Monday, December 15, 2025
Monday, December 15, 2025

ಅಮೇರಿಕ ಕೆನಡಾ ಗಡಿಯಲ್ಲಿ ನಾಲ್ವರು ಭಾರತೀಯರ ಸಾವು

Date:

ಕೆನಡಾ-ಅಮೆರಿಕ ಗಡಿಯಲ್ಲಿ ಅತಿಯಾದ ಶೀತ ಗಾಳಿಯಿಂದಾಗಿ ನಾಲ್ವರು ಭಾರತೀಯರು ಮೃತಪಟ್ಟಿದ್ದಾರೆ.
ಇದೇ ಗಡಿಯಲ್ಲಿ ಅಮೆರಿಕ ಪೊಲೀಸರು ಕೆನಡಾದ ಒಬ್ಬನನ್ನು ಮಾನವ ಕಳ್ಳಸಾಗಣೆ ಆರೋಪದಲ್ಲಿ ಬಂಧಿಸಿದ್ದಾರೆ.
ಅವರು ಭಾರತೀಯರು ಅಕ್ರಮವಾಗಿ ಅಮೆರಿಕ ಗಡಿ ಪ್ರವೇಶಿಸಲು ತೆರಳುವಾಗ ಒಬ್ಬರು ದಾರಿತಪ್ಪಿ ಬೇರ್ಪಟ್ಟಿದ್ದಾರೆ. ನಾಲ್ವರು ಅತಿಯಾದ ಚಳಿಯಿಂದ ಮೃತಪಟ್ಟಿದ್ದಾರೆ. ಬಹುಶಃ ಅವರೆಲ್ಲರೂ 11 ಗಂಟೆ ಕಾಲ ನಡೆದಿದ್ದಾರೆ. ಡಿ ಗುಂಪು ಅವರನ್ನು ಕರೆದೊಯ್ಯಬೇಕಿತ್ತು. ಅಷ್ಟರಲ್ಲಿ ಚಳಿ ತಾಳಲಾಗದೆ ಮೃತಪಟ್ಟಿದ್ದಾರೆ ಎಂದು ಅಮೆರಿಕ ಅಧಿಕಾರಿಗಳು ಶಂಕಿಸಿದ್ದಾರೆ.
ಶುಕ್ರವಾರ ಅಮೆರಿಕ ಪೊಲೀಸರು ಗಡಿಯಲ್ಲಿ ಕೆನಡಾದ ಸ್ಟೀವ್ ಶಾಂಡ್ ಎಂಬುವನನ್ನು ಬಂಧಿಸಿದ್ದಾರೆ. ಈತನು ಬುಧವಾರ ದಾಖಲೆ ಇಲ್ಲದ ಇಬ್ಬರು ಭಾರತೀಯರನ್ನು ವಾಹನದಲ್ಲಿ ಕರೆದುಕೊಂಡು ಹೋಗುವಾಗ ಪೊಲೀಸರ ಬಲೆಗೆ ಸಿಕ್ಕಿಬಿದ್ದಿದ್ದಾನೆ. ಹಾಗಾಗಿ ಕೆನಡಾ- ಅಮೆರಿಕ ಗಡಿಯಲ್ಲಿ ಮಾನವ ಕಳ್ಳಸಾಗಣೆ ಆರೋಪ ಕೇಳಿಬಂದಿದೆ.
ಮಿನ್ನೆಸೋಟ ಗಡಿಯ ಕೆನಡಾ ಪ್ರದೇಶದಲ್ಲಿ ಇಬ್ಬರು ತರುಣರು, ಒಬ್ಬ ಬಾಲಕಿ ಹಾಗೂ ಒಂದು ಶಿಶು ಮೃತಪಟ್ಟಿದ್ದು, ಇವರೆಲ್ಲರೂ ಭಾರತೀಯರೆಂದು ತಿಳಿದು ಬಂದಿದೆ.
ಕಳೆದ ಮಂಗಳವಾರ ನಾಲ್ವರೂ ಮೃತಪಟ್ಟಿದ್ದಾರೆ. ಮೈನಸ್ ಡಿಗ್ರಿ ಸೆಲ್ಸಿಯಸ್ ತಾಪಮಾನ ಇರುವುದರಿಂದ ಚಳಿಯಲ್ಲಿ ಮರಗಟ್ಟಿ ಮೃತಪಟ್ಟಿರಬಹುದು ಎಂದು ಹೇಳಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...