Sunday, December 7, 2025
Sunday, December 7, 2025

ಪರಪ್ಪನ ಅಗ್ರಹಾರದ ಜೈಲಿನಲ್ಲಿ ಅಕ್ರಮಗಳ ತನಿಖೆ : ಸಚಿವ ಆರಗ

Date:

ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿ ಅಕ್ರಮಗಳಿಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆ ನಡೆಸಲಾಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹೇಳಿದ್ದಾರೆ.

ನಾನು ಬೆಂಗಳೂರಿಗೆ ತೆರಳುತ್ತಿದ್ದೇನೆ. ಅಲ್ಲಿ ಕಾರಾಗೃಹದಲ್ಲಿನ ಅಕ್ರಮಗಳ ಕುರಿತು ಉನ್ನತಾಧಿಕಾರಿಗಳಿಂದ ವಿವರಣೆ ಪಡೆಯಲಾಗುವುದು. ಅನಂತರದಲ್ಲಿ ಯಾವ ಮಟ್ಟದ ತನಿಖೆ ನಡೆಸಬೇಕೆಂಬುವುದನ್ನು ನಿರ್ಧರಿಸಲಾಗುತ್ತದೆ. ಕಾರಾಗೃಹದಲ್ಲಿ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆರಗ ಜ್ಞಾನೇಂದ್ರ ಅವರು ತಿಳಿಸಿದ್ದಾರೆ.

ಸಂಪುಟ ಪುನಾರಚನೆ ಸಿಎಂಗೆ ಬಿಟ್ಟ ವಿಚಾರ. ಅತೃಪ್ತಿ ಯಾರಲ್ಲೂ ಇಲ್ಲ. ಹಿರಿಯ ಶಾಸಕರು ಒಂದೆಡೆ ಸೇರಿ ಮಾತುಕತೆ ನಡೆಸುವುದಕ್ಕೆ ವಿಶೇಷ ಅರ್ಥ ಕಲ್ಪಿಸಬೇಕಾಗಿಲ್ಲ. ನಾವೆಲ್ಲಾ ಹಲವು ಬಾರಿ ಸೇರಿ ಮಾತನಾಡಿದ್ದೇವೆ. ಚಿಕ್ಕಮಗಳೂರು ಜಿಲ್ಲೆ ಉಸ್ತುವಾರಿಯಲ್ಲಿ ಆಸಕ್ತಿಯಿತ್ತು. ಆದರೆ ಮುಖ್ಯಮಂತ್ರಿ ಅವರು ನನ್ನ ಮೇಲೆ ಹೆಚ್ಚಿನ ವಿಶ್ವಾಸವಿಟ್ಟು ತುಮಕೂರು ಜಿಲ್ಲೆಯ ಉಸ್ತುವಾರಿ ವಹಿಸಿದ್ದಾರೆ. ಬಯಲುಸೀಮೆ ಜಿಲ್ಲೆಯಲ್ಲಿ ಕೆಲಸ ಮಾಡಲು ತೊಂದರೆ ಇಲ್ಲ ಎಂದು ಆರಗ ಜ್ಞಾನೇಂದ್ರ ಅವರು ಮಾಧ್ಯಮ ಮಿತ್ರರಿಗೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...