Friday, October 4, 2024
Friday, October 4, 2024

ಗ್ರಾಮೀಣರ ಮನೆ ಬಾಗಿಲಿಗೆ-ಗ್ರಾಮ ಒನ್

Date:

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸರ್ಕಾರದ ನಾನಾ ಸೇವಾ ಸೌಲಭ್ಯ ಪ್ರಮಾಣಪತ್ರಕ್ಕಾಗಿ ಗ್ರಾಮೀಣ ಜನ ಜಿಲ್ಲಾ ತಾಲೂಕು ಕಚೇರಿಗಳಿಗೆ ಓಡಾಡುವ ಬದಲಿಗೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸುಲಭವಾಗಿ ಪಡೆಯುವಂತಹ ‘ಗ್ರಾಮ ಒನ್’ ಸೇವೆಗೆ ಚಾಲನೆ ನೀಡಿದರು.

ಈ ಸೇವೆಗೆ ಏಕಕಾಲಕ್ಕೆ ಸದ್ಯ 12 ಜಿಲ್ಲೆಗಳ 3024 ಪಂಚಾಯತಿಗಳಲ್ಲಿ ಚಾಲನೆ ನೀಡಲಾಗಿದೆ. ಮಾರ್ಚ್ ಅಂತ್ಯದೊಳಗೆ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಕೇಂದ್ರ ತೆರೆಯಲು ಸರ್ಕಾರ ಮುಂದಾಗಿದೆ.

ಗ್ರಾಮ ಒನ್ ಸೇವೆಯಲ್ಲಿ ಗ್ರಾಮೀಣ ಭಾಗದ ಜನರಿಗೆ ಸೇವಾ ಸಿಂಧುವಿನಲ್ಲಿ ಬರುವ ಎಲ್ಲಾ 750 ಸೇವೆಗಳ ಸೌಲಭ್ಯ ಲಭ್ಯವಿದೆ. ಮಾಹಿತಿ ಹಕ್ಕು ಸೇವೆಗಳು, ಸಕಾಲ ಸೇವೆಗಳು, ಸಿಎಂ ಪರಿಹಾರ ನಿಧಿ, ಸಣ್ಣ ಬ್ಯಾಂಕಿಂಗ್ ಸೇವೆಗಳು ‘ಗ್ರಾಮ ಒನ್’ ಸೇವಾ ಸೌಲಭ್ಯ ಪಡೆಯಬಹುದಾಗಿದೆ.

‘ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಪ್ರಜಾಸತಾತ್ಮಕ ಒಕ್ಕೂಟ ಗಣರಾಜ್ಯ ಸ್ಥಾಪನೆಯಾಗಬೇಕು ಎಂಬ ಕನಸಿನೊಂದಿಗೆ ಡಾ.ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನ ರಚಿಸಿದ್ದಾರೆ. ಗಣರಾಜ್ಯೋತ್ಸವ ದಿನವನ್ನು ಕರ್ತವ್ಯಗಳ ಮೂಲಕ ನಮ್ಮ ಹಕ್ಕುಗಳಿಗೆ ಅರ್ಹತೆ ಪಡೆಯುವ ದಿನ ಎಂದು ಭಾವಿಸಿದ್ದೇನೆ. ಹಾಗಾಗಿ ಜನರಿಂದ, ಜನರಿಗಾಗಿ ಇರುವ ಸರ್ಕಾರ ಜನರಿಗೆ ಸ್ಪಂದಿಸಬೇಕೆಂಬ ಚಿಂತನೆಯಿಂದ ಗ್ರಾಮ ಒನ್ ಸೇವೆಗೆ ಚಾಲನೆ’ ನೀಡಲಾಗಿದೆ ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Backward Classes Welfare Department ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶಾತಿಗೆ ಅರ್ಜಿ ಆಹ್ವಾನ

Backward Classes Welfare Department ಶಿವಮೊಗ್ಗ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ...

Klive Special Article ನವರಾತ್ರಿ ಎರಡನೇ ದಿನ.ದೇವಿಯ ಶ್ರೀಬ್ರಹ್ಮಚಾರಿಣಿ ರೂಪದಲ್ಲಿ ಆರಾಧನೆ. ...

Klive Special Article "ದಧಾನಾಂ ಕರಪದ್ಮಾಭ್ಯಾಂಅಕ್ಷಮಾಲಾ ಕಮಂಡಲೂ/ದೇವಿ ಪ್ರಸೀದತು ಮಯಿಬ್ರಹ್ಮಚಾರಿಣ್ಯನುತ್ತಮಾ//ಮೊದಲನೆಯ ದಿನ...

Jawahar Navodaya Vidyalaya ಗಾಜನೂರಿನ ನವೋದಯ ಶಾಲಾ ಪ್ರವೇಶಾತಿ 2025-26 ಪರೀಕ್ಷೆಗೆ ಆನ್ ಲೈನ್ ಅರ್ಜಿ ಆಹ್ವಾನ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯವು 2025-26ನೇ ಸಾಲಿಗೆ 9...