Sunday, August 23, 2026
Sunday, August 23, 2026

ಗ್ರಾಮೀಣರ ಮನೆ ಬಾಗಿಲಿಗೆ-ಗ್ರಾಮ ಒನ್

Date:

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸರ್ಕಾರದ ನಾನಾ ಸೇವಾ ಸೌಲಭ್ಯ ಪ್ರಮಾಣಪತ್ರಕ್ಕಾಗಿ ಗ್ರಾಮೀಣ ಜನ ಜಿಲ್ಲಾ ತಾಲೂಕು ಕಚೇರಿಗಳಿಗೆ ಓಡಾಡುವ ಬದಲಿಗೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸುಲಭವಾಗಿ ಪಡೆಯುವಂತಹ ‘ಗ್ರಾಮ ಒನ್’ ಸೇವೆಗೆ ಚಾಲನೆ ನೀಡಿದರು.

ಈ ಸೇವೆಗೆ ಏಕಕಾಲಕ್ಕೆ ಸದ್ಯ 12 ಜಿಲ್ಲೆಗಳ 3024 ಪಂಚಾಯತಿಗಳಲ್ಲಿ ಚಾಲನೆ ನೀಡಲಾಗಿದೆ. ಮಾರ್ಚ್ ಅಂತ್ಯದೊಳಗೆ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಕೇಂದ್ರ ತೆರೆಯಲು ಸರ್ಕಾರ ಮುಂದಾಗಿದೆ.

ಗ್ರಾಮ ಒನ್ ಸೇವೆಯಲ್ಲಿ ಗ್ರಾಮೀಣ ಭಾಗದ ಜನರಿಗೆ ಸೇವಾ ಸಿಂಧುವಿನಲ್ಲಿ ಬರುವ ಎಲ್ಲಾ 750 ಸೇವೆಗಳ ಸೌಲಭ್ಯ ಲಭ್ಯವಿದೆ. ಮಾಹಿತಿ ಹಕ್ಕು ಸೇವೆಗಳು, ಸಕಾಲ ಸೇವೆಗಳು, ಸಿಎಂ ಪರಿಹಾರ ನಿಧಿ, ಸಣ್ಣ ಬ್ಯಾಂಕಿಂಗ್ ಸೇವೆಗಳು ‘ಗ್ರಾಮ ಒನ್’ ಸೇವಾ ಸೌಲಭ್ಯ ಪಡೆಯಬಹುದಾಗಿದೆ.

‘ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಪ್ರಜಾಸತಾತ್ಮಕ ಒಕ್ಕೂಟ ಗಣರಾಜ್ಯ ಸ್ಥಾಪನೆಯಾಗಬೇಕು ಎಂಬ ಕನಸಿನೊಂದಿಗೆ ಡಾ.ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನ ರಚಿಸಿದ್ದಾರೆ. ಗಣರಾಜ್ಯೋತ್ಸವ ದಿನವನ್ನು ಕರ್ತವ್ಯಗಳ ಮೂಲಕ ನಮ್ಮ ಹಕ್ಕುಗಳಿಗೆ ಅರ್ಹತೆ ಪಡೆಯುವ ದಿನ ಎಂದು ಭಾವಿಸಿದ್ದೇನೆ. ಹಾಗಾಗಿ ಜನರಿಂದ, ಜನರಿಗಾಗಿ ಇರುವ ಸರ್ಕಾರ ಜನರಿಗೆ ಸ್ಪಂದಿಸಬೇಕೆಂಬ ಚಿಂತನೆಯಿಂದ ಗ್ರಾಮ ಒನ್ ಸೇವೆಗೆ ಚಾಲನೆ’ ನೀಡಲಾಗಿದೆ ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಮುಂದಿನ ಎರಡುವರ್ಷಗಳಲ್ಲಿ 500 ಕೆಪಿಎಸ್ ಶಾಲೆಗಳ ನಿರ್ಮಾಣದ ಉದ್ದೇಶವಿದೆ- ಮಧು ಬಂಗಾರಪ್ಪ.

Madhu Bangarappa ರಾಜ್ಯದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಪಡೆಯುತ್ತಿರುವ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ...

Breaking News ತೀರ್ಥಹಳ್ಳಿಯ ಘಂಟೆಹಕ್ಲು ಬಳಿ ಬಸ್ ಮತ್ತು ಗೂಡ್ಸ್ ವಾಹನ ಢಿಕ್ಕಿ:ಚಾಲಕ ಗಾಯಾಳು

Breaking News ತೀರ್ಥಹಳ್ಳಿ - ಉಡುಪಿ ಮಾರ್ಗ ಮಧ್ಯೆಯ ಘಂಟೆಹಕ್ಲು...

B.Y. Raghavendra ಶಿವಮೊಗ್ಗ ಗ್ರಾಮಾಂತರ ರೈತರ ನೀರಿನ ಬವಣೆಗೆ ದೀರ್ಘಕಾಲೀನ ಪರಿಹಾರ ಕಲ್ಪಿಸಿ- ಬಿ.ವೈ.ರಾಘವೇಂದ್ರ.

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ವೈ.ರಾಘವೇಂದ್ರ ಅವರ ನೇತೃತ್ವದ...