ಎಲ್ಲ ಮಹಿಳೆಯರು ಸಂಘಟಿತರಾಗಿ ಮತ ನೀಡಿದರೆ ಮಾತ್ರ ನಿಮ್ಮನ್ನು ರಾಜಕೀಯದಲ್ಲಿ ಗಂಭೀರವಾಗಿ ಪರಿಗಣಿಸುತ್ತಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರಾ ಅವರು ತಿಳಿಸಿದ್ದಾರೆ.
ಉತ್ತರಪ್ರದೇಶದ ರಾಯಬರೇಲಿಯಲ್ಲಿ ಮಹಿಳೆಯರ ಜೊತೆಗೆ ಸಂವಾದ ನಡೆಸಿದ ಸಂದರ್ಭದಲ್ಲಿ ಮಾತನಾಡುತ್ತಿದ್ದರು. ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಮಹಿಳಾ ಶಕ್ತಿಯನ್ನು ಕ್ರೋಡೀಕರಿಸಿ ತಮ್ಮ ಪಕ್ಷಕ್ಕೆ ಬಲ ತುಂಬುವ ಪ್ರಯತ್ನದಲ್ಲಿದ್ದಾರೆ.
ಬದಲಾವಣೆ ತರಲು ಬಯಸುವುದಾದರೆ ನೋವು ಒಗ್ಗೂಡಬೇಕು. ನಮ್ಮನ್ನು ಏಕೆ ಯಾರೂ ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ವಿಮರ್ಶೆ ಮಾಡಿಕೊಳ್ಳಬೇಕು. ನಾವು ಈಗಾಗಲೇ ಸಾಕಷ್ಟು ಕಷ್ಟಪಟ್ಟಿದ್ದೇವೆ. ಇನ್ನೂ ಕಷ್ಟಪಡುವುದಿಲ್ಲ ಎಂದು ಈಗ ನಾವು ನಿರ್ಧಾರ ಮಾಡಬೇಕು. ನಾವು ಜನಸಂಖ್ಯೆಯ ಅರ್ಧದಷ್ಟು ಇದ್ದೇವೆ. ನಾವು ನಮ್ಮ ಸಾಮರ್ಥ್ಯವನ್ನು ಕಂಡುಕೊಳ್ಳಬೇಕು. ನಾವು ಸಂಘಟಿತರಾಗಿ ಮತಚಲಾಯಿಸಬೇಕು. ಆಗ ಮಾತ್ರ ನಮ್ಮನ್ನು ಗಂಭೀರವಾಗಿ ಪರಿಗಣಿಸುತ್ತಾರೆ ಎಂದು ಆಶ್ವಾಸನೆಯನ್ನು ನೀಡಿದರು.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.