Monday, March 16, 2026
Monday, March 16, 2026

ಗ್ರಾಮೀಣರ ಮನೆ ಬಾಗಿಲಿಗೆ-ಗ್ರಾಮ ಒನ್

Date:

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸರ್ಕಾರದ ನಾನಾ ಸೇವಾ ಸೌಲಭ್ಯ ಪ್ರಮಾಣಪತ್ರಕ್ಕಾಗಿ ಗ್ರಾಮೀಣ ಜನ ಜಿಲ್ಲಾ ತಾಲೂಕು ಕಚೇರಿಗಳಿಗೆ ಓಡಾಡುವ ಬದಲಿಗೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸುಲಭವಾಗಿ ಪಡೆಯುವಂತಹ ‘ಗ್ರಾಮ ಒನ್’ ಸೇವೆಗೆ ಚಾಲನೆ ನೀಡಿದರು.

ಈ ಸೇವೆಗೆ ಏಕಕಾಲಕ್ಕೆ ಸದ್ಯ 12 ಜಿಲ್ಲೆಗಳ 3024 ಪಂಚಾಯತಿಗಳಲ್ಲಿ ಚಾಲನೆ ನೀಡಲಾಗಿದೆ. ಮಾರ್ಚ್ ಅಂತ್ಯದೊಳಗೆ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಕೇಂದ್ರ ತೆರೆಯಲು ಸರ್ಕಾರ ಮುಂದಾಗಿದೆ.

ಗ್ರಾಮ ಒನ್ ಸೇವೆಯಲ್ಲಿ ಗ್ರಾಮೀಣ ಭಾಗದ ಜನರಿಗೆ ಸೇವಾ ಸಿಂಧುವಿನಲ್ಲಿ ಬರುವ ಎಲ್ಲಾ 750 ಸೇವೆಗಳ ಸೌಲಭ್ಯ ಲಭ್ಯವಿದೆ. ಮಾಹಿತಿ ಹಕ್ಕು ಸೇವೆಗಳು, ಸಕಾಲ ಸೇವೆಗಳು, ಸಿಎಂ ಪರಿಹಾರ ನಿಧಿ, ಸಣ್ಣ ಬ್ಯಾಂಕಿಂಗ್ ಸೇವೆಗಳು ‘ಗ್ರಾಮ ಒನ್’ ಸೇವಾ ಸೌಲಭ್ಯ ಪಡೆಯಬಹುದಾಗಿದೆ.

‘ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಪ್ರಜಾಸತಾತ್ಮಕ ಒಕ್ಕೂಟ ಗಣರಾಜ್ಯ ಸ್ಥಾಪನೆಯಾಗಬೇಕು ಎಂಬ ಕನಸಿನೊಂದಿಗೆ ಡಾ.ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನ ರಚಿಸಿದ್ದಾರೆ. ಗಣರಾಜ್ಯೋತ್ಸವ ದಿನವನ್ನು ಕರ್ತವ್ಯಗಳ ಮೂಲಕ ನಮ್ಮ ಹಕ್ಕುಗಳಿಗೆ ಅರ್ಹತೆ ಪಡೆಯುವ ದಿನ ಎಂದು ಭಾವಿಸಿದ್ದೇನೆ. ಹಾಗಾಗಿ ಜನರಿಂದ, ಜನರಿಗಾಗಿ ಇರುವ ಸರ್ಕಾರ ಜನರಿಗೆ ಸ್ಪಂದಿಸಬೇಕೆಂಬ ಚಿಂತನೆಯಿಂದ ಗ್ರಾಮ ಒನ್ ಸೇವೆಗೆ ಚಾಲನೆ’ ನೀಡಲಾಗಿದೆ ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಕೇಂದ್ರ ಗೃಹ ವ್ಯವಹಾರಗಳ ಸಂಸದೀಯ ಸಭೆಯಲ್ಲಿ ಸಂಸದ ಬಿ.ವೈ.ರಾಘವೇಂದ್ರ ಭಾಗಿ

B.Y. Raghavendra ನವದೆಹಲಿಯಲ್ಲಿ ನಡೆದ ಕೇಂದ್ರ ಗೃಹ ಇಲಾಖೆಗೆ ಸಂಬಂಧಿಸಿದ ಗೃಹ...

Klive Special Article ಯುಗಾದಿ…ಒಂದಿಷ್ಟು ಮಾಹಿತಿ- ಡಾ.ಹೆಚ್.ಪದ್ಮನಾಭ ಅಡಿಗ. ಶಿವಮೊಗ್ಗ

Klive Special Article ಬ್ರಹ್ಮನ ಸೃಷ್ಟಿಯ ಪ್ರಾರಂಭದದಿನ, ಬ್ರಹ್ಮನ ಪೂಜೆಯೇ ವಿಶೇಷ.ಈ...