ಸುಪ್ರೀಂಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಜಿ. ಟಿ. ನಾನಾವತಿ ಅವರು ಹೃದಯಾಘಾತದಿಂದಾಗಿ ಅಹಮದಾಬಾದ್ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ ಎಂದು ಅವರ ಕುಟುಂಬದವರು ತಿಳಿಸಿದ್ದಾರೆ.
2002ರಲ್ಲಿ ಗುಜರಾತ್ ನ ಗೋದ್ರಾ ಗಲಭೆಯ ನಂತರ ನಡೆದ ಹಿಂಸಾಚಾರ ಹಾಗೂ ದೆಹಲಿಯಲ್ಲಿ 1984 ರಲ್ಲಿ ನಡೆದ ಸಿಖ್ ವಿರೋಧಿ ದಂಗೆ ಗಳ ಬಗ್ಗೆ ತನಿಖೆಗೆ ನಾನಾವತಿ ಅವರ ನೇತೃತ್ವದಲ್ಲಿ ಆಯೋಗ ರಚಿಸಲಾಗಿತ್ತು.1935ರ ಫೆಬ್ರವರಿಯಲ್ಲಿ ಶ್ರೀಯುತರು ಜನಿಸಿದರು. 1979 ರಲ್ಲಿ ಗುಜರಾತ್ ಹೈಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡರು. ಅನಂತರ 1995 ರಲ್ಲಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾದರು.2000 ರಲ್ಲಿ ನಿವೃತ್ತರಾದರು.
ಗೋದ್ರಾ ಗಲಭೆಯ ನಂತರ ನಡೆದ ಘಟನೆಗಳ ಬಗ್ಗೆ ಅಂತಿಮ ತನಿಖಾ ವರದಿಯನ್ನು ಅವರು 2014 ರಲ್ಲಿ ಸರ್ಕಾರಕ್ಕೆ ಸಲ್ಲಿಸಿದ್ದಾರೆ. ಇದನ್ನು ಡಿಸೆಂಬರ್ 2019 ರಲ್ಲಿ ಗುಜರಾತ್ ವಿಧಾನಸಭೆಯಲ್ಲಿ ಮಂಡಿಸಲಾಗಿತ್ತು. ಈ ವರದಿಯಲ್ಲಿ ಗುಜರಾತ್ ನ ಆಗಿನ ಮುಖ್ಯಮಂತ್ರಿ ನರೇಂದ್ರ ಮೋದಿ ಹಾಗೂ ಅವರ ಸಂಪುಟ ಸಹೋದ್ಯೋಗಿಗಳಿಗೆ ಕ್ಲೀನ್ ಚಿಟ್ ನೀಡಲಾಗಿತ್ತು.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.