Monday, June 23, 2025
Monday, June 23, 2025

ಲೈಂಗಿಕ ಕಿರುಕುಳ: ರಾಜ್ಯದಲ್ಲಿ ಗರಿಷ್ಠ ಪ್ರಕರಣಗಳ ವಿಲೇವಾರಿ

Date:

ಅಧಿಕಾರಿಗಳ ವಿರುದ್ಧ ದಾಖಲಾಗಿದ್ದ, ಕೆಲಸದ ಸ್ಥಳಗಳಲ್ಲಿ ಲೈಂಗಿಕ ಕಿರುಕುಳ ಪ್ರಕರಣಗಳಲ್ಲಿ ಗರಿಷ್ಠ ಪ್ರಕರಣಗಳನ್ನು ಕರ್ನಾಟಕ ವಿಲೇವಾರಿ ಮಾಡಿದ ಎಂದು ಸರ್ಕಾರ ನೀಡಿದ ಅಂಕಿ ಅಂಶಗಳಲ್ಲಿ ತಿಳಿಸಿವೆ.

ಕರ್ನಾಟಕದಲ್ಲಿ ಇಂತಹ ಪ್ರಕರಣಗಳ ವಿಲೇವಾರಿ ಪ್ರಮಾಣವು ಶೇ.89 ರಷ್ಟು ಇದೆ.
2020-21ರಲ್ಲಿ ಕರ್ನಾಟಕದಲ್ಲಿ ಅಧಿಕಾರಿಗಳ ವಿರುದ್ಧ 56 ಪ್ರಕರಣಗಳು ದಾಖಲಾಗಿದ್ದವು. ಅವುಗಳ ಪೈಕಿ 50 ಪ್ರಕರಣಗಳ ವಿಲೇವಾರಿಯಾಗಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವೂ ಸಂಸತ್ತಿಗೆ ಮಾಹಿತಿ ನೀಡಿದೆ.

ಮಹಾರಾಷ್ಟ್ರದಲ್ಲಿ ಇಂತಹ ಪ್ರಕರಣಗಳ ವಿಲೇವಾರಿ ಪ್ರಮಾಣವು ಶೇ.21ರಷ್ಟು ಇದೆ. ಇದು ದೇಶದಲ್ಲಿ ಕನಿಷ್ಠ ಪ್ರಮಾಣವಾಗಿದೆ. ಈ ರಾಜ್ಯದ ಗರಿಷ್ಠ ಅಂದರೆ 102 ಪ್ರಕರಣಗಳು ದಾಖಲಾಗಿದ್ದವು. 22 ಪ್ರಕರಣಗಳನ್ನು ಮಾತ್ರ ವಿಲೇವಾರಿ ಮಾಡಲಾಗಿದೆ.

ದೆಹಲಿಯಲ್ಲಿ ಕೆಲಸದ ಸ್ಥಳದಲ್ಲಿ ಲೈಂಗಿಕ ಕಿರುಕುಳದ 62 ಪ್ರಕರಣಗಳು ದಾಖಲಾಗಿದ್ದವು. ಅವುಗಳ ಪೈಕಿ 21 ಪ್ರಕರಣಗಳ ವಿಲೇವಾರಿ ಆಗಿವೆ. ಶೇ.34 ರಷ್ಟು ಇದೆ.

ಅತಿ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ಉತ್ತರ ಪ್ರದೇಶದಲ್ಲಿ 2017ರಿಂದ ಇಲ್ಲಿಯವರೆಗೆ 92 ಪ್ರಕರಣಗಳು ದಾಖಲಾಗಿದ್ದವು. 74 ವಿಲೇವಾರಿ ಆಗಿದೆ. ಇದರ ಪ್ರಮಾಣ ಶೇ.80ರಷ್ಟಿದೆ.

ಲೋಕಸಭೆಯ ಹಲವು ಸಂಸದರು ಕೇಳಿದ ಪ್ರಶ್ನೆಗಳಿಗೆ ಪ್ರತಿಯಾಗಿ ಸಚಿವಾಲಯವು ಈ ಮಾಹಿತಿಯನ್ನು ನೀಡಿದೆ.

