Saturday, October 5, 2024
Saturday, October 5, 2024

ನಮ್ಮ ಪ್ರತಿಭೆಗಳು ವಿದೇಶ ಖ್ಯಾತಿ ಜೊತೆ ಸ್ವದೇಶ ಪ್ರಗತಿಗೂ ಶ್ರಮಿಸಬೇಕು-ಪ್ರಧಾನಿ

Date:

ಪ್ರಧಾನಿ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪಡೆದ ಪುಟಾಣಿ ವೀರರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶಿ ಆಂದೋಲನದ ಮಹತ್ವವನ್ನು ತಿಳಿಸಿದರು.

“ಸರ್ಕಾರ ರೂಪಿಸುವ ಪ್ರತಿ ಯೋಜನೆಯ ಕೇಂದ್ರಬಿಂದು ಯುವ ಜನರೇ ಆಗಿರುತ್ತಾರೆ. ಇದರ ಪ್ರಯೋಜನ ಪಡೆಯುವ ಯುವ ಪ್ರತಿಭೆಗಳು ದೇಶಿ ಆಂದೋಲನವನ್ನು ಬೆಂಬಲಿಸಬೇಕು ಎಂದು ಸಲಹೆ ನರೇಂದ್ರ ಮೋದಿ ಅವರು ಸಲಹೆ ನೀಡಿದರು.

ಪುರಸ್ಕಾರ ವಿಜೇತ ಬಾಲಪ್ರತಿಭೆಗಳನ್ನು ತೆಗೆ ಆನ್ಲೈನ್ ಮೂಲಕ ಸಂವಾದ ನಡೆಸಿದ ಪ್ರಧಾನಿ ಅವರು, ಹಲವು ಉಪಯುಕ್ತ ಕಿವಿಮಾತುಗಳನ್ನು ಹೇಳಿದ್ದಾರೆ. ಸ್ವಾತಂತ್ರ್ಯ ಸೇನಾನಿ ಸುಭಾಷ್ ಚಂದ್ರ ಬೋಸ್ ಅವರ ಹೊಲೋಗ್ರಾಮ್ ಪ್ರತಿಭೆ ಅನಾವರಣಗೊಳಿಸಿದ ಕುರಿತು ಕೇಳಿದ ಪ್ರಶ್ನೆಗೆ, ಸೊಗಸಾದ ಉತ್ತರ ನೀಡಿದರು. ” ನೇತಾಜಿ ಅವರಿಂದ ಈ ದೇಶ ಬಹುದೊಡ್ಡ ಸ್ಪೂರ್ತಿಯನ್ನು ಪಡೆದಿದೆ. ಅದಕ್ಕೆ ಪ್ರತಿಯಾಗಿ ಅವರನ್ನು ಸ್ಮರಿಸುವಂತೆದ್ದೇನಾದರೂ ಮಾಡಬೇಕಾದದ್ದು ನಮ್ಮ ಕರ್ತವ್ಯ. ಬಾಲ ಪ್ರತಿಭೆಗಳಾದ ನೀವು ದೇಶಪ್ರೇಮದ ಪಾಠವನ್ನು ನೇತಾಜಿ ಯಿಂದ ಕಲಿಯಬೇಕು. ದೇಶ ಮೊದಲು ಎಂಬ ಸಿದ್ಧಾಂತವನ್ನು ಅಳವಡಿಸಿಕೊಳ್ಳಿ ಎಂದು ಪ್ರಧಾನಿ ಅವರು ತಿಳಿಸಿದ್ದಾರೆ.

