Saturday, October 5, 2024
Saturday, October 5, 2024

ತೀರ್ಥಹಳ್ಳಿಯಲ್ಲಿ ಕಾಲೇಜು ರಂಗೋತ್ಸವ

Date:

ಭಾರತೀಯ ಸಂಸ್ಕೃತಿಯಲ್ಲಿ ಸಾಂಸ್ಕೃತಿಕ ಕಲೆಗಳಾದ ನೃತ್ಯ, ಹಾಡು ಮತ್ತು ಇತರ ಕಲೆಗಳಿಗೆ ಎಷ್ಟು ಪ್ರಾಮುಖ್ಯತೆ ಇದೆಯೋ , ಅಷ್ಟೇ ಪ್ರಾಮುಖ್ಯತೆ ನಾಟಕಕ್ಕೂ ಕೂಡ ಇದೆ.

ನಾಟಕವು ಎಲ್ಲವನ್ನು ಒಳಗೊಂಡ ಒಂದು ಸಮಗ್ರ ಕಲೆಯಾಗಿದೆ. ಸಮಾಜದ ಹುಳುಕುಗಳನ್ನು ಎತ್ತಿ ತೋರಿಸುವ ಸಮಾಜದ ಸಂಬಂಧಗಳನ್ನು ಗಟ್ಟಿಗೊಳಿಸುವ ಸಾಮರ್ಥ್ಯ ನಾಟಕಕ್ಕೆ ಇದೆ. ನಾಟಕ ಪುರಾತನ ಕಲೆಯಾಗಿದೆ. ನಾಟಕಕ್ಕೆ ಪ್ರೇಕ್ಷಕರು ಜೀವಾಳ.

ಇಂದಿನ ಜಾಗತೀಕರಣ ಮತ್ತು ಆಧುನಿಕತೆಯ ಭರಾಟೆಯಲ್ಲಿ ನಮ್ಮ ಸಂಸ್ಕೃತಿಯ ಪ್ರತಿಬಿಂಬ ಗಳಾಗಿರುವ ನಾಟಕಗಳು ಜನರನ್ನು ತಲುಪುತ್ತಿಲ್ಲ. ಸಿನಿಮಾ, ಟಿವಿ ಕಡೆಗೆ ಜನರು ಹೆಚ್ಚು ಆಕರ್ಷಿತರಾಗಿ ನಾಟಕಗಳನ್ನು ಪ್ರೇಕ್ಷಕರ ಸಂಖ್ಯೆ ಕಡಿಮೆ ಆಗಿದೆ.

ಸಿನಿಮಾ ಜನರಿಗೆ ಎಷ್ಟು ಪ್ರಭಾವ ಬೀರುತ್ತದೆಯೋ ನಾಟಕವು ಸಹ ತನ್ನದೇ ಆದಂತಹ ಪರಿಣಾಮ ಬೀರುತ್ತದೆ.

ಶಿವಮೊಗ್ಗ ಜಿಲ್ಲಾ ಕಾಲೇಜು ರಂಗೋತ್ಸವ 2021-22 ನೇ ಸಾಲಿನ ಶಿವಮೊಗ್ಗ ರಂಗಾಯಣ ಆಯೋಜಿಸಿರುವ ಯುವಜನತೆಯೆಡೆಗೆ, ರಂಗಾಯಣದ ಹೆಜ್ಜೆ ಎಂಬ ಶೀರ್ಷಿಕೆ ಅಡಿಯಲ್ಲಿ ನಾಟಕ ಪ್ರದರ್ಶನಗೊಳ್ಳಲಿದೆ.

ಯುವಕರಲ್ಲಿ ನಾಟಕದ ಅರಿವು ಮೂಡಲಿ ಎಂಬ ಉದ್ದೇಶದಿಂದ ಈ ರಂಗೋತ್ಸವವನ್ನು ಆಯೋಜಿಸಲಾಗಿದೆ.

” ತುರುಬು ಕಟ್ಟುವ ಹದನ” ಎಂಬ ನಾಟಕವನ್ನು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೀರ್ಥಹಳ್ಳಿ ವಿದ್ಯಾರ್ಥಿಗಳು ನಾಟಕ ಪ್ರದರ್ಶನ ಮಾಡಲಿದ್ದಾರೆ. ನಿರ್ದೇಶನ: ಶ್ರೀಕಾಂತ್ ಕುಮಟಾ.
ಸಮಯ: ಇಂದು ಸಂಜೆ 6 ಗಂಟೆಗೆ

ಸ್ಥಳ :ಶಾಂತವೇರಿ ಗೋಪಾಲಗೌಡ ರಂಗಮಂದಿರ ತೀರ್ಥಹಳ್ಳಿ.

ನಾಟಕಕ್ಕೆ ಕೇವಲ 100 ಜನರಿಗೆ ಅವಕಾಶ ಕಲ್ಪಿಸಿಕೊಡಲಾಗಿದೆ. ನೆನಪಿಡಿ ಪ್ರೇಕ್ಷಕರು ಕೊರೋನಾ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N.Chennabasappa ಬನ್ನಿ ಪೂಜೆಗೆ ಶಾಸಕ ಚೆನ್ನಿ ಅವರಿಂದ ಪೂರ್ವೋಚಿತ ಸಿದ್ಧತೆ

S.N.Chennabasappa ನವರಾತ್ರಿ ಉತ್ಸವದ ಕಡೆಯ ದಿನದಂದು ನಗರದ ಅಲ್ಲಮಪ್ರಭು ಮೈದಾನದಲ್ಲಿ (ಫ್ರೀಡಂ...

Shree Sigandur Chowdeshwari Temple ಸಿಗಂದೂರು ದೇವಿ ವೈಭವದ ನವರಾತ್ರಿ ಉತ್ಸವ

Shree Sigandur Chowdeshwari Temple ಶ್ರೀ ಕ್ಷೇತ್ರ ಸಿಗಂದೂರಿನಲ್ಲಿ...

Madhu Bangarappa ಸಾರ್ವಜನಿಕರ ಅಹವಾಲುಗಳಿಗೆ ಸಕಾಲದಲ್ಲಿ ಅಗತ್ಯ ಸೌಲಭ್ಯ ಒದಗಿಸಿ- ಮಧು ಬಂಗಾರಪ್ಪ

Madhu Bangarappa ಸೌಲಭ್ಯ ಅರಸಿ ಕಚೇರಿಗೆ ಆಗಮಿಸುವ ಗ್ರಾಮೀಣ ಮತ್ತು...

CM Siddharamaiah ಚಾಮುಂಡೇಶ್ವರಿ ಆಶೀರ್ವಾದದಿಂದಲೇ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದೇನೆ- ಸಿದ್ಧರಾಮಯ್ಯ

CM Siddharamaiah ತಾಯಿ ಚಾಮುಂಡೇಶ್ವರಿ ಹಾಗೂ ಇಲ್ಲಿನ ಜನರ ಆಶೀರ್ವಾದದಿಂದಲೇ ಎರಡನೇ...