Friday, October 4, 2024
Friday, October 4, 2024

ತಳಮಟ್ಟದಿಂದ ಉತ್ತಮ ಆಡಳಿತ ಮೋದೀಜಿ ಗುರಿ- ಅಮಿತ್ ಶಾ

Date:

ಉತ್ತಮ ಆಡಳಿತಕ್ಕಾಗಿ ಜನರು ಹಲವಾರು ವರ್ಷಗಳಿಂದ ಕಾಯುತ್ತಿದ್ದಾರೆ. ಕಳೆದ 7 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರ ಜನರಿಗೆ ಉತ್ತಮ ಆಡಳಿತ ನೀಡುತ್ತಿದೆ ಎಂದು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರು ತಿಳಿಸಿದ್ದಾರೆ.

ಉತ್ತಮ ಆಡಳಿತ ದಿನ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಅಮಿತ್ ಶಾ ಅವರು ಮಾತನಾಡುತ್ತಿದ್ದರು. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನವಾದ ಡಿಸೆಂಬರ್ 25ರಂದು ಉತ್ತಮ ಆಡಳಿತ ದಿನ ಎಂದು ಪ್ರತಿವರ್ಷ ಆಚರಿಸಲಾಗುತ್ತದೆ.

“ನಮಗೆ ಸ್ವಾತಂತ್ರ್ಯ ದೊರಕಿ ಹಲವು ವರ್ಷಗಳು ಕಳೆದಿವೆ. ಆದರೆ ಯಾವಾಗ ಉತ್ತಮ ಆಡಳಿತ ದೊರಕುತ್ತದೆ ಎಂದು ಜನರು ಕೇಳುತ್ತಲೇ ಇದ್ದರು. ಉತ್ತಮ ಆಡಳಿತವನ್ನು ಕಾಣದ ಜನರಿಗೆ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಮೇಲಿನ ನಂಬಿಕೆ ಹೊರಟು ಹೋಗಿತ್ತು.

ಮೋದಿಜಿ ಅವರು ತಳಮಟ್ಟದಿಂದಲೂ ಉತ್ತಮ ಆಡಳಿತ ನೀಡುವ ಮೂಲಕ ಪ್ರಜಾಪ್ರಭುತ್ವದ ಮೇಲೆ ಜನರಿಗೆ ವಿಶ್ವಾಸ ಮರಳುವಂತೆ ಮಾಡಿದ್ದಾರೆ ಎಂದು ಅಮಿತ್ ಶಾ ಅವರು ಹೇಳಿದರು.

2014ಕ್ಕೂ ಮುಂಚೆ ದೇಶದಲ್ಲಿ ಹಲವು ಸರ್ಕಾರಗಳು ಆಡಳಿತ ನಡೆಸಿ ಹೋಗಿವೆ. ಆದರೆ ಮೋದಿಜಿ ಅವರು ಅಧಿಕಾರಕ್ಕೆ ಬಂದಾಗ ಇವರ ಸರ್ಕಾರ ಕೇವಲ ಅಧಿಕಾರ ನಡೆಸಲು ಬಂದಿಲ್ಲ. ಬದಲಿಗೆ ದೇಶವನ್ನು ಬದಲಾಯಿಸಲು ಬಂದಿದೆ ಎಂದು ಜನರು ಅರ್ಥಮಾಡಿಕೊಂಡರು ಎಂದು ಅಮಿತ್ ಶಾ ಅವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ಈ ಹಿಂದೆ ಬಂದಿದ್ದ ಸರ್ಕಾರಗಳು ಮತ ಬ್ಯಾಂಕ್ ಗಳನ್ನು ಗಮನದಲ್ಲಿರಿಸಿಕೊಂಡು ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದವು. ಆದರೆ ಮೋದಿಜಿ ನೇತೃತ್ವದ ಸರ್ಕಾರವು ಜನರ ಇಷ್ಟವಾದ ನಿರ್ಧಾರಗಳನ್ನು ತೆಗೆದುಕೊಳ್ಳುವ ಬದಲು, ಜನರಿಗೆ ಒಳ್ಳೆಯದಾಗುವ ರೀತಿಯಲ್ಲಿ ನಿರ್ಧಾರಗಳನ್ನು ತೆಗೆದುಕೊಂಡಿತು. ಇವೆರಡರ ನಡುವೆ ವ್ಯತ್ಯಾಸವಿದೆ. ಕೆಲ ನಿರ್ಧಾರಗಳಿಂದ ಜನಪ್ರಿಯತೆ ದೊರಕುತ್ತದೆ. ಆದರೆ ಅಂಥ ನಿರ್ಧಾರಗಳು ದೇಶಕ್ಕೆ ಸಮಸ್ಯೆ ತಂದೊಡ್ಡುತ್ತವೆ ಎಂದು ಅಮಿತ್ ಶಾ ಅವರು ಹೇಳಿದರು.

