ಗಡಿಭಾಗವಾದ ಬೆಳಗಾವಿಯಲ್ಲಿ ಶಾಂತಿ ಕದಡಲು ಸಂಚು ಹೂಡಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ ಪುಂಡರು ಕರ್ನಾಟಕದ ಅಸ್ಮಿತೆ ಗಳಲ್ಲಿ ಒಬ್ಬರಾಗಿರುವ ಸಂಗೊಳ್ಳಿ ರಾಯಣ್ಣನ ಪ್ರತಿಮೆಗಳನ್ನು ವಿರೂಪಗೊಳಿಸುವ ಉದ್ಧಟತನ ಮೆರೆದಿದ್ದಾರೆ. ಈ ವಿದ್ಯಮಾನ ರಾಜ್ಯಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ .
ತಪ್ಪಿತಸ್ಥರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ಬೆರಳೆಣಿಕೆಯಷ್ಟು ಜನರು ಮಾಡುತ್ತಿರುವ ಕೃತ್ಯ ಇದಾಗಿದೆ. ಪೊಲೀಸರು ತೆಗೆದುಕೊಳ್ಳುವ ಕಠಿನ ಕ್ರಮ ಕಾದು ನೋಡಿ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಿಳಿಸಿದ್ದಾರೆ.
ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿರೂಪಗೊಳಿಸಿದ ಎಂಇಎಸ್ ಪುಂಡರ ಕೃತ್ಯ ಖಂಡನೀಯ. ತಕ್ಷಣ ಗೂಂಡಾಗಳನ್ನು ಬಂಧಿಸಿ ಜೈಲಿಗಟ್ಟಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ನವರು ತಿಳಿಸಿದ್ದಾರೆ.
ವಿಧಾನಸಭಾದಿವೇಶನ ಆರಂಭದ ದಿನವೇ ಮಹಾಮೇಳಾವ ನಡೆಸುವ ಮೂಲಕ ಕನ್ನಡಿಗರ ಸ್ವಾಭಿಮಾನವನ್ನು ಕೆಣಕಿದ ಎಂಇಎಸ್ ಪುಂಡರಿಗೆ ಮಸಿ ಬಳಿಯುವ ಮೂಲಕ ಕನ್ನಡ ಹೋರಾಟಗಾರರು ಪ್ರತಿರೋಧ ತೋರಿದ್ದರು. ಈ ನಡುವೆ , ಕೊಲ್ಲಾಪುರದಲ್ಲಿ ಶಿವಸೇನೆ ಮತ್ತು ಎಂಇಎಸ್ ಗೆ ಸೇರಿದ ಕೆಲವು ಪುಂಡರು ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚುವ ಉದ್ಧಟತನ ಮೆರೆದಿದ್ದರು.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.