Monday, December 8, 2025
Monday, December 8, 2025

ಫೆಬ್ರವರಿ 15 ರ ನಂತರ ಒಮಿಕ್ರಾನ್ ಅಬ್ಬರ ತಗ್ಗಲಿದೆ

Date:

ಓಮಿಕ್ರಾನ್ ರೂಪಾಂತರಿ‌ ಯಿಂದ ಕಂಡುಬಂದಿರುವ ಕೊರೋನಾ ಮೂರನೆ ಅಲೆಯ ಅಬ್ಬರ ಫೆಬ್ರವರಿ 15ರ ನಂತರ ಇಳಿಕೆಯಾಗಲಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

ಕೊರೋನಾ ಸೋಂಕಿನ ಹೊಸ ಪ್ರಕರಣಗಳು ಬಹುತೇಕ ರಾಜ್ಯಗಳಲ್ಲಿ ನಿಧಾನವಾಗಿ ಇಳಿಕೆ ಕಾಣುತ್ತಿದೆ. ಅಥವಾ ಸ್ಥಿರವಾಗಿದೆ. ದೆಹಲಿ, ಮುಂಬೈ ಹೀಗೆ ಹಲವಾರು ಮಹಾನಗರಗಳಲ್ಲಿಯೂ ಸೋಂಕಿತರ ಸಂಖ್ಯೆ ಇಳಿಕೆಯಾಗಿದೆ. ಇದೇ ಪರಿಸ್ಥಿತಿ ಮುಂದುವರೆಯಲಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ವರದಿಯಲ್ಲಿ ತಿಳಿಸಿದೆ.

ಶೀಘ್ರದಲ್ಲೇ ಪ್ಯಾಂಡೆಮಿಕ್ ನಿಂದ ಎಂಡೆಮಿಕ್ ಆಗಿ ಪರಿವರ್ತನೆ ಆಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ದೇಶದಲ್ಲಿ ಮೂರನೇ ಅಲೆ ಪರಿಣಾಮವನ್ನು ಕೊರೋನಾ ನಿರೋಧಕ ಲಸಿಕೆಗಳು ತಗ್ಗಿಸಿವೆ. ಆದರೂ, ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಜೊತೆ ಕೇಂದ್ರ ಆರೋಗ್ಯ ಸಚಿವಾಲಯವು ಸಂಪರ್ಕದಲ್ಲಿದೆ. ಅದರಲ್ಲೂ, ದೇಶದ ಶೇ. 74ರಷ್ಟು ವಯಸ್ಕರು ಲಸಿಕೆಯ 2 ಡೋಸ್ ಪಡೆದಿರುವುದು ಸಕರಾತ್ಮಕವಾಗಿದೆ.

ಆದ್ದರಿಂದ ಮೂರನೇ ಅಲೆಯಲ್ಲಿ ಸಾವಿನ ಪ್ರಮಾಣ ಗಣನೀಯವಾಗಿ ತಗ್ಗಿದೆ ಎಂದು ಸಚಿವಾಲಯದ ವರದಿಗಳು ತಿಳಿಸಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...