ಜಿಲ್ಲೆಯ ಗ್ರಾಮೀಣ ಪ್ರದೇಶದ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಮಾಹಿತಿಯ ಕೊರತೆಯಿಂದಾಗಿ ಸರ್ಕಾರವು ನೀಡುತ್ತಿರುವ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುತ್ತಿರುವವರ ಸಂಖ್ಯೆ ಕಡಿಮೆ ಇದೆ.ಅಂತಹ ವಿದ್ಯಾರ್ಥಿಗಳನ್ನು ಗುರುತಿಸಿ ಅರಿವು ಮೂಡಿಸಿ ಸಕಾಲದಲ್ಲಿ ಅರ್ಜಿ ಸಲ್ಲಿಸಲು ಮಾಹಿತಿ ಒದಗಿಸುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಸಮಾಜ ಕಲ್ಯಾಣ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಅವರು ತಮ್ಮ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆಯು ಏರ್ಪಡಿಸಿದ್ದ ಜಿಲ್ಲಾ ಜಾಗೃತಿ ಸಮಿತಿ ಹಾಗೂ ಉಸ್ತುವಾರಿ(ದೌರ್ಜನ್ಯ ಪ್ರತಿಬಂಧ) ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಶಿವಮೊಗ್ಗ ತಾಲೂಕಿನ ಶಾಲೆಯೊಂದರಲ್ಲಿ ಶಿಕ್ಷಕರು ಮಕ್ಕಳಿಗೆ ಕುಂಕುಮ ಇಡದಂತೆ ಹಾಗೂ ಬಳೆ ಧರಿಸದಂತೆ ಸೂಚಿಸಿರುವುದನ್ನು ಗಮನಿಸಲಾಗಿದ್ದು, ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜ್ ಅವರಿಗೆ ಸೂಚಿಸಿದರು.

ಶಿವಮೊಗ್ಗ ಸಮೀಪದ ಗಾಜನೂರಿನ ನವೋದಯ ವಸತಿ ಶಾಲೆಯ ಪರಿಸರದಲ್ಲಿ ಭಾರೀ ಪ್ರಮಾಣದ ಕುರುಚಲು ಗಿಡ-ಗಂಟೆಗಳು ಬೆಳೆದಿದ್ದು ಸ್ವಚ್ಛತೆ ಕಾಣದಾಗಿದೆ ಎಂದು ಸಮಿತಿ ಸದಸ್ಯರು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಾಗ, ಸದರಿ ಶಾಲೆಗೆ ಖುದ್ದು ಭೇಟಿ ನೀಡಿ, ಪರಿಶೀಲನೆ ನಡೆಸಲಾಗಿದ್ದು, ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದರು. ಪಾಠೋಪಕರಣ, ಬೀದಿದೀಪ, ನೈರ್ಮಲ್ಯ ಮುಂತಾದ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸುವಂತೆ ಸೂಚನೆ ನೀಡಲಾಗಿದ್ದು, ಶೀಘ್ರದಲ್ಲಿ ಎಲ್ಲವೂ ಸುಗಮವಾಗಲಿದೆ ಎಂದರು.
ಉಪವಿಭಾಗಾಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ತಮ್ಮ ಕಾರ್ಯಕ್ಷೇತ್ರದ ವ್ಯಾಪ್ತಿಯಲ್ಲಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಜಿಗಳನ್ನು ತ್ವರಿತವಾಗಿ ವಿಲೇ ಮಾಡುವಂತೆ ಸೂಚಿಸಿದ ಅವರು, ಸೊರಬ ತಾಲೂಕಿನ ಬೆನ್ನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಎಸ್.ಸಿ. ಸಮುದಾಯದ ಜನರಿಗೆ ಸ್ಮಶಾನ ಭೂಮಿಯನ್ನು ಮಂಜೂರು ಮಾಡುವ ಕುರಿತಂತೆ, ಈಗಾಗಲೇ ಜಿಲ್ಲೆಗೆ 150 ಗ್ರಾಮಗಳಲ್ಲಿ ಸ್ಮಶಾನ ಭೂಮಿ ಮಂಜೂರು ಮಾಡಲಾಗಿದೆ. ಪ್ರಸ್ತುತ 150 ಗ್ರಾಮಗಳ ಪಟ್ಟಿಯಲ್ಲಿ ಈ ಗ್ರಾಮದ ಹೆಸರಿರುವುದನ್ನು ಪರಿಶೀಲಿಸಿದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ಕಳೆದ ಒಂದು ವರ್ಷಗಳ ಅವಧಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವ್ಯಕ್ತಿಗಳ ಮೇಲೆ ಸುಮಾರು 91 ದೌರ್ಜನ್ಯ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 48ಪ್ರಕರಣಗಳಲ್ಲಿ ಕ್ರಮ ವಹಿಸಲಾಗಿದೆ. ಉಳಿದ ಪ್ರಕರಣಗಳ ಕುರಿತು ಮಾಹಿತಿ ಒದಗಿಸುವಂತೆ ಹಾಗೂ ತುರ್ತು ಕ್ರಮ ಕೈಗೊಳ್ಳುವಂತೆ ಸಂಬಂಧಿತ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಉಪಸ್ಥಿತರಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್ ಅವರು ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವ್ಯಕ್ತಿಗಳ ಮೇಲೆ ನಡೆಯುವ ದೌರ್ಜನ್ಯ ಪ್ರಕರಣಗಳಿಗೆ ಹಲವು ಕಾರಣಗಳಿದ್ದು, ಅವುಗಳನ್ನು ಸಕಾಲದಲ್ಲಿ ಗುರುತಿಸಿ, ಅಹಿತಕರ ಘಟನೆಗಳು ಮರುಕಳಿಸದಂತೆ ಹಾಗೂ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದಲ್ಲದೇ ಪೊಲೀಸ್ ಸಿಬ್ಬಂಧಿಗಳನ್ನು ಕರ್ತವ್ಯಕ್ಕೆ ನಿಯೋಜಿಸಲಾಗುವುದು ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಮತಿ ಎಂ.ಎಲ್.ವೈಶಾಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ನಾಗರಾಜ್, ಉಪವಿಭಾಗಾಧಿಕಾರಿ ಟಿ.ಬಿ.ಪ್ರಕಾಶ್, ಜಿಲ್ಲಾ ಜಾಗೃತಿ ಸಮಿತಿಯ ಸದಸ್ಯರಾದ ನಾಗರಾಜ್, ರಾಜ್ಕುಮಾರ್ ಸೇರಿದಂತೆ ಸಂಬಂಧಿತ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Latest News on WhatsApp

Why Keelambi Media Lab Pvt Ltd ?
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.