುಷ್ಪ ಎಸ್ ಶೆಟ್ಟಿಅವರಿಗೆ ‌ಸೀನಿಯರ್ ಚೇಂಬರ್ ಉನ್ನತ ಪ್ರಶಸ್ತಿ

Senior Chamber International Organization ಬ್ರಹ್ಮಾವರದಲ್ಲಿ ನಡೆದ ಸೀನಿಯರ್ ಚೇಂಬರ್ ಇಂಟರ್...

State Film Awards 2020 ನೇ ಸಾಲಿನ ಚಲನಚಿತ್ರ ಪ್ರಶಸ್ತಿ ಘೋಷಣೆ

State Film Awards 2020ನೇ ಸಾಲಿನ ಆಯ್ಕೆ ಸಮಿತಿಯು ಸಲ್ಲಿಸಿರುವ ವರದಿಯಲ್ಲಿ...

Klive Special ಹೆತ್ತವಳಿಗೊಂದು ಕವನ-ನಮನ

Klive Special ದೇವರ ಸ್ವರೂಪ ಗರ್ಭದಲ್ಲಿ ಹೊತ್ತುನವಮಾಸಕ್ಕೆ ಹೆತ್ತುಮೌಲ್ಯಗಳನ್ನೇ ಬಿತ್ತುಸಲಹಿದೆ ನೀಡಿ ಕೈತುತ್ತು ಅಮ್ಮ...

Guarantee Scheme ಸತ್ಯ & ಶುದ್ಧ ಮಾರ್ಗದಿಂದ ರಾಷ್ಟ್ರ ಕಟ್ಟಲು ಸಾಧ್ಯ- ಸಿ.ಎಸ್.ಚಂದ್ರಭೂಪಾಲ್

Guarantee Scheme ಅಂತರಂಗ ಮತ್ತು ಬಹಿರಂಗ ಶುದ್ದಿಯಿಂದ ಹಾಗೂ ಸತ್ಯದ ಮಾರ್ಗದಲ್ಲಿ...