ಏಳು ವರ್ಷಗಳಿಂದ ಕೇಂದ್ರ ಸರ್ಕಾರದ ವಿರುದ್ಧ ಯಾವುದೇ ಭ್ರಷ್ಟಾಚಾರ ಆರೋಪ ಇಲ್ಲದಿರುವುದೇ ಉತ್ತಮ ಆಡಳಿತ ನಿದರ್ಶನ. ಹಲವಾರು ದಶಕಗಳಿಂದ ಕಲ್ಯಾಣ ಕಾರ್ಯಕ್ರಮಗಳಿಂದ ವಂಚಿತರಾಗಿದ್ದ ಸುಮಾರು 60 ಕೋಟಿ ಜನರಿಗೆ ಅಭಿವೃದ್ಧಿಯ ಲಾಭ ಸಿಗುವಂತೆ ಮಾಡಲಾಯಿತು. ಬಡವರಿಗೆ ಮನೆಗಳು, ಶೌಚಾಲಯಗಳು,ವಿದ್ಯುತ್ ಸಂಪರ್ಕ, ಅಡುಗೆ ಅನಿಲ ಸೌಲಭ್ಯ ನೀಡಲಾಗಿದೆ ಎಂದು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರು ವಿವರಿಸಿದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.


Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Jawahar Navodaya Vidyalaya ಗಾಜನೂರಿನ ನವೋದಯ ಶಾಲಾ ಪ್ರವೇಶಾತಿ 2025-26 ಪರೀಕ್ಷೆಗೆ ಆನ್ ಲೈನ್ ಅರ್ಜಿ ಆಹ್ವಾನ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯವು 2025-26ನೇ ಸಾಲಿಗೆ 9...

Department of Parliamentary Affairs and Legislation ಅಕ್ಟೋಬರ್ 5 ರಂದು ನಡೆಯುವ “ಯುವ ಸಂಸತ್” ಸ್ಥಳ‌ ಬದಲಾವಣೆ ಗಮನಿಸಿ

Department of Parliamentary Affairs and Legislation ಸಂಸದೀಯ ಮತ್ತು ವ್ಯವಹಾರಗಳು...

MESCOM ಅ.4 ರಿಂದ7 ವರೆಗೆ ಮೆಸ್ಕಾಂ ಆನ್ ಲೈನ್ ಸೇವೆ ತಾತ್ಕಾಲಿಕ ಅಲಭ್ಯ

MESCOM ಅ.04ರಿಂದ 07 ರ ವರೆಗೆ ಮೆಸ್ಕಾಂ ಮಾಹಿತಿ ತಂತ್ರಜ್ಞಾನ...

Shivamogga Dasara ಶಿವಮೊಗ್ಗ ಚಲನಚಿತ್ರ ದಸರಾ ಚಾಲನೆಗೆ ಹಿರಿಯ ನಟಿ ಉಮಾಶ್ರೀ ಆಗಮನ

Shivamogga Dasara ಶಿವಮೊಗ್ಗ ಮಹಾ ನಗರ ಪಾಲಿಕೆ ವತಿಯಿಂದ ಆಯೋಜಿಸಲಾಗಿರುವ...