ಬಾಲ ಪುರಸ್ಕಾರ ವಿಜೇತರಿಗೆ ಬ್ಲಾಕ್ ಚೈನ್ ತಂತ್ರಜ್ಞಾನ ಬಳಸಿ ಪ್ರಧಾನಿ ಮೋದಿ, ಡಿಜಿಟಲ್ ಪ್ರಶಸ್ತಿ ಪತ್ರಗಳನ್ನು ನೀಡಿದರು. ಜಾಗತಿಕ ಮಟ್ಟದಲ್ಲಿ ಭಾರತದ ಯುವ ಪ್ರತಿಭೆಗಳು ದೊಡ್ಡ ಹೆಸರು ಮಾಡಿವೆ. ಪ್ರತಿಷ್ಠಿತ ಕಂಪನಿಗಳ ಸಿಇಒ ಗಳು ಭಾರತೀಯರು ಎನ್ನುವುದು ಹೆಮ್ಮೆಯ ವಿಷಯ. ಆದರೆ ಈ ಕೀರ್ತಿ ಹೊರದೇಶಗಳಿಗೆ ಮಾತ್ರ ಸೀಮಿತವಾಗಿರಬಾರದು. ಇಲ್ಲಿ ಬೆಳೆಯುವ ಪ್ರತಿಭೆಗಳು ಇಲ್ಲಿಯೇ ನಿಂತು, ಏನನ್ನಾದರೂ ಸಾಧಿಸಬೇಕು. ಆ ಮೂಲಕ ದೇಶಿ ಆಂದೋಲನಕ್ಕೆ ಕೊಡುಗೆ ನೀಡಬೇಕು ಎಂದು ಸಲಹೆ ನೀಡಿದರು.

14 ಬಾಲಕಿಯರು ಸೇರಿದಂತೆ 29 ಮಕ್ಕಳಿಗೆ ರಾಷ್ಟ್ರೀಯ ಬಾಲ ಪುರಸ್ಕಾರ ನೀಡಲಾಯಿತು. ನಾವಿನ್ಯತೆ, ಪಾಂಡಿತ್ಯಪೂರ್ಣ ಸಾಧನೆಗಳು, ಕ್ರೀಡೆ, ಸಮಾಜ ಸೇವೆ ಮತ್ತು ಶೌರ್ಯ, ಕಲೆ-ಸಂಸ್ಕೃತಿ ಸೇರಿ ಆರು ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆಗೆ ಪುರಸ್ಕಾರ ನೀಡಲಾಯಿತು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N.Chennabasappa ಬನ್ನಿ ಪೂಜೆಗೆ ಶಾಸಕ ಚೆನ್ನಿ ಅವರಿಂದ ಪೂರ್ವೋಚಿತ ಸಿದ್ಧತೆ

S.N.Chennabasappa ನವರಾತ್ರಿ ಉತ್ಸವದ ಕಡೆಯ ದಿನದಂದು ನಗರದ ಅಲ್ಲಮಪ್ರಭು ಮೈದಾನದಲ್ಲಿ (ಫ್ರೀಡಂ...

Shree Sigandur Chowdeshwari Temple ಸಿಗಂದೂರು ದೇವಿ ವೈಭವದ ನವರಾತ್ರಿ ಉತ್ಸವ

Shree Sigandur Chowdeshwari Temple ಶ್ರೀ ಕ್ಷೇತ್ರ ಸಿಗಂದೂರಿನಲ್ಲಿ...

Madhu Bangarappa ಸಾರ್ವಜನಿಕರ ಅಹವಾಲುಗಳಿಗೆ ಸಕಾಲದಲ್ಲಿ ಅಗತ್ಯ ಸೌಲಭ್ಯ ಒದಗಿಸಿ- ಮಧು ಬಂಗಾರಪ್ಪ

Madhu Bangarappa ಸೌಲಭ್ಯ ಅರಸಿ ಕಚೇರಿಗೆ ಆಗಮಿಸುವ ಗ್ರಾಮೀಣ ಮತ್ತು...

CM Siddharamaiah ಚಾಮುಂಡೇಶ್ವರಿ ಆಶೀರ್ವಾದದಿಂದಲೇ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದೇನೆ- ಸಿದ್ಧರಾಮಯ್ಯ

CM Siddharamaiah ತಾಯಿ ಚಾಮುಂಡೇಶ್ವರಿ ಹಾಗೂ ಇಲ್ಲಿನ ಜನರ ಆಶೀರ್ವಾದದಿಂದಲೇ ಎರಡನೇ...