ಕೆಲಸದ ಸ್ಥಳದಲ್ಲಿ ನಡೆಯುವ ಲೈಂಗಿಕ ದೌರ್ಜನ್ಯ ತಡೆಯುವ ಸಲುವಾಗಿ, ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ತಡೆ ನಿಷೇಧ ಹಾಗೂ ಪರಿಹಾರ ಕಾಯ್ದೆ 2013ರ ಅಡಿ ಸೆಕ್ಸು ಯಲ್ ಹೆರಾಸ್ ಮೆಂಟ್ ಎಲೆಕ್ಟ್ರಾನಿಕ್ ಶಿ ಬಾಕ್ಸ್ ಎಂಬ ಆನ್ಲೈನ್ ದೂರು ನೀಡಿಕೆ ವ್ಯವಸ್ಥೆಯನ್ನು ಆರಂಭಿಸಲಾಗಿತ್ತು. 2017ರ ನಂತರ ಈ ವ್ಯವಸ್ಥೆ ಜಾರಿಗೆ ಬಂದಿದೆ. ಅನಂತರ ದಾಖಲಾದ ದೂರುಗಳ ಮಾಹಿತಿ ಎಂದು ಸರ್ಕಾರ ತಿಳಿಸಿದೆ.

ಶಿ-ಬಾಕ್ಸ್ ಮೂಲಕ ದೂರು ದಾಖಲಿಸಿದ ತಕ್ಷಣ ಅದು ಸಂಬಂಧಿತ ಪ್ರಾಧಿಕಾರಕ್ಕೆ ವರ್ಗಾವಣೆಯಾಗುತ್ತದೆ.
ಶಿ-ಬಾಕ್ಸ್ ಮೂಲಕ ಬಂದ ದೂರಿನ ವಿರುದ್ಧ ಕ್ರಮ ತೆಗೆದುಕೊಳ್ಳುವ ಹಾಗೂ ಅದರ ಪ್ರಗತಿಯ ಸ್ಥಿತಿಯನ್ನು ಕಾಲಕಾಲಕ್ಕೆ ಬಹಿರಂಗಪಡಿಸುವ ಹೊಣೆ ಸಂಬಂಧಿತ ಪ್ರಾಧಿಕಾರದ್ದೇ ಆಗಿರುತ್ತದೆ ಎಂದು ಸರ್ಕಾರವು ವರದಿಗಳಲ್ಲಿ ತಿಳಿಸಿದೆ.

ಪ್ರಸ್ತುತ ಈ ವ್ಯವಸ್ಥೆಯು ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಿ ನೌಕರರಿಗೆ ಸಂಬಂಧಿಸಿದ ದೂರುಗಳನ್ನು ಮಾತ್ರ ನಿರ್ವಹಣೆ ಮಾಡುತ್ತಿದೆ. ಇದನ್ನು ಖಾಸಗಿ ಕಂಪನಿಗಳಿಗೆ ವಿಸ್ತರಿಸುವ ಯೋಜನೆ ಇದೆ ಎಂದು ಸರ್ಕಾರ ತಿಳಿಸಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಎಲ್ಲಾ ಸಮುದಾಯಗಳ ಸಾಮಾಜಿಕ,ಆರ್ಥಿಕ,ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆ ನಡೆಸುವ ಉದ್ದೇಶವಿದೆ – ಮಧು ಬಂಗಾರಪ್ಪ

Madhu Bangarappa ರಾಜ್ಯದಲ್ಲಿನ ವಿವಿಧ ಜಾತಿ ಜನಾಂಗಗಳ, ಅದರಲ್ಲೂ ಮುಖ್ಯವಾಗಿ ಹಿಂದುಳಿದ...

DK Shivakumar ಎತ್ತಿನಹೊಳೆ ಯೋಜನೆ ಕಾಮಗಾರಿ‌ ಪರಿಶೀಲಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

DK Shivakumar ಎತ್ತಿನ ಹೊಳೆ ಯೋಜನೆಯ ಮೂಲಕ ಕುಡಿಯುವ ನೀರನ್ನು ಬರಪೀಡಿತ...

Royal English Medium School ರಾಯಲ್ ಡೈಮಂಡ್ ಶಾಲೆಯಲ್ಲಿ‌ ನಿತ್ಯ ಯೋಗ ಮಾಡುವ ಸಂಕಲ್ಪ ಸ್ವೀಕಾರ

Royal English Medium School ಶಿವಮೊಗ್ಗ ನಗರದ ಹೆಸರಾಂತ ವಿದ್ಯಾಸಂಸ್ಥೆಯಲ್ಲಿ ಒಂದಾದ...