ಕೋವಿಡ್ ಸಂದರ್ಭದಲ್ಲಿ ಜೀವನೋಪಾಯ ಕಳೆದುಕೊಂಡ ವಕೀಲರ ಕುಟುಂಬದವರಿಗೆ ಆರ್ಥಿಕ ನೆರವು ಮುಂತಾದ ವಿಷಯಗಳಿಗೆ ಕೇಂದ್ರ ಸರ್ಕಾರವು ಇನ್ನಷ್ಟು ಸ್ಪಷ್ಟ ಬೇಕಿದೆ ಎಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಅವರು ತಿಳಿಸಿದ್ದಾರೆ.
ವರಂಗಲ್ ನಲ್ಲಿ ನ್ಯಾಯಾಲಯ ಸಂಕೀರ್ಣದ ಕಟ್ಟಡ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ನ್ಯಾಯಾಂಗ ಮೂಲಸೌಕರ್ಯ ನಿಗಮ ಸ್ಥಾಪನೆ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಮೊಬೈಲ್ ಇಂಟರ್ನೆಟ್ ಸೌಲಭ್ಯ ನೀಡಿಕೆಯ ಪ್ರಸ್ತಾವವನ್ನು ಕ್ರಮವಾಗಿ ಜುಲೈ ಹಾಗೂ ಜೂನ್ನಲ್ಲಿ ಸಲ್ಲಿಸಲಾಗಿತ್ತು. ಆದರೆ, ಈವರೆಗೆ ಯಾವ ಕ್ರಮವೂ ಆಗಿಲ್ಲ. ನಿಗಮ ಸ್ಥಾಪನೆಗೆ ಅಗತ್ಯವಾದ ಮಸೂದೆಯನ್ನು ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿಯೇ ಸರ್ಕಾರವು ಮಂಡಿಸುವ ವಿಶ್ವಾಸವಿದೆ ಎಂದು ಅವರು ತಿಳಿಸಿದ್ದಾರೆ.
ಕೊರೋನಾದಿಂದಾಗಿ, ಜೀವನ ಭಯ ಕಳೆದುಕೊಂಡ ವಕೀಲರ ಕುಟುಂಬಗಳಿಗೆ ನೆರವಾಗಬೇಕು ಎಂದು ಸರ್ಕಾರವನ್ನು ಕೋರಿದೆ. ಈ ಕೋರಿಕೆಗೆ ಇದುವರೆಗೂ ಯಾವ ಪ್ರತಿಕ್ರಿಯೆ ಕೂಡ ಬಂದಿಲ್ಲ. ಪ್ರಧಾನಿ ಹಾಗೂ ರಾಷ್ಟ್ರಪತಿ ಇದ್ದಂತಹ ಎಲ್ಲಾ ವೇದಿಕೆಯಲ್ಲಿ ಅವಕಾಶ ಸಿಕ್ಕಾಗಲೆಲ್ಲಾ ಈ ವಿಚಾರವನ್ನು ಪ್ರಸ್ತಾಪಿಸಿದ್ದೇನೆ ಎಂದು ಅವರು ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಎನ್. ವಿ. ರಮಣ ಅವರು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.