ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿ ಉದ್ದೇಶಪೂರ್ವಕವಾಗಿ ಕೆಲವರು ಗೊಂದಲಗಳನ್ನ ಸೃಷ್ಟಿಸಿದ್ದಾರೆ. ಸಂಗೊಳ್ಳಿ ರಾಯಣ್ಣ ಪ್ರತಿಮೆ ಹಾಳು ಮಾಡಿರುವುದನ್ನು ಸಹಿಸಲು ಸಾಧ್ಯವಿಲ್ಲ. ಅಪರಾಧಿಗಳು ಯಾರೇ ಆಗಿರಲಿ, ಅವರ ವಿರುದ್ಧ ಕಠಿಣ ಕ್ರಮ ಜರುಗಿಸುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದರು.
‘ ಮಹಾತ್ಮರ ಪ್ರತಿಮೆ ವಿಚಾರವಾಗಿ ವಿಧಾನಮಂಡಲದಲ್ಲಿ ಈ ಬಗ್ಗೆ ಸುಧೀರ್ಘವಾಗಿ ಚರ್ಚೆ ಮಾಡುತ್ತೇವೆ. ಈ ರೀತಿ ಘಟನೆಗಳು ಮರುಕಳಿಸದಂತೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ. ಘಟನೆ ಬಗ್ಗೆ ಮುಖ್ಯಮಂತ್ರಿ ಬೊಮ್ಮಾಯಿ ಅವರು ಕಠಿಣ ಕ್ರಮ ಜರುಗಿಸುವಂತೆ ಗೃಹ ಸಚಿವರಿಗೆ ಸೂಚಿಸಿದ್ದಾರೆ. ಗಲಭೆಗೆ ಸಂಬಂಧಿಸಿ ಈಗಾಗಲೇ 23 ಜನರನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ. ಘಟನೆಯಲ್ಲಿ ಇನ್ನು ಯಾರೆಲ್ಲ ಶಾಮೀಲಾಗಿದ್ದಾರೆಯೋ ಅವರನ್ನು ಬಂಧಿಸುವ ಕೆಲಸ ಮುಂದುವರಿಸುತ್ತೇವೆ ಎಂದು ಯಡಿಯೂರಪ್ಪ ಅವರು ತಿಳಿಸಿದರು.
ಎಂಇಎಸ್ ಈ ಮಟ್ಟಿಗೆ ಬೆಳೆಯಲು ಹಿಂದೆ ಬಿಜೆಪಿ ನೀಡಿದ್ದ ಬೆಂಬಲವೇ ಕಾರಣ ಎಂಬ ಆರೋಪಕ್ಕೆ ಪ್ರತ್ಯುತ್ತರವಾಗಿ, ‘ಯಾರೋ ಕೆಲವರು ವಾಸ್ತವಿಕ ಸಂಗತಿ ತಿಳಿಯದವರು ಮಾಡಿದ ಆರೋಪಕ್ಕೆ ಅರ್ಥವಿಲ್ಲ. ಯಾರೇ ಅಪರಾಧ ಮಾಡಿದರೂ ಕ್ಷಮಿಸುವ ಪ್ರಶ್ನೆಯೇ ಇಲ್ಲ. ತಪ್ಪು ಮಾಡಿದವರ ಮೇಲೆ ಕ್ರಮ ಜರುಗಿಸಿ ಜೈಲಿಗೆ ಕಳುಹಿಸಿರುವುದೇ ಇದಕ್ಕೆ ಉದಾಹರಣೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಮಾಧ್ಯಮ ಮಿತ್ರರಿಗೆ ತಿಳಿಸಿದರು.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.