ಗುತ್ತಿಗೆ ಪದ್ಧತಿ ರದ್ದು ಮಾಡಬೇಕು. ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು. ಮತ್ತು ಕಾರ್ಪೊರೇಟ್ ಮಾಲೀಕರ ಪರವಾಗಿರುವ 4 ಕಾರ್ಮಿಕ ಸಂಹಿತೆಗಳನ್ನು ರೈತ ವಿರೋಧಿ ಕೃಷಿ ಕಾಯ್ದೆಗಳ ರೀತಿಯಲ್ಲೇ ಹಿಂದಕ್ಕೆ ಪಡೆಯಬೇಕು ಎಂದು ಒತ್ತಾಯಿಸಿ ಕಾರ್ಮಿಕ ಹಕ್ಕುಗಳ ಹೋರಾಟ ಸಮಿತಿ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದವು.
‘ಬೆವರಿನ ಪಾಲು, ಘನತೆಯ ಬಾಳು’ ಧ್ಯೇಯ ವಾಕ್ಯದೊಂದಿಗೆ ನಡೆದ ಕಾರ್ಮಿಕ ಹಕ್ಕೊತ್ತಾಯ ಸಮಾವೇಶ ನಡೆಯಿತು. ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನದ ವರೆಗೆ ಪ್ರತಿಭಟನಾಕಾರರು ಮೆರವಣಿಗೆ ನಡೆಸಿದರು.
ಮೆರವಣಿಗೆಯಲ್ಲಿ ಸಾವಿರಾರು ಜನರು ಪಾಲ್ಗೊಂಡಿದ್ದರು.
ಕಾರ್ಮಿಕರ ಆಯ್ಕೆ ಹೋರಾಟ ಚಿರಾಯುವಾಗಲಿ, ಗುತ್ತಿಗೆ ಪದ್ಧತಿ ಬೇಡವೇ ಬೇಡ, ಕಾರ್ಮಿಕ ವಿರೋಧಿ ಕಾಯ್ದೆಗಳು ರದ್ದಾಗಬೇಕು ಎಂಬ ಘೋಷಣೆಗಳನ್ನು ಕೂಗುವ ಮೂಲಕ ಪ್ರತಿಭಟನಾಕಾರರು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿರುದ್ಧ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಕೆಂಪು ಹಾಗೂ ನೀಲಿ ಧ್ವಜಗಳನ್ನು ರಾರಾಜಿಸಿದವು.
ಈ ಸಂದರ್ಭದಲ್ಲಿ ಕರ್ನಾಟಕ ಶ್ರಮಿಕ ಶಕ್ತಿಯ ರಾಜ್ಯ ಘಟಕದ ಅಧ್ಯಕ್ಷ ವರದ ರಾಜೇಂದ್ರ, ಪಿಯುಸಿ ರಾಜ್ಯಘಟಕದ ಅಧ್ಯಕ್ಷ ಆರ್. ಮಾನಸಯ್ಯ ಇನ್ನು ಮುಂತಾದವರು ಉಪಸ್ಥಿತರಿದ್ದರು.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.